ನಿತೀಶ್ ಸರ್ಕಾರ ಕೆಡವಲು ಜೈಲಿನಿಂದಲೇ ಲಾಲು ಆಪರೇಷನ್!

Published : Nov 26, 2020, 08:28 AM IST
ನಿತೀಶ್ ಸರ್ಕಾರ ಕೆಡವಲು ಜೈಲಿನಿಂದಲೇ ಲಾಲು ಆಪರೇಷನ್!

ಸಾರಾಂಶ

ಬಿಹಾರದಲ್ಲಿ ಅಧಿಕಾರಕ್ಕೇರಿದ ಎನ್‌ಡಿಎ| ಕೂದಲೆಳೆ ಅಂತರದಲ್ಲಿ ಸೋಲನುಭವಿಸಿದ್ದ ಆರ್‌ಜೆಡಿ| ಮತ್ತೆ ಅಧಿಕಾರಕ್ಕೇರಲು ಲಾಲು ಸಾಹಸ

ಪಾಟ್ನಾ(ನ.26):  ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೂದಲೆಳೆ ಅಂತರದಲ್ಲಿ ಸೋತಿರುವ ಆರ್ಜೆಡಿ ಈಗ ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದು ತೇಜಸ್ವಿ ಯಾದವ್ಕ ಅವರನ್ನು ಮುಖ್ಯಮಂತ್ರಿ ಮಾಡಲು ಸಂಚು ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. 

ಮೇವು ಹಗರಣದಲ್ಲಿ ಶಿಕ್ಷೆಗೆ ಒಳಪಟ್ಟು ಜೈಲು ಪಾಲಾಗಿ ಈಗ ರಾಂಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತ್ತಿರುವ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರು ನಿತೀಶ್ ಸರ್ಕಾರವನಮ್ನು ಬೀಳಿಸಲು ಎನ್‌ಡಿಎ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆಂದು ಬಿಜೆಪಿ ಮುಖಂಡ ಸುಶೀಲ್ ಮೋದಿ ಆರೋಪಿಸಿದ್ದಾರೆ. 

ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಲಲನ್ ಕುಮಾರ್ ಜೊತೆ ಲಾಲು ಮಾತನಾಡಿದ್ದಾರೆ ಎನ್ನಲಾದ ಫೋನ್ ಸಂಭಾಷಣೆ ಆಡಿಯೋ ತಮ್ಮ ಟ್ವಿಟರ್ ಖಾತೆಯಲ್ಲಿ ಸುಶೀಲ್ ಮೋದಿ ಬಹಿರಂಗಪಡಿಸಿದ್ದಾರೆ. ಹೀಗಿರುವಾಗಲೇ ಆ ಆಡಿಯೋ ನಿಜವೆಂದು ಲಲನ್ ಹೇಳಿದ್ದು, ಸುಶೀಲ್ ಸಮ್ಮುಖದಲ್ಲೇ ನನಗೆ ಲಾಲು ಫೋನ್ ಬಂತು. ಅದನ್ನು ತಿಳಿಯದೆ ಲಾಲು ನನಗೆ ಆಮಿಷ ಒಡ್ಡಿದರು ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!