ನಗರದೊಳಗೆ ಬಂದ ಚಿರತೆ ಸೀದಾ ಮದ್ಯದಂಗಡಿಗೆ ನುಗ್ಗಿತು; ಬಾರ್‌ನಲ್ಲಿದ್ದೋರ ಎಣ್ಣೆ ಕಿಕ್ ಸರ್‌... ಅಂತಾ ಇಳಿದೋಯ್ತು!

Published : Jul 21, 2026, 05:21 PM IST
Leopard in liquor shop

ಸಾರಾಂಶ

ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆಯೊಂದು, ಮೂವರ ಮೇಲೆ ದಾಳಿ ಮಾಡಿ ಮದ್ಯದಂಗಡಿಯೊಳಗೆ ಅವಿತುಕೊಂಡಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಸುಮಾರು ಐದು ಗಂಟೆಗಳ ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ.

ರಾಜಸ್ಥಾನದ ಟೋಂಕ್ ಪಟ್ಟಣದಲ್ಲಿ ಚಿರತೆಯೊಂದು ದಿಢೀರ್ ಪ್ರತ್ಯಕ್ಷವಾಗಿ (Sighted) ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಜನವಸತಿ ಪ್ರದೇಶಕ್ಕೆ (Residential Area) ನುಗ್ಗಿದ ಈ ಚಿರತೆ, ನೇರವಾಗಿ ಮದ್ಯದಂಗಡಿಯೊಂದರೊಳಗೆ (Liquor Shop) ಹೋಗಿ ಅವಿತುಕೊಂಡಿದೆ. ಈ ಅನಿರೀಕ್ಷಿತ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಮೂವರ ಮೇಲೆ ದಾಳಿ:

ಚಿರತೆಯು ಮದ್ಯದಂಗಡಿಯೊಳಗೆ ಪ್ರವೇಶಿಸುವ ಮುನ್ನ ನಡೆಸಿದ ದಾಳಿಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ. ಜನವಸತಿ ಪ್ರದೇಶದಲ್ಲಿ ಅತ್ತ ಇತ್ತ ಓಡಾಡುತ್ತಿದ್ದ ಚಿರತೆಯನ್ನು ಕಂಡ ಜನ ಭಯಭೀತರಾಗಿ ಕಿರುಚುತ್ತಾ ಓಡುತ್ತಿದ್ದಾಗ, ಎದುರಿಗೆ ಸಿಕ್ಕವರ ಮೇಲೆ ಚಿರತೆ ದಾಳಿ ಮಾಡಿದೆ. ಗಾಯಾಳುಗಳನ್ನು (Injured) ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

5 ಗಂಟೆಗಳ ರೋಚಕ ಕಾರ್ಯಾಚರಣೆ:

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ (Forest Department) ಅಧಿಕಾರಿಗಳು ಮತ್ತು ಸಿಬ್ಬಂದಿ, ಚಿರತೆ ಸೆರೆಹಿಡಿಯುವ ಕಾರ್ಯಾಚರಣೆ (Rescue Operation) ಆರಂಭಿಸಿದರು. ಮದ್ಯದಂಗಡಿಯ ಸುತ್ತಲೂ ಜಮಾಯಿಸಿದ್ದ ಜನರನ್ನು ನಿಯಂತ್ರಿಸಿ, ಅಂಗಡಿಗೆ ಸಂಪೂರ್ಣ ದಿಗ್ಬಂಧನ ವಿಧಿಸಲಾಯಿತು. ಸುಮಾರು ಐದು ಗಂಟೆಗಳ ಕಾಲ ಸತತ ಪ್ರಯತ್ನದ ನಂತರ, ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ ಮದ್ದು (Tranquilizer) ನೀಡಿ ಚಿರತೆಯನ್ನು ಪ್ರಜ್ಞೆ ತಪ್ಪಿಸುವಲ್ಲಿ ಯಶಸ್ವಿಯಾದರು.

ಅರವಳಿಕೆ ಚುಚ್ಚುಮದ್ದು (Tranquilizer Gun) ಬಳಸಿ ಚಿರತೆಯನ್ನು ನಿತ್ರಾಣಗೊಳಿಸಿದ ನಂತರ, ಅದನ್ನು ಸುರಕ್ಷಿತವಾಗಿ ಬೋನಿಗೆ (Cage) ಹಾಕಿ ಸ್ಥಳದಿಂದ ಅರಣ್ಯ ಪ್ರದೇಶಕ್ಕೆ ರವಾನಿಸಲಾಯಿತು. ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದ ನಂತರವೇ ಸ್ಥಳೀಯರು ನಿಟ್ಟುಸಿರು ಬಿಟ್ಟರು.

 

 

ನೆಟ್ಟಿಗರ ಅಚ್ಚರಿ:

ಜನವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಇದೇ ಮೊದಲೇನಲ್ಲವಾದರೂ, ಮದ್ಯದಂಗಡಿಯೊಳಗೆ ನುಗ್ಗಿದ್ದು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ (Social Media) ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯ ವಿಡಿಯೋಗಳು ಈಗ ವೈರಲ್ (Viral) ಆಗುತ್ತಿದ್ದು, ಜನರು ತರಹೇವಾರಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಸದ್ಯ ಸೆರೆಹಿಡಿದ ಚಿರತೆಯನ್ನು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲು ಇಲಾಖೆ ಸಿದ್ಧತೆ ನಡೆಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Delhi Protest: ಸುಮ್ಮನೆ ಹೊರಟಿದ್ದೆ, ಬೈದು ಫೋನ್ ಒಡೆದ್ರು! ಜಂತರ್ ಮಂತರ್‌ನಲ್ಲಿ ಕಣ್ಣೀರಿಟ್ಟ ಯುವಕನ ಕರುಣಾಜನಕ ಕಥೆ!
ಹನಿಮೂನ್​ ಹಂತಕಿ ಸೋನಂ ರಘುವಂಶಿಗೆ ಎರಡು ಆಯ್ಕೆ ಕೊಟ್ಟ ಸುಪ್ರೀಂ ಕೋರ್ಟ್​: ಏನದು? ಮುಂದೇನು