ಅಂಧನಿಗಾಗಿ ಓಡೋಡಿ ಬಂದು ಬಸ್ ನಿಲ್ಲಿಸಿದ ಮಹಿಳೆ, ಮಾನವೀಯತೆಗೆ ಸಲಾಂ ಎಂದ ಜನ!

Suvarna News   | Asianet News
Published : Jul 09, 2020, 07:34 PM ISTUpdated : Jul 09, 2020, 07:35 PM IST
ಅಂಧನಿಗಾಗಿ ಓಡೋಡಿ ಬಂದು ಬಸ್ ನಿಲ್ಲಿಸಿದ ಮಹಿಳೆ, ಮಾನವೀಯತೆಗೆ ಸಲಾಂ ಎಂದ ಜನ!

ಸಾರಾಂಶ

ನಿಲ್ದಾಣದಿಂದ ಬಸ್ ಹೊರಟೇ ಬಿಟ್ಟಿತು. ತಕ್ಷಣವೇ ಮಹಿಳೆಯೊಬ್ಬರು ಓಡೋಡಿ ಬಂದು ಬಸ್ ನಿಲ್ಲಿಸಿ ಅದೆ ವೇಗದಲ್ಲಿ ವಾಪಸ್ ತೆರಳಿ ಅಂಧರೊಬ್ಬರನ್ನು ಕೈಹಿಡು ಬಸ್‌ನಲ್ಲಿ ಕೂರಿಸಿ ಮಾನವೀಯತೆ ಮೆರೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಕೇರಳ(ಜು.09): ಕೊರೋನಾ ವೈರಸ್ ಅಟ್ಟಹಾಸದಲ್ಲಿ ಮಾನವೀಯತೆ ಮುಖಗಳ ಪರಿಚಯ ಬಹುತೇಕರಿಗೆ ಆಗಿದೆ. ಹಲವರು ಸಂಕಷ್ಟದಲ್ಲಿದ್ದವರಿಗೆ ನೆರವಾಗಿದ್ದಾರೆ. ತಮ್ಮ ಕೈಲಾದ ಸಹಾಯ ನೀಡಿ ಮಾನವೀಯತೆ ಮೆರೆದಿದ್ದಾರೆ. ಇದೀಗ ಕೇರಳದಲ್ಲಿ ಮಹಿಳೆಯೊಬ್ಬರ ವಿಡಿಯೋ ವೈರಲ್ ಆಗಿದೆ.

ಗಾಯಗೊಂಡು ಖುದ್ದು ಆಸ್ಪತ್ರೆಗೆ ಬಂದ ಕೋತಿ, ಹಠ ಹಿಡಿದು ಚಿಕಿತ್ಸೆ ಪಡೆದೇ ಹೋಯ್ತು!.

ಅಂಧರೊಬ್ಬರು ಬಸ್ ಏರಲು ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಬಸ್ ಹೊರಡಲು ಆರಂಭಿಸಿದೆ. ಈ ವೇಳೆ ಮಹಿಳೆಯೊಬ್ಬರು ಓಡೋಡಿ ಬಂದು ಬಸ್ ನಿಲ್ಲಿಸಿದ್ದಾರೆ. ಬಳಿಕ ಅದೇ ವೇಗದಲ್ಲಿ ಮತ್ತೆ ಅಂಧರ ಬಳಿ ತೆರಳಿ ಅವರನ್ನು ಕೈಹಿಡಿದು ಕರೆದುಕೊಂಡು ಬಂದಿದ್ದಾರೆ. ಬಳಿಕ ಬಸ್ ಹತ್ತಿಸಿ ಕಳುಹಿಸಿಕೊಟ್ಟಿದ್ದಾರೆ. ಮಹಿಳೆಯ ತೋರಿದ ಮಾನವೀಯತೆ ವಿಡಿಯೋ ವೈರಲ್ ಆಗಿದೆ.

ಕ್ವಾರಂಟೈನ್‌ನಲ್ಲಿ ಸಿಕ್ಕ ವಿಶೇಷ ಚೇತನ ಸ್ನೇಹಿತನ ಟ್ರೈಸಿಕಲ್‌ 350 ಕಿ.ಮೀ. ತಳ್ಳಿದ ಯುವಕ!.

ಮಾನವೀಯತೆ ತೋರಿದ ಮಹಿಳೆ ತಿರುವಲ್ಲದಲ್ಲಿ ಸೇಲ್ಸ್ ವುವೆನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುಪ್ರಿಯಾ ಎಂದು ಗುರುತಿಸಲಾಗಿದೆ. ಕೇರಳ ಐಪಿಎಲ್ ಅಧಿಕಾರಿ ವಿಜಯ್ ಕುಮಾರ್ ಮಹಿಳೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಸ್ ನಿಲ್ದಾಣದ ಪಕ್ಕದ ಕಟ್ಟದಿಂದ ಮಹಿಳೆ ಓಡೋಡಿ ಬರುತ್ತಿರುವುದನ್ನು ಗಮನಿಸಿದ ವ್ಯಕ್ತಿ ವಿಡಿಯೋ ಸೆರೆ ಹಿಡಿದ್ದಾರೆ. ಮಹಿಳೆಯ ಕಾರ್ಯಕ್ಕೆ ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?