ರೈತರ ಖಾತೆಗೆ 12 ಸಾವಿರ ಕೋಟಿ ವರ್ಗಾವಣೆ

Published : Jan 02, 2020, 09:03 AM IST
ರೈತರ ಖಾತೆಗೆ  12 ಸಾವಿರ ಕೋಟಿ ವರ್ಗಾವಣೆ

ಸಾರಾಂಶ

ಪ್ರಧಾನಿ ಮೋದಿ ಅವರು ರೈತರ ಖಾತೆಗೆ ಗುರುವಾರ 12 ಸಾವಿರ ಕೋಟಿ ರು. ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ 

ತುಮಕೂರು [ಜ.02]: ಕೃಷಿ ಸಮ್ಮಾನ್‌ ಯೋಜನೆಯಡಿ ಪ್ರಧಾನಿ ಮೋದಿ ಅವರು ರೈತರ ಖಾತೆಗೆ ಗುರುವಾರ 12 ಸಾವಿರ ಕೋಟಿ ರು. ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ತಿಳಿಸಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಪೂರ್ವ ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿ, ಕೃಷಿ ಸಮ್ಮಾನ್‌ ಯೋಜನೆಯ ಲಾಭವನ್ನು ದೇಶದ 6 ಕೋಟಿ ರೈತ ಕುಟುಂಬಗಳು ಪಡೆಯಲಿದ್ದಾರೆ.

 ಕಾರ್ಯಕ್ರಮದಲ್ಲಿ ಪ್ರಧಾನಿ ಒಂದು ಗುಂಡಿ ಒತ್ತುವ ಮೂಲಕ ಏಕಕಾಲದಲ್ಲಿ ದೇಶದ ರೈತರ ಖಾತೆಗೆ ನೇರವಾಗಿ .12 ಸಾವಿರ ಕೋಟಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದರು.

ರಾಜ್ಯಗಳಿಗೆ ಸಡ್ಡು ಹೊಡೆಯಲು ಸಿಎಎ ಅಡಿ ಆನ್‌ಲೈನ್‌ ಪೌರತ್ವ...

ಬೆಂಗಳೂರು ಬದಲು ತುಮಕೂರು: ಮೊದಲು ಕೃಷಿ ಸಮ್ಮಾನ್‌ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಸಿದ್ಧಗಂಗಾ ಮಠದ ಗದ್ದುಗೆ ದರ್ಶನದೊಂದಿಗೆ ಕಾರ್ಯಕ್ರಮ ಆಯೋಜಿಸುವ ಉತ್ಸುಕತೆಯನ್ನು ಮೋದೀಜಿ ತೋರಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ತುಮಕೂರಲ್ಲಿ ಆಯೋಜಿಸಲು ನಿರ್ಧರಿಸಲಾಯಿತು ಎಂದು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸ್ಮಶಾನದಲ್ಲಿ ನಿಗೂಢ ಕೃತ್ಯ : ಚಿತೆಯ ಮೇಲೆ ಕುರಿ ತಲೆಬುರುಡೆ; ಮದ್ಯದ ಬಾಟಲಿಗಳು, ಬೆಚ್ಚಿಬಿದ್ದ ಗ್ರಾಮಸ್ಥರು
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?