
ಶಿಮ್ಲಾ: ಮಳೆ ನಿಂತರೂ ಮಳೆ ಹನಿ ನಿಂತಿಲ್ಲ ಎಂಬಂತೆ ಮಳೆಯಿಂದ ತೀವ್ರ ಹಾನಿಗೊಳಗಾಗಿದ್ದ ಹಿಮಾಚಲ ಪ್ರದೇಶದಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ನಿರ್ಮಾಣ ಹಂತದ ಕಟ್ಟಡಗಳು ಸೇರಿದಂತೆ ಹಲವು ಕಟ್ಟಡಗಳು ಧರಾಶಾಹಿಯಾಗಿವೆ. ಬಹುಮಹಡಿಯ 6ಕ್ಕೂ ಹೆಚ್ಚು ಕಟ್ಟಡಗಳು ಒಮ್ಮಿಂದೊಮ್ಮೆಲೆ ಕುಸಿದು ಬಿದ್ದಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆ ಆಗಿದ್ದು ವೈರಲ್ ಆಗಿವೆ. ಹಿಮಾಚಲ ಪ್ರದೇಶ (Himachal Pradesh) ಕುಲು (Kulu) ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇದರಿಂದ ಪ್ರಾಣಹಾನಿಯಾದ ಬಗ್ಗೆ ವರದಿ ಆಗಿಲ್ಲ,
ಕುಲು ಜಿಲ್ಲೆಯ ಅನ್ನಿ ನಗರದಲ್ಲಿ ಈ ಅನಾಹುತ ಸಂಭವಿಸಿದೆ. ಹಲವು ಕಟ್ಟಡಗಳು ಕುಸಿದಿದ್ದು, ಇದರ ಜೊತೆಗ ಇನ್ನು ಹಲವು ಕಟ್ಟಡಗಳಿಗೆ (Building) ಹಾನಿಯಾಗಿವೆ. ಮಳೆಯಿಂದ ಇಲ್ಲಿ ಭೂಮಿ ಬಿರುಕು ಬಿಟ್ಟಿತ್ತು. ಹೀಗಾಗಿ ಕಟ್ಟಡಗಳು ಈ ಮೊದಲೇ ಶಿಥಿಲಗೊಂಡಿದ್ದು, ಬೀಳುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಕಟ್ಟಡದಲ್ಲಿ ವಾಸವಿದ್ದವರನ್ನು ಆಡಳಿತವೂ ಈಗಾಗಲೇ ತೆರವುಗೊಳಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಗೌರಿಕುಂಡ್ನಲ್ಲಿ ಭೂಕುಸಿತಕ್ಕೆ 4 ಬಲಿ, 16 ಜನ ನಾಪತ್ತೆ, ಕೇದಾರನಾಥ ಯಾತ್ರೆ ಸ್ಥಗಿತ
ಕಟ್ಟಡದಲ್ಲಿ ಬಿರುಕು ಕಂಡು ಬಂದಿತ್ತು. ಹೀಗಾಗಿ ಎರಡು ಮೂರು ದಿನಗಳ ಹಿಂದೆಯೇ ಕಟ್ಟಡದ ಮಾಲೀಕರು ಕಟ್ಟಡದಲ್ಲಿ ವಾಸವಿದ್ದವರನ್ನು ತೆರವು ಮಾಡಿದ್ದರು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಭೂಮಿಯೊಳಗಿನ ಬಿರುಕಿನಿಂದಾಗಿ ಈ ಕಟ್ಟಡದಲ್ಲೂ ಬಿರುಕು ಕಾಣಿಸಿಕೊಂಡಿತ್ತು ಹೀಗಾಗಿ 4 ದಿನದಿಂದ ಈ ಕಟ್ಟಡದಲ್ಲಿ ಯಾರೂ ವಾಸ ಮಾಡುತ್ತಿರಲಿಲ್ಲ ಎಂದು ಅನ್ನಿ ನಗರದ ನಿವಾಸಿ ವೇಣು ಶರ್ದ್ ಹೇಳಿದ್ದಾರೆ. ಚರಂಡಿ ವ್ಯವಸ್ಥೆಯ ಕೊರತೆಯೇ ಈ ಕಟ್ಟಡಗಳ ಕುಸಿತಕ್ಕೆ ಕಾರಣ ಎಂದು ಅವರು ದೂರಿದ್ದಾರೆ. ಇಲ್ಲಿ ಕಡಿದಾದ ಸ್ಥಳದಲ್ಲಿಯೂ ಕಟ್ಟಡಗಳನ್ನು ನಿರ್ಮಿಸಲಾಗಿತ್ತು.
ಹೆಂಡ್ತಿ, ಮಕ್ಕಳ ಸಾವಿನ ಸ್ಮಾರಕವಾಗಿ ಬಡಜನರಿಗೆ ಮನೆ ನಿರ್ಮಿಸಿಕೊಟ್ಟ ಕುಟುಂಬ ಪ್ರೇಮಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ