ವಿಡಿಯೋಗಾಗಿ 300 ಅಡಿ ಎತ್ತರದಿಂದ ನದಿಗೆ ಹಾರಿ ಹುಚ್ಚು ಸಾಹಸ ಪ್ರದರ್ಶನ; ಮುಂದೇನಾಯ್ತು?

Published : Feb 08, 2021, 09:04 PM ISTUpdated : Feb 08, 2021, 09:22 PM IST
ವಿಡಿಯೋಗಾಗಿ  300 ಅಡಿ ಎತ್ತರದಿಂದ ನದಿಗೆ ಹಾರಿ ಹುಚ್ಚು ಸಾಹಸ ಪ್ರದರ್ಶನ; ಮುಂದೇನಾಯ್ತು?

ಸಾರಾಂಶ

ಹೆಚ್ಚು ಲೈಕ್ಸ್ ಹಾಗೂ ಕಮೆಂಟ್ ಪಡೆಯಲು, ರಾತ್ರೋರಾತ್ರಿ ಜನಪ್ರಿಯರಾಗಲು ಸೇರಿದಂತೆ ಹಲವು ಕಾರಣಗಳಿಂದ ಹುಚ್ಚು ವಿಡಿಯೋ ರೆಕಾರ್ಡ್ ಮಾಡುವುದು ಕೆಲವರಿಗೆ ಸಾಮಾನ್ಯವಾಗಿದೆ. ಹೀಗೆ ಸ್ಟಂಟ್ ವಿಡಿಯೋ ರೆಕಾರ್ಡ್ ಮಾಡಲು 300 ಅಡಿ ಎತ್ತರಿಂದ ಹೂಗ್ಲಿ ನದಿಗೆ ಇಬ್ಬರು ಯುವಕರು ಹಾರಿದ್ದಾರೆ. ಮುಂದೇನಾಯ್ತು ಇಲ್ಲಿದೆ ವಿಡಿಯೋ.

ಕೋಲ್ಕತಾ(ಫೆ.08): ಬರೋಬ್ಬರಿ 300 ಅಡಿ ಎತ್ತರಿದಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಲು ಗುಂಡಿಗೆ ಬೇಕು. ಸೇತುವೆ ಮೇಲಿಂದ ಹಾದು ಹೋಗುವಾಗ ಕಳೆಗ ನೋಡಲು ಭಯವಾಗುತ್ತೆ. ಆದರೆ ಈ ಯುವಕರು ಕೋಲ್ಕತಾದಲ್ಲಿರುವ ಹೂಗ್ಲಿ ನದಿಗೆ(ಗಂಗಾ ನದಿ) ಅಡ್ಡಲಾಗಿ ಕಟ್ಟಿರುವ ವಿದ್ಯಾಸಾಗರ್  ಸೇತುವೆ(ಹೂಗ್ಲಿ ಸೇತುವೆ)ಯಿಂದ ಯುವಕರು ಹಾರಿ ಸಾಹಸ ಪ್ರದರ್ಶಿಸಿದ್ದಾರೆ.

"

ಹ್ಯಾರಿ ಹೌದಿನಿ ಆಗ್ತಿನಿ ಅಂತಾ ಹೂಗ್ಲಿ ನದಿಗೆ ಹಾರಿದವ ಮೇಲೆಳಲಿಲ್ಲ!..

ಯುವಕರ ಗುಂಪು ಸೇತುವೆ ಗ್ರಿಲ್ ಬಳಿ ನಿಂತು ಧೈರ್ಯ ಪ್ರದರ್ಶಿಸಿದ್ದಾರೆ. ಇದರಲ್ಲಿ ಇನ್ನಿಬ್ಬರು ಯುವಕರು ಮತ್ತೊಂದು ಹೆಜ್ಜೆ ಮುಂದೆ ಹೋಗಿ ನದಿಗೆ ಹಾರಿದ್ದಾರೆ. ಹಾರಿದ ಇಬ್ಬರಲ್ಲಿ ಓರ್ವ ನಾಪತ್ತೆಯಾಗಿದ್ದಾನೆ. ಮತ್ತೊರ್ವನನ್ನು ರಕ್ಷಿಸಲಾಗಿದೆ. ಹುಚ್ಚು ಸಾಹಸ ದುರಂತದಲ್ಲಿ ಅಂತ್ಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.  

ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ಸ್ಟಂಟ್ ವಿಡಿಯೋ ಚಿತ್ರೀಕರಣಕ್ಕಾಗಿ ಈ ಯುವಕರು ಸಾಹಸ ಪ್ರದರ್ಶನ  ಮಾಡಿದ್ದಾರೆ. ನದಿಗೆ ಹಾರಿದ ಇಬ್ಬರು ಯುವಕರಲ್ಲಿ ವರ್ಷದ ಮೊಹಮ್ಮದ್ ಝಾಕೀರ್ ಸರ್ದಾರ್ ನಾಪತ್ತೆಯಾಗಿದ್ದಾನೆ. ಮತ್ತೊರ್ವ ಮೊಹಮ್ಮದ್ ತಸ್ತಿಗೀರ್ ಅಲಮ್‌ನನ್ನು ರಕ್ಷಿಸಲಾಗಿದೆ. ಇನ್ನು ಕೆಲ ಯುವಕರು ಸೇತುವ ಅಂಚಿನಲ್ಲಿ ನಿಂತು ಸಾಹಸ ಪ್ರದರ್ಶಿಸಿದ್ದಾರೆ. ಇವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ನಾಪತ್ತೆಯಾಗ ಯುವಕನ ತಂದೆ ದೂರು ದಾಖಲಿಸಿದ್ದಾರೆ. ರಕ್ಷಣಾ ಪಡೆ ನಾಪತ್ತೆಯಾದ ಯುವಕನಿಗಾಗಿ ಹುಡುಕಾಟ ಆರಂಭಿಸಿದೆ. ಮಧ್ಯಾಹ್ನ 1.30ಕ್ಕೆ ಯುವಕರು ನದಿ ಹಾರಿ ಸಾಹಸ ಪ್ರದರ್ಶಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?