ದೋಷಪೂರಿತ ರನ್‌ವೇ ಬಗ್ಗೆ 10 ವರ್ಷ ಹಿಂದೆಯೇ ಎಚ್ಚರಿಕೆ!

Published : Aug 09, 2020, 11:09 AM ISTUpdated : Aug 09, 2020, 11:19 AM IST
ದೋಷಪೂರಿತ ರನ್‌ವೇ ಬಗ್ಗೆ 10 ವರ್ಷ ಹಿಂದೆಯೇ ಎಚ್ಚರಿಕೆ!

ಸಾರಾಂಶ

ದೋಷಪೂರಿತ ರನ್‌ವೇ ಬಗ್ಗೆ 2 ಎಚ್ಚರಿಕೆ| 2011, 2019ರಲ್ಲಿ 2 ಎಚ್ಚರಿಕೆ ಬಂದಿದ್ದವು| ಮಳೆಯಲ್ಲಿ ಲ್ಯಾಂಡಿಂಗ್‌ ಸುರಕ್ಷಿತವಲ್ಲ: ತಜ್ಞರ ಎಚ್ಚರಿಕೆ| ರನ್‌ವೇಯಲ್ಲಿ ಬಿರುಕು: ವಿಮಾನಯಾನ ಸಚಿವಾಲಯ ಎಚ್ಚರಿಸಿತ್ತು| ಆದರೂ ಇಲ್ಲಿ ನಡೆದಿತ್ತು ವಿಮಾನ ಕಾರ್ಯಾಚರಣೆ

ಕಲ್ಲಿಕೋಟೆ(ಆ.09): ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣ ಸುರಕ್ಷಿತವಲ್ಲ ಎಂದು 2011 ಹಾಗೂ ಕಳೆದ ವರ್ಷ ಜುಲೈ 11ರಂದು ಎಚ್ಚರಿಕೆ ಸಂದೇಶ ನೀಡಲಾಗಿತ್ತು. ಆದರೂ ಈ ಎಚ್ಚರಿಕೆ ನಿರ್ಲಕ್ಷಿಸಿ ವಿಮಾನ ಸಂಚಾರ ನಡೆದಿತ್ತು ಎಂದು ಬೆಳಕಿಗೆ ಬಂದಿದೆ. ಶುಕ್ರವಾರ ಇಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ಅಪಘಾತದ ನಂತರ ಈ ಎಚ್ಚರಿಕೆ ಸಂದೇಶಗಳು ಮಹತ್ವ ಪಡೆದುಕೊಂಡಿವೆ.

ವಿಮಾನ ತುಂಡಾದ ಕೂಡಲೇ ಎಲ್ಲರ ಆಕ್ರಂದನ!

2011ರಲ್ಲಿ: ವಿಮಾನಯಾನ ತಜ್ಞ ಕ್ಯಾ| ಮೋಹನ್‌ ರಂಗನಾಥನ್‌ ಅವರು ಅಂದಿನ ನಾಗರಿಕ ವಿಮಾನಯಾನ ಕಾರ್ಯದರ್ಶಿ ನಸೀಂ ಜೈದಿ ಅವರಿಗೆ 2011ರ ಜೂನ್‌ನಲ್ಲಿ ರನ್‌ವೇ ಸರಿಯಿಲ್ಲ ಎಂದು ತಿಳಿಸಿದ್ದರು. ‘ಮಳೆ, ತೇವದ ಹಾಗೂ ಗಾಳಿಯ ವಾತಾವರಣದಲ್ಲಿ ವಿಮಾನವನ್ನು ಇಲ್ಲಿ ಲ್ಯಾಂಡ್‌ ಮಾಡಿದರೆ ಸುರಕ್ಷಿತವಾಗಿಲ್ಲ. ರನ್‌ವೇ 10ರಲ್ಲಿ ಲ್ಯಾಂಡ್‌ ಮಾಡಿದರೆ ವಿಮಾನ ಪ್ರಯಾಣಿಕರ ಜೀವಕ್ಕೆ ಅಪಾಯವಿದೆ’ ಎಂದು ರಂಗನಾಥನ್‌ ಅವರು ತಿಳಿಸಿದ್ದರು. ಮಂಗಳೂರಿನಲ್ಲಿ 2010ರಲ್ಲಿ 158 ಪ್ರಯಾಣಿಕರನ್ನು ಬಲಿ ಪಡೆದ ಏರ್‌ ಇಂಡಿಯಾ ವಿಮಾನ ದುರಂತದ ನಂತರ ಈ ಎಚ್ಚರಿಕೆ ನೀಡಿದ್ದರು.

ಮಂಗಳೂರು ಸೇರಿ ದೇಶದ 5 ಟೇಬಲ್‌ ಟಾಪ್‌ ನಿಲ್ದಾಣಗಳು: ಸಣ್ಣ ಎಡವಟ್ಟಾದ್ರೂ ಅಪಘಾತ!

ಕಳೆದ ವರ್ಷ ಮತ್ತೊಂದು ಎಚ್ಚರಿಕೆ:

2011ರ ಎಚ್ಚರಿಕೆ ಬಳಿಕ ಇಂಥದ್ದೇ ಎಚ್ಚರಿಕೆ ವಿಮಾನಯಾನ ಸಚಿವಾಲಯದಿಂದ ಕಳೆದ ವರ್ಷ ಜುಲೈ 11ರಂದು ಬಂದಿತ್ತು. ರನ್‌ವೇಯಲ್ಲಿ ಬಿರುಕು ಇದೆ. ನೀರು ನಿಲ್ಲುತ್ತಿದೆ ಹಾಗೂ ರನ್‌ವೇಯಲ್ಲಿ ಹೆಚ್ಚು ರಬ್ಬರ್‌ ಅಂಶವಿದೆ. ಹೀಗಾಗಿ ರನ್‌ವೇಯಲ್ಲಿ ಲೋಪವಿದೆ ಎಂದು ಅದು ಹೇಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು