
ನವದೆಹಲಿ(ಆ.10): ಪ್ರವಾಹ ಹಾಗೂ ಭೂ ಕುಸಿತದಿಂದ ದೇಶದೆಲ್ಲೆಡೆ ಭಾರೀ ಅನಾಹುತಗಳು ಸಂಭವಿಸಿದ್ದು, ಪ್ರಸಕ್ತ ಮುಂಗಾರು ಋುತುವಿನಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ 900ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಮಳೆ ಸಂಬಂಧಿ ಅನಾಹುತದಲ್ಲಿ 74 ಮಂದಿ ಸಾವಿಗೀಡಾಗಿದ್ದಾರೆ.
'ಆಸ್ಪತ್ರೆಯಲ್ಲಿದ್ದೇನೆ, ಬರಲಾಗ್ತಿಲ್ಲ ನೆರೆ ಬಗ್ಗೆ ಎಚ್ಚರಿಕೆ ವಹಿಸಿ'
ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು 239 ಮಂದಿ, ಅಸ್ಸಾಂನಲ್ಲಿ 136, ಗುಜರಾತ್ನಲ್ಲಿ 87 ಮತ್ತು ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ತಲಾ 74 ಮಂದಿ ಸಾವಿಗೀಡಾಗಿದ್ದಾರೆ. ಶುಕ್ರವಾರ ಕೇರಳದಲ್ಲಿ ಭೂಕುಸಿತದಿಂದ 23 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 33ಕ್ಕೆ ಏರಿಕೆ ಆಗಿದೆ. ಬಿಹಾರದಲ್ಲಿ ಪ್ರವಾಹಕ್ಕೆ 69 ಲಕ್ಷ ಮಂದಿ ಸಂತ್ರಸ್ತರಾಗಿದ್ದರೆ, ಅಸ್ಸಾಂನಲ್ಲಿ 57 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ.
ಬ್ರಹ್ಮಗಿರಿ ಬೆಟ್ಟಕುಸಿತ: ರಕ್ಷಣಾ ಕಾರ್ಯಕ್ಕೆ ಭಾರತೀಯ ಸೇನೆ!
ಕಳೆದ 10 ದಿನಗಳ ಅವಧಿಯಲ್ಲಿ ರಾಜ್ಯಗಳಲ್ಲಿ ಮಳೆ ಹಾಗೂ ಪ್ರವಾಹದಿಂದ 200ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 900 ದಾಟಿದೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಾವಿನ ಕುರಿತಾದ ವರದಿಗಳು ಲಭ್ಯವಾಗದ ಕಾರಣ ಸಾವು ನೋವಿನ ಸಂಖ್ಯೆ ಇನ್ನಷ್ಟುಹೆಚ್ಚುವ ಅಪಾಯ ಎದುರಾಗಿದೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ