
ಪುದುಚೇರಿ(ಫೆ.16): ರಾಜ್ಯ ಸರ್ಕಾರ ಹಾಗೂ ಗರ್ವನರ್ ಜಟಾಪಟಿಗಳ ಪೈಕಿ ಪುದುಚೇರಿ ರಾಜ್ಯಪಾಲ ಕಿರಣ್ ಬೇಡಿ ಮುಂಚೂಣಿಯಲ್ಲಿದ್ದಾರೆ. ಒಂದಲ್ಲ ಒಂದು ಕಾರಣಗಳಿಂದು ಪುದುಚೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಿದ್ದ ಲೆಫ್ಟಿನೆಂಟ್ ಗರ್ವನರ್ ಕಿರಣ್ ಬೇಡಿಯನ್ನು ವಜಾಗೊಳಿಸಲಾಗಿದೆ
ಕಿರಣ್ ಬೇಡಿ ಗೋಬ್ಯಾಕ್: ಗವರ್ನರ್ ವಿರುದ್ಧವೇ ಮುಖ್ಯಮಂತ್ರಿ ಧರಣಿ!.
ರಾಷ್ಟ್ರಪತಿ ಭವನ ಅಧೀಕೃತ ಆದೇಶ ಹೊರಡಿಸಿದೆ. ಪುದುಚೇರಿ ರಾಜ್ಯಪಾಲ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿಯನ್ನು ವಜಾ ಮಾಡಲಾಗಿದೆ. ಹೊಸ ರಾಜ್ಯಪಾಲ ನೇಮಕವಾಗುವ ವರೆಗೆ ಆಂಧ್ರಪ್ರದೇಶದ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ
ಪುದುಚೇರಿ ಸಿಎಂ, ಗೌರ್ನರ್ ನಡುವೆ ಹೆಲ್ಮೆಟ್ ಜಟಾಪಟಿ
ಪುದುಚೇರಿ ವಿಧಾನಸಭಾ ಚುನಾವಣೆಗೆ ಕೆಲ ವಾರಗಳು ಬಾಕಿ ಇರುವಾಗಲೇ ರಾಜಕೀಯ ಜೋರಾಗಿದೆ. ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನದತ್ತ ಸಾಗಿದೆ. ಇತ್ತ ಕೇಂದ್ರ ಸರ್ಕಾರ ಕಿರಣ್ ಬೇಡಿಯನ್ನು ರಾಜ್ಯಪಾಲ ಹುದ್ದೆಯಿಂದ ವಜಾ ಮಾಡಿದೆ. ಕಾಂಗ್ರೆಸ್ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದ್ದ ಕಿರಣ್ ಬೇಡಿ ವಿರುದ್ಧ ಹಲವು ಭಾರಿ ಹೋರಾಟ ಮಾಡಿತ್ತು. ರಾಜ್ಯಪಾಲರ ಬದಲಾಯಿಸುವಂತೆ ಆಗ್ರಹಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ