
Justice After 40 years: ಸುಪ್ರೀಂ ಕೋರ್ಟ್ ರಾಜಸ್ಥಾನದಲ್ಲಿ 40 ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ. ರಾಜಸ್ಥಾನ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿ, ಕೆಳ ನ್ಯಾಯಾಲಯ ವಿಧಿಸಿದ್ದ ಏಳು ವರ್ಷಗಳ ಶಿಕ್ಷೆಯನ್ನು ಎತ್ತಿಹಿಡಿದಿದೆ. ಆರೋಪಿಗೆ 7 ವರ್ಷ ಶಿಕ್ಷೆಯನ್ನು ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರ ಪೀಠವು ಎತ್ತಿ ಹಿಡಿದಿದೆ.ತೀರ್ಪು ಪ್ರಕಟಿಸುವ ವೇಳೆ "ಈ ಅಪ್ರಾಪ್ತ ಬಾಲಕಿ ಮತ್ತು ಆಕೆಯ ಕುಟುಂಬವು ಈ ಭಯಾನಕ ಅಧ್ಯಾಯವನ್ನು ಕೊನೆ ಮಾಡಲು ತಮ್ಮ ಜೀವನದ ಸುಮಾರು ನಾಲ್ಕು ದಶಕಗಳನ್ನು ಕಳೆಯಬೇಕಾಗಿರುವುದು ಅತ್ಯಂತ ದುಃಖಕರವಾಗಿದೆ" ಎಂದು ಹೇಳಿದೆ.
1986ರಲ್ಲಿ ನಡೆದ ಘಟನೆಯಲ್ಲಿ ಸಂತ್ರಸ್ತೆ ಅಪ್ರಾಪ್ತ ವಯಸ್ಕಳಾಗಿದ್ದಳು ಮತ್ತು 21 ವರ್ಷದ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನವೆಂಬರ್ 1987 ರಲ್ಲಿ, ಕೆಳ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
40 ವರ್ಷಗಳ ಹಿಂದೆ ನಡೆದ ಘಟನೆ: 40 ವರ್ಷಗಳ ಹಿಂದೆ ಒಂದು ಭಯಾನಕ ಘಟನೆ ಸಂಭವಿಸಿತ್ತು, ಇದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಎಲ್ಲಾ ರೀತಿಯ ಕ್ರೌರ್ಯಗಳನ್ನು ಎಸಗಲಾಗಿತ್ತು. ಗುಲಾಬ್ ಚಂದ್ ಎಂಬ ವ್ಯಕ್ತಿಯು ಆಕೆಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಗಮನಿಸಿದ್ದ. ಆಕೆಯ ಜನನಾಂಗದಿಂದ ರಕ್ತಸ್ರಾವವಾಗುತ್ತಿತ್ತು. ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿಸಲಾಗಿತ್ತು.
ಕುಮಾರಸ್ವಾಮಿ ಸರ್ಕಾರ ಬೀಳಿಸಿದ್ದ ಜಿಮ್ ಸೋಮನ ವಿರುದ್ಧ ರೇಪ್ ಕೇಸ್!
1986ರ ಮಾರ್ಚ್ 4ರಂದು, ಗುಲಾಬ್ ಚಂದ್ ಈ ಭಯಾನಕ ಘಟನೆಯ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈಗ, ಸುಪ್ರೀಂ ಕೋರ್ಟ್ನ ಈ ತೀರ್ಪಿನೊಂದಿಗೆ ಪ್ರಕರಣವು ಕೊನೆಗೊಳ್ಳಲಿದೆ. ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಒಂದು ಮಹತ್ವದ ಹೇಳಿಕೆ ನೀಡಿದ್ದು, "ಸಂತ್ರಸ್ತೆಯ ಮೌನವನ್ನು ಆಕೆಯ ಮೇಲೆ ಯಾವುದೇ ಅಪರಾಧ ನಡೆದಿಲ್ಲ ಎಂದು ಭಾವಿಸುವುದು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ" ಎಂದಿದೆ.
22 ವರ್ಷದ ಲಿವ್ ಇನ್ ಬಳಿಕ ಪ್ರಿಯಕರನ ವಿರುದ್ಡ ರೇಪ್ ಕೇಸ್; ಮಹಿಳೆ ಕೇಸ್ ರದ್ದುಪಡಿಸಿದ ಹೈಕೋರ್ಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ