ಕೆನಡಾದಲ್ಲಿ 55 ಅಡಿಯ ಹನುಮಾನ್ ಪ್ರತಿಮೆಗೆ ಖಲಿಸ್ತಾನಿಗಳ ತೀವ್ರ ವಿರೋಧ: ಬಿಗಿ ಭದ್ರತೆ

Published : Dec 20, 2023, 09:02 AM IST
ಕೆನಡಾದಲ್ಲಿ 55 ಅಡಿಯ ಹನುಮಾನ್ ಪ್ರತಿಮೆಗೆ ಖಲಿಸ್ತಾನಿಗಳ ತೀವ್ರ ವಿರೋಧ: ಬಿಗಿ ಭದ್ರತೆ

ಸಾರಾಂಶ

 ಕೆನಡಾದ ಟೊರೆಂಟೋದ ಬ್ರಾಂಪ್ಟಾನ್‌ನಲ್ಲಿ 55 ಅಡಿ ಎತ್ತರದ ಬೃಹತ್‌ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಇದಕ್ಕೆ ಸ್ಥಳೀಯ ಖಲಿಸ್ತಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. 

ಟೊರೊಂಟೋ: ಕೆನಡಾದ ಟೊರೆಂಟೋದ ಬ್ರಾಂಪ್ಟಾನ್‌ನಲ್ಲಿ 55 ಅಡಿ ಎತ್ತರದ ಬೃಹತ್‌ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಇದಕ್ಕೆ ಸ್ಥಳೀಯ ಖಲಿಸ್ತಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಜಾಲತಾಣಗಳಲ್ಲಿ ಹನುಮನ ಪ್ರತಿಮೆ ನಿರ್ಮಾಣದ ವಿರುದ್ಧ ಖಲಿಸ್ತಾನಿಗಳು ಪೋಸ್ಟರ್‌ ಮೂಲಕ ಕಿಡಿಕಾರಿರುವ ಬೆನ್ನಲ್ಲೇ ವಿಗ್ರಹ ಮತ್ತು ದೇವಸ್ಥಾನಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ಬ್ರಾಂಪ್ಟಾನ್‌ನ ಹಿಂದೂ ಮಹಾಸಭಾ ಸಮಿತಿಯು ಹನುಮನ ದೇವಸ್ಥಾನ (Hanuman Temple) ಮತ್ತು ಎತ್ತರದ ಪ್ರತಿಮೆಯನ್ನು ನಿರ್ಮಿಸುತ್ತಿದ್ದು, ಈಗಾಗಲೇ ಪ್ರತಿಮೆ ನಿರ್ಮಾಣವು ಶೇ.95ರಷ್ಟು ಪೂರ್ಣಗೊಂಡಿದೆ. 2024ರ ಏಪ್ರಿಲ್‌ನಲ್ಲಿ ಹನುಮ ಜಯಂತಿಯಂದು (Hanuman Jayanti) ಇದನ್ನು ಉದ್ಘಾಟಿಸಲು ಯೋಜಿಸಲಾಗಿದೆ. ಆದರೆ ಪ್ರತಿಮೆ ನಿರ್ಮಾಣಗೊಳ್ಳುತ್ತಿರುವ ಈ ಸ್ಥಳವು ಖಲಿಸ್ತಾನ್‌ ಪರ ಚಟುವಟಿಕೆಗಳಿಗೆ ಹಾಟ್‌ಸ್ಪಾಟ್‌ ಎನಿಸಿಕೊಂಡಿದ್ದು ಇಲ್ಲಿ ಖಲಿಸ್ತಾನಿಗಳೇ ಹೆಚ್ಚಿನ ಪ್ರಮಾಣದಲ್ಲಿ ಇದ್ದಿದ್ದಾರೆ.

ದೀಪಾವಳಿ ಆಚರಣೆ ವೇಳೆ ಕೆನಡಾದಲ್ಲಿ ಖಲಿಸ್ತಾನಿಗಳು ಭಾರತೀಯರ ನಡುವೆ ಹೊಯ್‌ಕೈ: ವೀಡಿಯೋ ವೈರಲ್‌

ನಮ್ಮ ದೇವಸ್ಥಾನಕ್ಕೆ ಬೆದರಿಕೆ ಇದೆ. ಆನ್‌ಲೈನ್‌ ಹನುಮ ಪ್ರತಿಮೆ ವಿರುದ್ಧ ಕೆಲವರು ಕಿಡಿಕಾರಿದ್ದಾರೆ. ಹೀಗಾಗಿ ದೇವಸ್ಥಾನಕ್ಕೆ ಭದ್ರತೆ ಒದಗಿಸಲಾಗಿದ್ದು, ರಾತ್ರಿಯೂ ಸಹ ದೇವಾಲಯವನ್ನು ಕಾವಲು ಕಾಯುತ್ತೇವೆ ಎಂದು ದೇವಸ್ಥಾನದ ಅರ್ಚಕ ಫೂಲ್ ಕುಮಾರ್ ಶರ್ಮಾ ಹೇಳಿದ್ದಾರೆ. ಈ ಹಿಂದೆ ಕೆನಡಾದ (Canada) ಹಲವು ದೇವಾಲಯ ಮತ್ತು ಭಾರತದ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ಮಾಡಿ, ಗೋಡೆಗಳ ಮೇಲೆ ಖಲಿಸ್ತಾನಿ ಬರಹಗಳನ್ನು ಗೀಚಿ ವಿರೂಪಗೊಳಿಸಿದ ಹಲವು ಘಟನೆಗಳು ನಡೆದಿವೆ.

ರಾಜತಾಂತ್ರಿಕ ಬಿಕ್ಕಟ್ಟಿನ ನಂತರ ಕೆನಡಾ ಜನರಿಗೆ ವೀಸಾ ಸೇವೆ ಮರು ಆರಂಭಿಸಿದ ಭಾರತ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು