ಮಂಡಿನೋವು: ಭಾರತ್‌ ಜೋಡೋ ಕೈಬಿಡಲು ಚಿಂತಿಸಿದ್ದ ರಾಹುಲ್‌!

Published : Feb 12, 2023, 07:31 AM IST
ಮಂಡಿನೋವು: ಭಾರತ್‌ ಜೋಡೋ ಕೈಬಿಡಲು ಚಿಂತಿಸಿದ್ದ ರಾಹುಲ್‌!

ಸಾರಾಂಶ

ಇತ್ತೀಚೆಗಷ್ಟೇ ದೇಶವ್ಯಾಪಿ ಭಾರತ್‌ ಜೋಡೋ ಯಾತ್ರೆ ಮುಕ್ತಾಯಗೊಳಿಸಿದ ರಾಹುಲ್‌ ಗಾಂಧಿ, ಯಾತ್ರೆಯ ಆರಂಭದ ಹಂತದಲ್ಲೇ ಅದನ್ನು ಕೈಬಿಡಲು ಚಿಂತಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ.

ತಿರುವನಂತಪುರ: ಇತ್ತೀಚೆಗಷ್ಟೇ ದೇಶವ್ಯಾಪಿ ಭಾರತ್‌ ಜೋಡೋ ಯಾತ್ರೆ ಮುಕ್ತಾಯಗೊಳಿಸಿದ ರಾಹುಲ್‌ ಗಾಂಧಿ, ಯಾತ್ರೆಯ ಆರಂಭದ ಹಂತದಲ್ಲೇ ಅದನ್ನು ಕೈಬಿಡಲು ಚಿಂತಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಮಾಹಿತಿ ನೀಡಿರುವ ರಾಹುಲ್‌ ಆಪ್ತ ಕೆ.ಸಿ.ವೇಣುಗೋಪಾಲ್‌, ಯಾತ್ರೆ ಆರಂಭಗೊಂಡು 3ನೇ ದಿನ ಕೇರಳಕ್ಕೆ ಪ್ರವೇಶಿಸಿದ ಹೊತ್ತಿನಲ್ಲೇ ರಾಹುಲ್‌ಗೆ ಮಂಡಿ ನೋವು ಹೆಚ್ಚಾಗಿತ್ತು.

ಹೀಗಾಗಿ ಯಾತ್ರೆಯನ್ನು ತಾವೇ ಮುಂದುವರೆಸಬೇಕಾ? ಅಥವಾ ಪಕ್ಷದ ಇನ್ಯಾವುದೇ ಇತರ ನಾಯಕರಿಗೆ ಅದನ್ನು ವಹಿಸಿ ತಾವು ಹಿಂದೆ ಸರಿಯಬೇಕಾ? ಎಂಬ ಬಗ್ಗೆ ರಾಹುಲ್‌ ಗೊಂದಲಕ್ಕೆ ಬಿದ್ದಿದ್ದರು. ಒಂದು ದಿನ ರಾತ್ರಿ ನನ್ನನ್ನು ಕರೆದು, ತಮ್ಮ ನೋವಿನ ಬಗ್ಗೆ ವಿವರಿಸಿ, ನನ್ನ ಬದಲು ಬೇರೆ ಯಾರಿಗಾದರೂ ಯಾತ್ರೆ ನೇತೃತ್ವ ವಹಿಸಿ ಎಂದು ಹೇಳಿದ್ದರು. ಪ್ರಿಯಾಂಕಾ ವಾದ್ರಾ ಕೂಡಾ ನನಗೆ ಕರೆ ಮಾಡಿ ಇದೇ ವಿಷಯವನ್ನು ಹೇಳಿದ್ದರು. ಬಳಿಕ ಸ್ವತಃ ರಾಹುಲ್‌ (Rahul Gandhi) ಸೂಚಿಸಿದ ವೈದ್ಯರೇ ಅವರನ್ನು ಭೇಟಿಯಾಗಿ ಚಿಕಿತ್ಸೆ ನೀಡಿದರು. ಅದೃಷ್ಟವಶಾತ್‌ ಚಿಕಿತ್ಸೆಯಿಂದ ರಾಹುಲ್‌ ಮಂಡಿನೋವು ಗುಣವಾಯಿತು. ಅವರು ತಮ್ಮ ಯಾತ್ರೆ ಮುಂದುವರೆಸಿದರು ಎಂದು ವೇಣುಗೋಪಾಲ್‌ (KC Venugopal) ಹೇಳಿದ್ದಾರೆ.

ಕಾಶ್ಮೀರಕ್ಕೆ ಕಾಲಿಟ್ಟರೆ ಗ್ರೆನೇಡ್ ದಾಳಿಯ ಎಚ್ಚರಿಕೆ ಇತ್ತು; ಆದರೂ ಹೆದರಲಿಲ್ಲ: ರಾಹುಲ್ ಗಾಂಧಿ

ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿ.ಕೆ. ಶಿವಕುಮಾರ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌