ಕುಂಭಮೇಳಕ್ಕೂ ನಿಜಾಮುದ್ದೀನ್ ಮರ್ಕಝ್‌ಗೂ ಹೋಲಿಕೆ ಸರಿಯಲ್ಲ: ಸಿಎಂ ರಾವತ್!

Published : Apr 14, 2021, 09:30 AM IST
ಕುಂಭಮೇಳಕ್ಕೂ ನಿಜಾಮುದ್ದೀನ್ ಮರ್ಕಝ್‌ಗೂ ಹೋಲಿಕೆ ಸರಿಯಲ್ಲ: ಸಿಎಂ ರಾವತ್!

ಸಾರಾಂಶ

ದೇಶಾದ್ಯಂತ ಕೊರೋನಾ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆ| ಇದನ್ನು ನಿಯಂತ್ರಿಸಲು ಸರ್ಕಾರ ಹಲವಾರು ನಿಯಮ ಜಾರಿ| ಕುಂಭಮೇಳಕ್ಕೂ ನಿಜಾಮುದ್ದೀನ್ ಮರ್ಕಝ್‌ಗೂ ಹೋಲಿಕೆ ಸರಿಯಲ್ಲ: ಉತ್ತರಾಖಂಡ್ ಸಿಎಂ ರಾವತ್!

ಡೆಹ್ರಾಡೂನ್(ಏ.14): ದೇಶಾದ್ಯಂತ ಕೊರೋನಾ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೊಳಿಸುತ್ತಿದೆ. ಹೀಗಿದ್ದರೂ ಈ ಮಹಾಮಾರಿಗೆ ಕಡಿವಾಣ ಬೀಳುತ್ತಿಲ್ಲ. ಅತ್ತ ಲಸಿಕಾ ಅಭಿಯಾನ ಆರಂಭವಾಗುತ್ತಿದ್ದರೂ ಪ್ರಕರಣಗಳು ಏರಿಕೆಯಾಗುತ್ತಿವೆ. ಇವೆಲ್ಲದರ ನಡುವೆ ನಡೆದ ಹರಿದ್ವಾರದ ಕುಂಭಮೇಳ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅನೇಕ ಮಂದಿ ಕುಂಭಮೇಳ ಹಾಗೂ ಕಳೆದ ವರ್ಷ ನಡೆದ ದೆಹಲಿಯ ನಿಜಾಮುದ್ದೀನ್ ಮರ್ಕಝ್ ಪ್ರಕರಣದದೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಸದ್ಯ ಉತ್ತರಾಖಂಡ್ ಸಿಎಂ ತೀರಥ್ ಸಿಂಗ್ ರಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ಹರಿದ್ವಾರದ ಹರ್‌ ಕಿ ಪೌಡಿಯಲ್ಲಿ ಸೇರಿದ ಭಕ್ತಾದಿಗಳು ಗಂಗಾ ನದಿಯಲ್ಲಿ ಪವಿತ್ರ 'ಶಾಹಿ ಸ್ನಾನ' ಮಾಡಿದರು. 13 ಅಖಾಡಗಳ ಸಾಧುಗಳು ಸಹ ಹರ್‌ ಕಿ ಪೌಡಿಯಲ್ಲಿ ಮೂರನೇ ಪವಿತ್ರ ಸ್ನಾನವನ್ನು ಮಾಡಲಿದ್ದಾರೆ. ಸೋಮವಾರ ನಡೆದ ಎರಡನೇ ಶಾಹಿ ಸ್ನಾನದಲ್ಲಿ ಸುಮಾರು 35 ಲಕ್ಷ ಜನರು ಭಾಗವಹಿಸಿದ್ದರು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳುವುದು ಅಸಾಧ್ಯವಾಗಿತ್ತು.

ಡೆಹ್ರಾಡೂನ್: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ, ಸೋಂಕು ನಿಯಂತ್ರಣಕ್ಕೆ ಹಲವು ರಾಜ್ಯಗಳಿಂದ ಕಠಿಣ ಕ್ರಮಗಳು ಹಾಗೂ ಲಸಿಕೆ ಉತ್ಸವದ ನಡುವೆ ಹರಿದ್ವಾರದ 'ಕುಂಭ ಮೇಳ' ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷದ ದೆಹಲಿಯ ನಿಜಾಮುದ್ದೀನ್‌ ಮರ್ಕಜ್‌ ಪ್ರಕರಣದೊಂದಿಗೆ ಹೋಲಿಕೆ ಮಾಡುತ್ತಿರುವ ಬಗ್ಗೆ ಉತ್ತರಾಖಂಡ ಸಿಎಂ ತೀರಥ್‌ ಸಿಂಗ್‌ ರಾವತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ಹರಿದ್ವಾರದ ಹರ್‌ ಕಿ ಪೌಡಿಯಲ್ಲಿ ಸೇರಿದ ಭಕ್ತಾದಿಗಳು ಗಂಗಾ ನದಿಯಲ್ಲಿ ಪವಿತ್ರ ಪುಣ್ಯಸ್ನಾನ ಮಾಡಿದ್ದಾರೆ. ಇನ್ನು ಕುಂಭಮೇಳದ 2ನೇ ದಿನವಾದ ಸೋಮವಾರವಷ್ಟೇ ನಾಗ ಸಾಧುಗಳು, ಇತರ ಸಾಧು-ಸಂತರು ಹಾಗೂ ಭಕ್ತಾದಿಗಳು ಸೇರಿದಂತೆ 20 ಲಕ್ಷಕ್ಕೂ ಹೆಚ್ಚು ಜನರು ಗಂಗಾ ನದಿಯಲ್ಲಿ ಮಿಂದೆದ್ದು, ಪುಣ್ಯಸ್ನಾನ ಮಾಡಿದ್ದರು. ಈ ವೇಳೆ ಕೊರೋನಾ ನಿಯಂತ್ರಣದ ಮಾರ್ಗಸೂಚಿಗಳಾದ ಮಾಸ್ಕ್‌ ಧರಿಸುವಿಕೆ, ಸಾಮಾಜಿಕ ಅಂತರ ಸೇರಿದಂತೆ ಇನ್ನಿತರ ಕ್ರಮಗಳನ್ನು ಅನುಸರಿಸಲಾಗಿಲ್ಲ ಎಂದು ಆಯೋಜಕರು ಕೈ-ಕೈ ಹಿಸುಕಿಕೊಂಡಿದ್ದರು. 

ಲಕ್ಷಾಂತರ ಜನರು ಅಂತರವಿಲ್ಲದೆ, ಒಂದೇ ಬಾರಿ ನದಿಯಲ್ಲಿ ಸ್ನಾನ ಮಾಡಿರುವುದು ಸೇರಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿರುವ ಸಮಯದಲ್ಲಿ ಇಂಥಹ ನಡವಳಿಕೆಗಳಿಂದ ಇನ್ನಷ್ಟು ಅಪಾಯಕಾರಿ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕೆಲವರು ಇದನ್ನು ನಿಜಾಮುದ್ದೀನ್‌ ಮರ್ಕಝ್‌ನಲ್ಲಿ ನಡೆದಿದ್ದ ಧಾರ್ಮಿಕ ಸಭೆಗೆ ಹೋಲಿಸಿದ್ದಾರೆ. ಕಳೆದ ವರ್ಷ ನಿಷೇದಾಜ್ಞೆಯ ನಡುವೆಯೂ ನೂರಾರು ಮಂದಿ ಮರ್ಕಝ್ನಲ್ಲಿ ಸೇರಿದ್ದರು ಹಾಗೂ ತಬ್ಲಿಘಿ ಜಮಾತ್‌ನ ಹಲವು ಸದಸ್ಯರಿಗೆ ಕೊರೋನಾ ವೈರಸ್‌ ತಗುಲಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ತೀರಥ್‌ ಸಿಂಗ್ ರಾವತ್‌, 'ಕುಂಭ ಮೇಳ ಮತ್ತು ನಿಜಾಮುದ್ದೀನ್‌ ಮರ್ಕಜ್‌ ನಡುವೆ ಹೋಲಿಕೆ ಸರಿಯಲ್ಲ. ಮರ್ಕಜ್‌ ಒಳಾಂಗಣದಲ್ಲಿ ಕಾರ್ಯಕ್ರಮ ನಡೆದಿತ್ತು, ಕುಂಭ ಮೇಳ ಹೊರಗಡೆ, ಗಂಗಾ ನದಿ ದಂಡೆಯಲ್ಲಿ ನಡೆಯುತ್ತಿದೆ' ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?