
ತಿರುವನಂತಪುರಂ(ನ.05): ರಾಜ್ಯದಲ್ಲಿ ಯಾವುದೇ ತನಿಖೆಗೆ ಮುನ್ನ ಪೂರ್ವಾನುಮತಿ ಬೇಕಿಲ್ಲ ಎಂದು ಸಿಬಿಐಗೆ ನೀಡಿದ್ದ ವಿನಾಯ್ತಿಯನ್ನು ಕೇರಳ ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ. ಬಿಜೆಪಿಯೇತರ ರಾಜ್ಯಗಳಾದ ಮಹಾರಾಷ್ಟ್ರ, ರಾಜಸ್ಥಾನ, ಪಶ್ಚಿಮ ಬಂಗಾಳ ರಾಜ್ಯಗಳು ಇಂಥ ನಿರ್ಧಾರ ಕೈಗೊಂಡ ಬೆನ್ನಲ್ಲೇ ಕೇರಳ ಸರ್ಕಾರವೂ ಅದೇ ಹಾದಿ ಹಿಡಿದಿದೆ.
ಹೀಗಾಗಿ ರಾಜ್ಯದಲ್ಲಿ ಸಿಬಿಐ ಯಾವುದೇ ಪ್ರಕರಣವನ್ನು ದಾಖಲಿಸುವುದಕ್ಕೂ ಮುನ್ನ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಕೇರಳ ಸರ್ಕಾರದ ಮಹತ್ವಾಕಾಂಕ್ಷಿ ಕೇರಳ ಸರ್ಕಾರ ಮಹತ್ವಾಕಾಂಕ್ಷಿ ಲೈಫ್ ಮಿಷನ್ ಗೃಹ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿದ್ದೇ ಕೇರಳ ಸರ್ಕಾರದ ಈ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ.
]ರಾಜ್ಯ ಸರ್ಕಾರದ ಯೋಜನೆಯನ್ನು ತನಿಖೆ ನಡೆಸಿದ ಸಿಬಿಐ ಕ್ರಮದ ವಿರುದ್ಧ ಕೇರಳ ಸರ್ಕಾರ ಹೈಕೋರ್ಟ್ ಮೊರೆ ಹೋಗಿದ್ದು, ಕೋರ್ಟ್ ಸಿಬಿಐ ತನಿಖೆಗೆ ಎರಡು ತಿಂಗಳ ತಡೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ