ಉದ್ದೇಶ ಪೂರ್ವಕ ಕೊಲೆಗೆ ಸಮ; ಗರ್ಭಿಣಿ ಆನೆ ಕೊಂದ ಘಟನೆ ಖಂಡಿಸಿದ ರತನ್ ಟಾಟಾ!

Suvarna News   | Asianet News
Published : Jun 04, 2020, 03:48 PM ISTUpdated : Jun 04, 2020, 04:05 PM IST
ಉದ್ದೇಶ ಪೂರ್ವಕ ಕೊಲೆಗೆ ಸಮ; ಗರ್ಭಿಣಿ ಆನೆ ಕೊಂದ ಘಟನೆ ಖಂಡಿಸಿದ ರತನ್ ಟಾಟಾ!

ಸಾರಾಂಶ

ಕೇರಳದಲ್ಲಿ ಗರ್ಭಿಣಿ ಆನೆ ಕೊಂದ ಘಟನೆಗೆ ಆಕ್ರೋಶ ಹೆಚ್ಚಾಗುತ್ತಿದೆ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ. ಕ್ರಿಕೆಟಿಗರು, ಸೆಲೆಟ್ರೆಟಿಗಳು, ಸಾರ್ವಜನಿಕರು ಕೇರಳದಲ್ಲಿನ ಘನಘೋರ ಘಟನೆಗೆ ಕಿಡಿ ಕಾರಿದ್ದಾರೆ. ಇದೀಗ ಉದ್ಯಮಿ, ಪ್ರಾಣಿಗಳನ್ನು ಅತೀಯಾಗಿ ಪ್ರೀತಿಸುವ ರತನ್ ಟಾಟಾ ಆನೆ ಕೊಂದ ಘಟನೆಯಿಂದ ತೀವ್ರ ದುಃಖಿತರಾಗಿದ್ದಾರೆ. ಇಷ್ಟೇ ಘಟನೆಯನ್ನು ಖಂಡಿಸಿ, ಇದು ಉದ್ದೇಶ ಪೂರ್ವಕ ಮನುಷ್ಯನ ಕೊಲೆಗೆ ಸಮ ಎಂದಿದ್ದಾರೆ.

ಮುಂಬೈ(ಜೂ.04): ದೇವರ ನಾಡು ಅನ್ನೋ ಖ್ಯಾತಿಗಳಿಸಿರುವ ಕೇರಳದಲ್ಲಿ ಗರ್ಭಿಣಿ ಆನೆ ಕೊಂದ ಘಟನೆ ಆಘಾತಕಾರಿಯಾಗಿದೆ. ಸ್ಫೋಟಕವಿಟ್ಟು ಪೈನಾಪಲ್ ನೀಡಿ ಗರ್ಭಿಣಿ ಆನೆಯನ್ನು ಕೊಲ್ಲಲಾಗಿದೆ. ಸ್ಫೋಟಕಿಂದ ಸಂಪೂರ್ಣ ಬಾಯಿ ಸ್ಫೋಟಕೊಂಡು ನೋವು ತಾಳಲಾರದೆ ನದಿಯಲ್ಲಿ ನಿಂತು ಪ್ರಾಣಬಿಟ್ಟಿದೆ. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರತದ ಮಾನ ಹರಾಜಾಗಿದೆ. ಈ ಘೋರ ಘಟನೆಯನ್ನು ಉದ್ಯಮಿ ರತನ್ ಟಾಟಾ ಕಟುವಾಗಿ ಖಂಡಿಸಿದ್ದಾರೆ.

ಗರ್ಭಿಣಿ ಆನೆಗೆ ಸ್ಫೋಟಕವಿಟ್ಟು ಹಣ್ಣು ನೀಡಿದ ದುರುಳರು, ನರಕವೇದನೆಯಿಂದ ಪ್ರಾಣಬಿಟ್ಟ ಗಜ!.

ನಾನು ತೀವ್ರ ದುಃಖಿತ ಹಾಗೂ ಆಘಾತಗೊಂಡಿದ್ದೇನೆ. ಕಟುಕರ ಗುಂಪೊಂದು ಮುಗ್ದ ಗರ್ಭಿಣೆ ಆನೆಗೆ ಸ್ಫೋಟಕ ತುಂಬಿದ ಪೈನಾಪಲ್ ನೀಡಿ ಕೊಲ್ಲಲಾಗಿದೆ ಅನ್ನೋ ಘಟನೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮೂಕ ಪ್ರಾಣಿಗಳ ಮೇಲೆ ನಡೆಯುವ ಇಂತಹ ಕ್ರೂರ ಘಟನೆಗಳು, ಪೂರ್ವನಿಯೋಜಿತ ಮನುಷ್ಯನ ಕೊಲೆಗೆ ಸಮ. ನ್ಯಾಯ ಸಿಗಲಿ ಎಂದು ರಟನ್ ಟಾಟಾ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

 

ಗರ್ಭಿಣಿ ಆನೆಗೆ ಸ್ಫೋಟಕವಿಟ್ಟು ಹಣ್ಣು ನೀಡಿದ ದುರುಳರು, ನರಕವೇದನೆಯಿಂದ ಪ್ರಾಣಬಿಟ್ಟ ಗಜ!...

ಪ್ರಾಣಿಗಳನ್ನು ಅತೀಯಾಗಿ ಪ್ರೀತಿಸುವ ರತನ್ ಟಾಟಾ ಈ ಘಟನೆಯಿಂದ ನೊಂದಿದ್ದಾರೆ. 82 ವರ್ಷದ ಹಿರಿಯ ಉದ್ಯಮಿ ರತನ್ ಟಾಟಾ ಮಾತ್ರವಲ್ಲ, ದೇಶದ ಪ್ರತಿಯೊಬ್ಬರು ಈ ಘಟನೆಯನ್ನು ಖಂಡಿಸಿದ್ದಾರೆ. ಕೇರಳ ಸರ್ಕಾರ ಆನೆ ಕೊಂದ ಪ್ರಕರಣದ ತನಿಖೆ ನಡೆಸಲು ವನ್ಯ ಜೀವಿ ವಿಭಾಗಕ್ಕೆ ಸೂಚಿಸಿದೆ. ಇತ್ತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಆನೆ ಕೊಂದ ಪ್ರಕರಣವನ್ನು ಕೇಂದ್ರ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದೆ. ಕೇರಳ ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್