'ಸಂವಿಧಾನ' ಕಾರ್ಯಕ್ರಮಕ್ಕೆ ಸಂವಿಧಾನ ವಿರೋಧಿಯೇ ಅತಿಥಿ, ಏರ್‌ಪೋರ್ಟ್‌ನಿಂದಲೇ ಗಡಿಪಾರು ಮಾಡಿದ ಕೇಂದ್ರ!

Published : Feb 26, 2024, 06:50 PM IST
'ಸಂವಿಧಾನ' ಕಾರ್ಯಕ್ರಮಕ್ಕೆ ಸಂವಿಧಾನ ವಿರೋಧಿಯೇ ಅತಿಥಿ, ಏರ್‌ಪೋರ್ಟ್‌ನಿಂದಲೇ ಗಡಿಪಾರು ಮಾಡಿದ ಕೇಂದ್ರ!

ಸಾರಾಂಶ

ರಾಜ್ಯ ಸರ್ಕಾರದ ಸಂವಿಧಾನ ಸಮಾವೇಶಕ್ಕೆ ಪಾಕ್‌ ಪರ ನಿಲುವು ಇರುವ ಲೇಖಕಿಯನ್ನು ಕಾಂಗ್ರೆಸ್‌ ಸರ್ಕಾರ ಆಹ್ವಾನಿಸಿತ್ತು. ಆದರೆ, ಇಂಗ್ಲೆಂಡ್‌ ಮೂಲದ ಪ್ರೊಫೆಸರ್‌ ಕಾರ್ಯಕ್ರಮಕ್ಕಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದವರನ್ನು ಅಲ್ಲಿಂದಲೇ ಗಡಿಪಾರು ಮಾಡಲಾಗಿದೆ.

ಬೆಂಗಳೂರು (ಫೆ.26): ಪಾಕ್​ ಪರ ನಿಲುವು ಇರುವ ಲೇಖಕಿಯನ್ನು ಸಂವಿಧಾನ ಕಾರ್ಯಕ್ರಮಕ್ಕೆ ಸರ್ಕಾರ ಆಹ್ವಾನ ನೀಡಿತ್ತು ಎನ್ನುವ ವಿಚಾರ ಬಹಿರಂಗವಾಗಿದೆ. ರಾಜ್ಯ ಸರ್ಕಾರದಿಂದ ಭಾರತ ವಿರೋಧಿ ಧೋರಣೆ ಹೊಂದಿರುವ ಇಂಗ್ಲೆಂಡ್‌ ಮೂಲದ ಪ್ರೊಫೆಸರ್‌ ನಿತಾಶಾ ಕೌಲ್‌ಗೆ ಆಹ್ವಾನ ನೀಡಲಾಗಿತ್ತು. ಆದರೆ, ಈಕೆ ಬೆಂಗಳೂರು ಏರ್‌ಪೋರ್ಟ್‌ಗೆ ಬಂದ ಬೆನ್ನಲ್ಲಿಯೇ ಆಕೆಯನ್ನು ಒಂದು ದಿನ ಜೈಲಿನಲ್ಲಿಟ್ಟು, ವಿಮಾನ ನಿಲ್ದಾಣದಿಂದಲೇ ಕೇಂದ್ರ ಸರ್ಕಾರ ಗೇಟ್‌ ಪಾಸ್‌ ನೀಡಿದೆ. ಭಾನುವಾರ ನಿತಾಶಾ ಕೌಲ್‌ ಲಂಡನ್​ನಿಂದ ಬೆಂಗಳೂರಿಗೆ ಆಗಮಿಸಿತ್ತು. ಹೀಗೆ ಬಂದ ಇಂಗ್ಲೆಂಡ್‌ ಮೂಲದ ಲೇಖಕಿ ನಿತಾಶಾ ಕೌಲ್​ಗೆ ಏರ್​ಪೋರ್ಟ್​ನಲ್ಲೇ ತಡೆ ನೀಡಲಾಗಿತ್ತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ & ರಾಷ್ಟ್ರೀಯ ಏಕತಾ ಸಮಾವೇಶದಲ್ಲಿ ಇವರ ಕಾರ್ಯಕ್ರಮವಿತ್ತು. ವಿಶೇಷ ಉಪನ್ಯಾಸ ನೀಡಲು ನಿತಾಶಾ ಕೌಲ್‌ ಆಗಮಿಸಿದ್ದರು. ಆದರೆ, ಬೆಂಗಳೂರು ಪ್ರವೇಶವನ್ನು ಅಧಿಕಾರಿಗಳು ತಡೆದಿದ್ದಾರೆ. ಓಸಿಐ ಕಾರ್ಡ್‌  (ಓವರ್‌ಸೀಸ್‌ ಸಿಟಿಜನ್‌ ಆಫ್‌ ಇಂಡಿಯಾ) ಹೊಂದಿರುವ ಈಕೆಯನ್ನು ಲಂಡನ್‌ಗೆ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಲೇಖಕಿ ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಆಹ್ವಾನದ ಮೇರೆಗೆ ಬಂದಿದ್ದ ನಿತಾಶಾ ಕೌಲ್‌ಗೆ ಆಹ್ವಾನ ನೀಡಲಾಗಿತ್ತು.  ಇದನ್ನು ಟೀಕೆ ಮಾಡಿರುವ ಬಿಜೆಪಿ, ಪಾಕ್​ ಪರ ಇರುವವರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ ಎಂದು ಟೀಕಿಸಿದೆ. ಇನ್ನು ಪಾಕ್​ ಪ್ರೇಮಿ ಲೇಖಕಿಗೆ ಕೇಂದ್ರ ಸರ್ಕಾರ ಕೂಡ ತಪರಾಕಿ ಹಾಕಿದೆ.

ಯಾರು ನಿತಾಶಾ ಕೌಲ್..?: ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಜನಿಸಿದ್ದ ನಿತಾಶಾ ಕೌಲ್‌, ಪ್ರಸ್ತುತ ಲಂಡನ್‌ನಲ್ಲಿ ವಾಸವಿದ್ದಾರೆ. ಶ್ರೀನಗರದ ಪಂಡಿತ ಕುಟುಂಬವಾಗಿದ್ದ ಈಕೆ, ಬಳಿಕ ಉತ್ತರ ಪ್ರದೇಶಕ್ಕೆ ವಲಸೆ ಬಂದಿದ್ದರು. ಈಗ ಲಂಡನ್​ ವೆಸ್ಟ್​ ಮಿನಿಸ್ಟರ್​ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯ, ಅಂತಾರಾಷ್ಟ್ರೀಯ ಸಂಬಂಧ ಬಗ್ಗೆ ಉಪನ್ಯಾಸವನ್ನೂ ನೀಡುತ್ತಾರೆ. ಕಾಶ್ಮೀರಕ್ಕಾಗಿ ಕೇಂದ್ರ ಸರ್ಕಾರ ತಂದ ಕಾನೂನುಗಳ ಬಗ್ಗೆ ವ್ಯಾಪಕವಾಗಿ ಟೀಕೆ ಮಾಡಿದ್ದರು.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ನಿತಾಶಾ ಕೌಲ್‌, ನಾನು ಭಾರತ ವಿರೋಧಿ ಅಲ್ಲ. ಆರ್​ಎಸ್​ಎಸ್​ ಟೀಕಿಸಿದ್ದಕ್ಕೆ ಪ್ರವೇಶಕ್ಕೆ ಅನುಮತಿ ನೀಡಲಿಲ್ಲ. ನಾನು ಸರ್ವಾಧಿಕಾರಿ ಧೋರಣೆ ವಿರುದ್ಧ, ಪ್ರಜಾಪ್ರಭುತ್ವದ ಪರವಾಗಿದ್ದೇನೆ. ಕರ್ನಾಟಕ ಆಹ್ವಾನ ನೀಡಿತ್ತು. ಆದರೆ, ಕೇಂದ್ರ ಸರ್ಕಾರ ಅವಕಾಶ ನೀಡಿರಲಿಲ್ಲ. ಹಲವು ವರ್ಷಗಳಿಂದ ಹಿಂದುತ್ವ ಟ್ರೋಲ್​ಗಳಿಂದ ನನಗೆ ಬೆದರಿಕೆ ಹಾಕಲಾಗುತ್ತಿದೆ. ಕೊಲೆ,ಅತ್ಯಾಚಾರ,ನಿಷೇಧ ಸೇರಿ ಹಲವು ರೀತಿಯಾಗಿ ಧಮ್ಕಿ ಹಾಕಲಾಗುತ್ತಿದೆ' ಎಂದು ಬರೆದುಕೊಂಡಿದ್ದಾರೆ.

ಪ್ರಜಾಸತ್ತಾತ್ಮಕ & ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡುವ ಸಲುವಾಗಿ ಬೆಂಗಳೂರಿಗೆ ಹೋಗಿದ್ದೆ. ಆದರೆ,  ಕೇಂದ್ರ ಸರ್ಕಾರ ಬೆಂಗಳೂರು ಪ್ರವೇಶಕ್ಕೆ ಅವಕಾಶವನ್ನೇ ಕೊಡಲಿಲ್ಲ. ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗದಲ್ಲೇ ಪ್ರವೇಶಕ್ಕೆ ಅವಕಾಶ ನೀಡಲಿಲ್ಲ. ಅಧಿಕಾರಿಗಳು ನನಗೆ ಕಿರುಕುಳ ನೀಡಿದ್ದಲ್ಲದೆ, ಕನಿಷ್ಠ ಸೌಲಭ್ಯ ನೀಡಲಿಲ್ಲ.24 ಗಂಟೆಯಲ್ಲೇ ಬೆಂಗಳೂರಿಂದ ಲಂಡನ್​ಗೆ ವಾಪಸ್​ ಕಳಿಸಿದ್ದಾರ. ಇದು ದೆಹಲಿ ಆದೇಶ.. ನಾವು ಏನು ಮಾಡಲಾಗಲ್ಲ ಎಂದು ಅಧಿಕಾರಿಗಳು  ಹೇಳಿದ್ದರು ಎಂದು ನಿತಾಶಾ ತಿಳಿಸಿದ್ದಾರೆ.

ಪಾಕ್​ ಪ್ರೇಮಿಗಳಿಗೆ ಸರ್ಕಾರ ಪೋಷಣೆ: ಇನ್ನು ರಾಜ್ಯ ಸರ್ಕಾರದ ನಡೆಯಲ್ಲಿ ಕರ್ನಾಟಕ ಬಿಜೆಪಿ ಟೀಕಿಸಿದೆ. 'ಪಾಕಿಸ್ತಾನ ಪರ,ದೇಶದ ಅಖಂಡತೆ ವಿರುದ್ಧವಾಗಿ ಇರುವವರಿಗೆ ಸರ್ಕಾರ ಮಣೆ ಹಾಕುತ್ತಿದೆ. ಜನರ ತೆರಿಗೆ ದುಡ್ಡಲ್ಲಿ ರಾಜ್ಯಕ್ಕೆ ಕರೆಸಿಕೊಂಡು ಸಂವಿಧಾನಕ್ಕೆ ಅಪಚಾರ ಮಾಡುವ ಪ್ರಯತ್ನದಲ್ಲಿತ್ತು.ಉಗ್ರರ ಪರವಾಗಿ ಇರುವವರು, ನಗರ ನಕ್ಸಲರು, ದೇಶದ್ರೋಹಿಗಳ ಕರೆಸಿಕೊಂಡು, ಲೋಕಾ ಚುನಾವಣಾ ಪೂರ್ವದಲ್ಲಿ ಅಶಾಂತಿ ಮೂಡಿಸಲೂ ಸರ್ಕಾರ ಪ್ರಯತ್ನಿಸಿತ್ತು. ಲೇಖಕಿ ಗಡಿಪಾರು ಮಾಡಿ ಭದ್ರತಾ ಸಂಸ್ಥೆಗಳೂ ಇದನ್ನ ತಡೆದಿವೆ. ಬರ ಪರಿಹಾರ, ಕರ್ನಾಟಕದ ಅಭಿವೃದ್ಧಿಗಳಿಗೆ ಖರ್ಚು ಮಾಡಲು ಹಣವಿಲ್ಲ. ಆದರೆ, ಇಂಥ ವ್ಯಕ್ತಿಗಳನ್ನು ಆಹ್ವಾನಿಸಲು ಹಣವಿದೆ. ರಾಹುಲ್ ಗಾಂಧಿ ಸಮಾಧಾನಪಡಿಸಲೂ ಸಿದ್ದರಾಮಯ್ಯ ಮುಂದಾಗಿದ್ದಾರೆ' ಎಂದು ಹೇಳಿದೆ.

ಸಂವಿಧಾನಕ್ಕೆ ಮೋದಿ ಸರ್ಕಾರದಿಂದ ಆತಂಕ: ಸಿಎಂ ಸಿದ್ದರಾಮಯ್ಯ

ಇನ್ನು ರಾಜ್ಯ ಕಾಂಗ್ರೆಸ್‌ ಇದು ಕನ್ನಡಿಗರಿಗೆ ಆದ ಅವಮಾನ ಎಂದಿದೆ. ಬಿಜೆಪಿ ತತ್ವಗಳಿಗೆ ನಿತಾಶಾ ಕೌಲ್ ಎಂದೂ ಒಪ್ಪಿಕೊಂಡಿಲ್ಲ. ಕೇಂದ್ರ ಸರ್ಕಾರದಿಂದ ಅಭಿವ್ಯಕ್ತಿ ಸ್ವಾತಂತ್ರ ಹತ್ತಿಕ್ಕುವ ಕೆಲಸವಾಗುತ್ತಿದೆ. ಇದು 6 ಕೋಟಿ ಕನ್ನಡಿಗರಿಗೆ ಅದ ಅವಮಾನ. ಮೋದಿ ಸರ್ಕಾರ ಆಡಳಿತದಲ್ಲಿ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಹೇಳಿದೆ.

 

ಲೋಕ ಸಭಾ ಚುನಾವಣೆಯಲ್ಲಿ ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ

ನಿತಾಶಾ ಕೌಲ್‌ ವಿವಾದಗಳು: ನಿತಾಶಾ ಕೌಲ್‌ ಈ ಹಿಂದೆ ‘ಕಾಶ್ಮೀರ ಭಾರತದ ಅವಿಭಾಗ್ಯ ಅಂಗವಲ್ಲ’ಎಂದು ಹೇಳಿದ್ದರು. ಅದಲ್ಲದೆ, ‘ಕಾಶ್ಮೀರಿ ಮಹಿಳೆಯರ ಮೇಲೆ ಭಾರತೀಯ ಸೈನಿಕರಿಂದ ಅತ್ಯಾಚಾರ’ ಎನ್ನುವ ಹೇಳಿಕೆಯನ್ನೂ ನೀಡಿದ್ದರು. ಕಾಶ್ಮೀರದಲ್ಲಿ ಮಾನವೀಯ ಬಿಕ್ಕಟ್ಟು ಎದುರಾಗಿದೆ. ಕಾಶ್ಮೀರದಲ್ಲಿ ಮುಸ್ಲಿಮರ ಮಾರಣಹೋಮ ನಡೆಯುತ್ತಿದೆ. ಕಾಶ್ಮೀರದ ವಿಷಯದಲ್ಲಿ ಭಾರತ ವಸಾಹತುಶಾಹಿ ಶಕ್ತಿಯಂತೆ ವರ್ತಿಸುತ್ತಿದೆ ಹಾಗೂ  ಕಾಶ್ಮೀರದ ವಿಷಯವಾಗಿ ಅಂತಾರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಬೇಕು ಎಂದು ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!