
ತಿರುವನಂತಪುರಂ[ನ.30]: ಆರೋಪಿಗೆ ಜಾಮೀನು ನೀಡಿಲ್ಲವೆಂದು ಆಕ್ರೋಶಗೊಂಡ ವಕೀಲರ ಗುಂಪೊಂದು ಮಹಿಳಾ ನ್ಯಾಯಾಧೀಶರನ್ನು ಕೊಠಡಿಯೊಳಗೆ ಕೂಡಿಹಾಕಿ, ಅವರಿಗೆ ಬೆದರಿಕೆ ಹಾಕಿದ ಆಘಾತಕಾರಿ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಸ್ಥಳೀಯ ಬಾರ್ ಅಸೋಸಿಯೇಷನ್ನ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ 12 ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನ.27ರಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕನೊಬ್ಬನ ಜಾಮೀನು ಅರ್ಜಿ ವಿಚಾರಣೆ ಇತ್ತು. ಈ ವೇಳೆ ಮಹಿಳಾ ನ್ಯಾಯಾಧೀಶರಾದ ದೀಪಾ ಮೋಹನ್, ಆರೋಪಿಗೆ ಜಾಮೀನು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ವಕೀಲರ ಗುಂಪು ಜಡ್ಜ್ ವಿಚಾರಣೆ ನಡೆಸುತ್ತಿದ್ದ ಕೋಣೆಯ ಬಾಗಿಲು ಹಾಕಿ ನೀವು ಹೇಗೆ ಹೊರಗೆ ಬರುತ್ತೀರೋ ನೋಡುತ್ತೀವಿ ಎಂದು ಬೆದರಿಕೆ ಹಾಕಿದೆ. ಜೊತೆಗೆ ನೀವು ಮಹಿಳೆಯಾಗಿದ್ದಕ್ಕೆ ಸುಮ್ಮನೆ ಬಿಟ್ಟಿದ್ದೇವೆ. ಇಲ್ಲದೇ ಹೋದಲ್ಲಿ ಕೊಠಡಿಯಿಂದ ಹೊರಗೆ ಎಳೆದು ಹೊಡೆದು ಹಾಕುತ್ತಿದ್ದೆವು ಎಂದೆಲ್ಲಾ ಬೆದರಿಕೆ ಹಾಕಿ ಅವಮಾನ ಮಾಡಿದ್ದಾರೆ.
ಘಟನೆ ಸಂಬಂಧ ನ್ಯಾಯಾಧೀಶರು ದೂರು ನೀಡಿದ್ದಾರೆ. ಜೊತೆಗೆ ಕೇರಳ ಹೈಕೋರ್ಟ್ ಕೂಡಾ ಮಧ್ಯಪ್ರವೇಶ ಮಾಡಿ, ಆರೋಪಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ