
ತಿರುವನಂತಪುರ(ಮಾ.20): ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ಡಿಎಫ್ ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಗುರುವಾರ ಸಿಪಿಎಂ ರಾಜ್ಯ ಕಾರ್ಯದರ್ಶಿ ಎ ವಿಜಯನ್, ಸಿಪಿಐ ಕಾರ್ಯದರ್ಶಿ ಕಣ್ಣನ್ ರಾಜೇಂದ್ರನ್ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ರಾಜ್ಯದ ಯುವಕರಿಗಾಗಿ 40 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಾಗುತ್ತದೆ ಹಾಗೂ ಎಲ್ಲಾ ಕುಟುಂಬದ ಮಹಿಳೆಯರಿಗೆ ಪಿಂಚಣಿ ಯೋಜನೆ ನೀಡಲಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.
- ಪ್ರತೀ ಕೇಜಿ ರಬ್ಬರ್ಗೆ 250 ರು. ಬೆಂಬಲ ಬೆಲೆ
- ಮೊಟ್ಟೆು, ಹಾಲು, ತರಕಾರಿಗೂ ಬೆಂಬಲ ಬೆಲೆ
- ಕರಾವಳಿಯ ಅಭಿವೃದ್ಧಿಗೆ 5000 ಕೋಟಿ ರು.
- ಸಾಮಾಜಿಕ ಭದ್ರತೆಯ ಪಿಂಚಣಿ 2500 ಕೋಟಿ ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ