ರೈತರ ಚಕ್ಕಾ ಜಾಮ್ ಪ್ರತಿಭಟನೆ ನಡುವೆ ಹಾರಾಡಿತಾ ಖಲಿಸ್ತಾನ್ ಭಿಂದ್ರನ್‌ವಾಲೆ ಧ್ವಜ?

Published : Feb 06, 2021, 08:21 PM IST
ರೈತರ ಚಕ್ಕಾ ಜಾಮ್ ಪ್ರತಿಭಟನೆ ನಡುವೆ ಹಾರಾಡಿತಾ ಖಲಿಸ್ತಾನ್ ಭಿಂದ್ರನ್‌ವಾಲೆ ಧ್ವಜ?

ಸಾರಾಂಶ

ರೈತರ ಚಕ್ಕಾ ಜಾಮ್ ಪ್ರತಿಭಟನೆ ಅಂತ್ಯಗೊಂಡಿದೆ. ಬಹುತೇಕ ಕಡೆ ಶಾಂತಿಯುತವಾಗಿ ಪ್ರತಿಭಟನೆ ನಡೆದಿದೆ. ಆದರೆ ಇದೇ ಚಕ್ಕಾ ಜಾಮ್ ಪ್ರತಿಭಟನೆಯಲ್ಲಿ ಖಲಿಸ್ತಾನ ಉಗ್ರ ಭಿಂದ್ರನ್‌ವಾಲೆ ಧ್ವಜ ಹಾರಾಡಿದೆ. ಈ ಕುರಿತು ಇದೀಗ ಸಮರ ಆರಂಭಗೊಂಡಿದೆ  

ನವದೆಹಲಿ(ಫೆ.06): ರೈತ ಸಂಘಟನೆಗಳು ಕರೆ ನೀಡಿದ ಚಕ್ಕಾ ಜಾಮ್ ಪ್ರತಿಭಟನೆ ಅಂತ್ಯಗೊಂಡಿದೆ. ಇದೀಗ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದ್ದು, ಮತ್ತೊಂದು ಹೋರಾಟಕ್ಕೆ ಸಂಘಟನೆಗಳು ಸಜ್ಜಾಗುತ್ತಿದೆ. ಜನವರಿ 26ರ ಟ್ರಾಕ್ಟರ್ ಪರೇಡ್ ಪ್ರತಿಭಟನೆಗೆ ಹೋಲಿಸಿದರೆ, ಬಹುತೇಕ ಶಾಂತಿಯುತವಾಗಿದ್ದ ರೈತ ಪ್ರತಿಭಟನೆ ನಡುವೆ ಖಲಿಸ್ತಾನಿ ಉಗ್ರ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಧ್ವಜ ಹಾರಾಡಿದೆ.

ರೈತ ಪ್ರತಿಭಟನೆ ನಡುವೆ ಸೇರಿಕೊಂಡ ಖಲಿಸ್ತಾನಕ್ಕೆ ಪಾಕ್ ಬಹಿರಂಗ ಬೆಂಬಲ; ವೈರಲ್ ವಿಡಿಯೋ!

ಪಂಜಾಬ್‌ನ ಲೂಧಿಯಾನದಲ್ಲಿ ನಡೆದ ಚಕ್ಕಾ ಜಾಮ್ ಪ್ರತಿಭಟನೆಯಲ್ಲಿ ಖಲಿಸ್ತಾನಿ ಉಗ್ರ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಭಾವಚಿತ್ರದ ಧ್ವಜ ಹಾರಾಡಿದೆ. ಟ್ರಾಕ್ಟರ್ ಮುಂಭಾಗದಲ್ಲಿ ಕಟ್ಟಿದ ಈ ಧ್ವಜದ ವಿಡಿಯೋವನ್ನು ಶೇರ್ ಮಾಡಿರುವ ಬಿಜೆಪಿ ವಕ್ತಾರ ಗೌರವ ಭಾಟಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಪಂಜಾಬ್‌ನಲ್ಲಿ ಕಾನೂನು ಸುವ್ಯವಸ್ಥೆ ಎತ್ತ ಸಾಗುತ್ತಿದೆ ಎಂದು ಗೌರವ್ ಭಾಟಿಯಾ, ಮುಖ್ಯಮಂತ್ರಿ ಅಮರಿಂದರ್ ಸಿಂಗ್‌ಗೆ ಪ್ರಶ್ನಿಸಿದ್ದಾರೆ. ರೈತ ಸಂಘಟನಗಳ ಹೋರಾಟವನ್ನು ಖಲಿಸ್ತಾನ್ ಹೈಜಾಕ್ ಮಾಡಿದೆ ಎಂಬ ಆರೋಪಗಳು ಕೇಳಿಬರುತ್ತಿದೆ. ಇದೀಗ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಖಲಿಸ್ತಾನ ವಿರುದ್ಧ ತಿರಂಗ ರ‍್ಯಾಲಿ; ಭಾರತಕ್ಕೆ ಕೆನಡಾ ಸಿಖ್ ಸಮುದಾಯದ ಬೆಂಬಲ!.

1984ರಲ್ಲಿ ಇಂದಿರಾ ಗಾಂಧಿ ಸರ್ಕಾರ ನಡೆಸಿದ ಆಪರೇಶನ್ ಬ್ಲೂ ಸ್ಟಾರ್ ದಾಳಿಯಲ್ಲಿ ಇದೇ ಖಲಿಸ್ತಾನಿ ಉಗ್ರ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯನ್ನು ಹತ್ಯೆ ಮಾಡಲಾಗಿತ್ತು. ಅಮೃತಸರ ಗೋಲ್ಡನ್ ಟೆಂಪಲ್ ಒಳಗಡೆ ಅಡಗಿ ಕುಳಿತಿದ್ದ ಖಲಿಸ್ತಾನ ಉಗ್ರ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಹಾಗೂ ಇತರ ಉಗ್ರರನ್ನು ಹತ್ಯೆ ಮಾಡಲಾಗಿತ್ತು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ