
ಲಖನೌ(ಆ.07): ಉತ್ತರ ಪ್ರದೇಶದ(Uttar Pradesh) ಲಖೀಂಪುರದ ಹಿಂಸಾಚಾರ(Lakhimpur Kheri Violence) ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ಬಿಡುಗಡೆಯಾಗಿದ್ದು, ಇದರಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಏಕಾಏಕಿ ಹರಿದು ರೈತರ ಸಾವಿಗೆ ಕಾರಣವಾಗಿರುವುದು ಕಂಡುಬಂದಿದೆ.
ಪ್ರತಿಭಟನೆ ನಡೆಸುತ್ತಿದ್ದ ರೈತರು ಯಾವುದೇ ಆಯುಧಗಳನ್ನು ಹೊಂದಿರಲಿಲ್ಲ. ಕೇಂದ್ರ ಸಚಿವರದ್ದು ಎಂದು ಹೇಳಲಾಗಿರುವ ಕಾರಿನ ಮೇಲೆ ರೈತರು ಯಾವುದೇ ಕಲ್ಲುಗಳ ತೂರಾಟ ನಡೆಸಿಲ್ಲ. ಆದರೆ ಕಾರಿನ ಚಾಲಕ ಉದ್ದೇಶಪೂರ್ವಕವಾಗಿ ರೈತರ ಮೇಲೆ ಕಾರು ಹತ್ತಿಸಿರುವುದು ಸ್ಪಷ್ಟವಾಗಿ ಈ ವಿಡಿಯೋದಲ್ಲಿ ಕಂಡುಬರುತ್ತಿದೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗುತ್ತಿದ್ದ ರೈತರ ಮೇಲೆ ಕಾರು ಹರಿದ ನಂತರ ಗುಂಪು ಕಾರಿನ ಮೇಲೆ ದಾಳಿ ಮಾಡಿದೆ. ಹಾಗಾಗಿ ಸಚಿವರ ಬೆಂಗಾವಲಿನ ನಾಲ್ವರು ಮೃತಪಟ್ಟಿದ್ದಾರೆ ಎಂದು ಸಾಕ್ಷಿಯೊಬ್ಬರು ಹೇಳಿದ್ದಾರೆ.
ರೈತ ಸಂತ್ರಸ್ತರಿಗೆ ಪ್ರಿಯಾಂಕಾ, ರಾಹುಲ್ ಸಂತೈಕೆ
ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಇತ್ತೀಚೆಗೆ ರೈತರ ಮೇಲೆ ನಡೆದ ಹಿಂಸಾಚಾರ ಪ್ರಕರಣದ ಸಂತ್ರಸ್ತ ಕುಟುಂಬಗಳನ್ನು ಬುಧವಾರ ರಾತ್ರಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ಸಂತೈಸಿದರು.
ಪಾಲಿಯಾ ಗ್ರಾಮದ ಲವ್ಪ್ರೀತ್ ಸಿಂಗ್ ಎಂಬ ಮೃತ ರೈತನ ಮನೆಗೆ ಆಗಮಿಸಿದ ಉಭಯ ನಾಯಕರು ಸಂತಾಪ ಸೂಚಿಸಿದರು ಹಾಗೂ ಉಭಯ ನಾಯಕರು ಕುಟುಂಬಸ್ಥರನ್ನು ಬಿಗಿದಪ್ಪಿ ಸಾಂತ್ವನ ಹೇಳಿದರು ಹಾಗೂ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.
ಈ ವೇಳೆ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ಕಾಂಗ್ರೆಸ್ ನೇತಾರ ದೀಪೇಂದರ್ ಹೂಡಾ ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ