
ನವದೆಹಲಿ(ಮೇ. 12): ಪಾಕಿಸ್ತಾನ ಮೂಲದ ಲಷ್ಕರ್-ಎ- ತೊಯ್ಬಾ ಉಗ್ರ ಸಂಘಟನೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಜೊತೆಗೂಡಿ ಜಮ್ಮು- ಕಾಶ್ಮೀರ ಮತ್ತು ದೇಶದ ಇತರ ಭಾಗಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಪಾಕಿಸ್ತಾನ ಗಢ ಗಢ: ಗಡಿಯಲ್ಲಿ ಯುದ್ಧ ವಿಮಾಗಳ ಹಾರಾಟ, ಮತ್ತಷ್ಟು ಕಣ್ಗಾವಲು!
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ಭದ್ರತೆಯೊಂದಿಗೆ ಭಾನುವಾರದಂದು ಇಸ್ಲಾಮಾಬಾದ್ನಲ್ಲಿರುವ ತನ್ನ ತೋಟದ ಮನೆಯಲ್ಲಿ ದಾವೂದ್ ಕಾಣಿಸಿಕೊಂಡಿದ್ದಾನೆ. ಈ ವೇಳೆ ಲಷ್ಕರ್ ಮುಖಂಡರ ಜೊತೆ ಆತ ಮಾತುಕತೆ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಭಾರತ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಗಮನ ಕೇಂದ್ರೀಕರಿಸಿರುವ ಸಂದರ್ಭದಲ್ಲಿ, ದೇಶದಲ್ಲಿ ಹಿಂಸಾಚಾರ ಸೃಷ್ಟಿಸಲು ಐಐಎಸ್ ಯೋಜನೆ ರೂಪಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ