
ಇಸ್ಲೇಲ್(ಮೇ.12) ಪ್ಯಾಲೇಸ್ತೀನ್ದಲ್ಲಿನ ಗಾಜಾ ಮೂಲದ ಭಯೋತ್ಪಾದಕ ಸಂಘಟನೆಯು ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಭಾರತೀಯ ಮಹಿಳೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್, ದಕ್ಷಿಣ ಇಸ್ರೇಲ್ನ ಕರಾವಳಿ ನಗರವಾದ ಅಶ್ಕೆಲೋನ್ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು.
ಗಾಜಾ ಮೂಲದ ಉಗ್ರರು ಸೋಮವಾರ ಸಂಜೆಯಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್ ದಾಳಿ ನಡೆಸಿದ್ದು, ಮಂಗಳವಾರ ರಾತ್ರಿ 9 ಗಂಟೆಯ ವರೆಗೆ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದಿ ಉಗ್ರರ ನೆಲೆ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಅರಬ್-ಯಹೂದಿ ದೇಶಗಳಲ್ಲಿ ಭಾರಿ ಹಿಂಸಾಚಾರ ಹಾಗೂ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲಾಡ್ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಭಾರತೀಯ ಮೂಲದ ಮಹಿಳೆ ಕಳೆದ ಏಳು ವರ್ಷಗಳಿಂದ ಇಸ್ರೇಲ್ನಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಕೇರಳದಲ್ಲಿರುವ ಪತಿ ಹಾಗೂ ಏಳು ವರ್ಷದ ಮಗನನ್ನು ಅಗಲಿದ್ದಾರೆ.
ಉಗ್ರರು ನಡೆಸಿದ ರಾಕೆಟ್ ದಾಳಿಯು ನೇರವಾಗಿ ವೃದ್ಧೆಯ ಮನೆಗೆ ಅಪ್ಪಳಿಸಿತ್ತು. ಈ ವೇಳೆ 80 ವರ್ಷದ ವೃದ್ಧೆಯ ಆರೈಕೆ ಮಾಡುತ್ತಿದ್ದ ಕೇರಳ ಮೂಲದ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸಿದೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಭವಿಸಿದಾಗ ಸೌಮ್ಯ ತನ್ನ ಪತಿ ಸಂತೋಷ್ ಅವರೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡುತ್ತಿದ್ದರು ಎಂದು ಕೇರಳದಲ್ಲಿರುವ ಕುಟುಂಬ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ