ಚಿರತೆಗೆ ಡಿಕ್ಕಿ ಹೊಡೆದ ಕಾರು : ಸಾವಿನಿಂದ ಸ್ವಲ್ಪದರಲ್ಲೇ ಪಾರು

Published : Jun 21, 2022, 03:36 PM IST
ಚಿರತೆಗೆ ಡಿಕ್ಕಿ ಹೊಡೆದ ಕಾರು : ಸಾವಿನಿಂದ ಸ್ವಲ್ಪದರಲ್ಲೇ ಪಾರು

ಸಾರಾಂಶ

ಜನನಿಬಿಡ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಚಿರತೆಯೊಂದಕ್ಕೆ ಕಾರು ಡಿಕ್ಕಿ ಆಗಿದೆ. ಕಾರು (Car)  ಡಿಕ್ಕಿ ಹೊಡೆದ ರಭಸಕ್ಕೆ ಚಿರತೆ ಕಾರಿನ ಮುಂಭಾಗದ ಬೊನೆಟ್‌ಗೆ ಸಿಲುಕಿದೆ. ನಂತರ ಸವರಿಸಿಕೊಂಡು ವಾಹನದಿಂದ ಬಿಡಿಸಿಕೊಂಡು ಅಲ್ಲಿಂದ ಚಿರತೆ ಪರಾರಿಯಾಗಿದೆ.

ಇತ್ತೀಚೆಗೆ ಕಾಡಿನ ಪ್ರಾಣಿಗಳು (Wild Animal) ಆಹಾರ ಅರಸಿ ನಾಡಿನತ್ತ ಬಂದು ಅಪಾಯಕ್ಕೆ ಸಿಲುಕುವುದು ಸಾಮಾನ್ಯ ಎನಿಸಿದೆ. ನಿನ್ನೆಯಷ್ಟೇ ಮಹಾರಾಷ್ಟ್ರದಲ್ಲಿ ಆಹಾರ ಅರಸಿ ಬಂದಿದ್ದ ಚಿರತೆಯೊಂದು ತೆರೆದ ಬಾವಿಗೆ ಬಿದ್ದಿತ್ತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಚಿರತೆಯನ್ನು ರಕ್ಷಿಸಿದ್ದರು. ಈಗ ಜನನಿಬಿಡ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಚಿರತೆಯೊಂದಕ್ಕೆ ಕಾರು ಡಿಕ್ಕಿ ಆಗಿದೆ. ಕಾರು (Car)  ಡಿಕ್ಕಿ ಹೊಡೆದ ರಭಸಕ್ಕೆ ಚಿರತೆ ಕಾರಿನ ಮುಂಭಾಗದ ಬೊನೆಟ್‌ಗೆ ಸಿಲುಕಿದೆ. ನಂತರ ಸವರಿಸಿಕೊಂಡು ವಾಹನದಿಂದ ಬಿಡಿಸಿಕೊಂಡು ಅಲ್ಲಿಂದ ಚಿರತೆ ಪರಾರಿಯಾಗಿದೆ. ಅಪಘಾತದಿಂದ ಚಿರತೆ ಗಂಭೀರ ಗಾಯಗೊಂಡಿದೆ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Social Media)  ವೈರಲ್ ಆಗಿದ್ದು, ಡಿಕ್ಕಿ ಹೊಡೆದ ನಂತರ ಚಿರತೆಯೂ ಕಾರಿನ ಮುಂಭಾಗದ ಭಾಗದಲ್ಲಿ ಅಪಾಯಕಾರಿಯಾಗಿ ಸಿಲುಕಿಕೊಂಡಿದೆ. ಐಎಫ್‌ಎಸ್ ಅಧಿಕಾರಿ ಸುಶಾಂತ ನಂದಾ (Susanta Nanda) ಅವರು ಟ್ವಿಟ್ಟರ್‌ನಲ್ಲಿ (Twitter) ಈ ವೀಡಿಯೊವನ್ನು (Video) ಹಂಚಿಕೊಂಡಿದ್ದಾರೆ ಮತ್ತು ಚಿರತೆಯ ಸ್ಥಿತಿಯ ಬಗ್ಗೆ  ಅವರು ಮತ್ತೆ ಅಪ್‌ಡೇಟ್ ನೀಡಿದ್ದಾರೆ. ಆದರೆ ಈ ವಿಡಿಯೋದ ಭಯಾನಕತೆ ನೆಟ್ಟಿಗರನ್ನು ಕೆರಳಿಸಿದೆ.

ಅಪಘಾತದ ಬಳಿಕ ಚಿರತೆ ಕಾರಿಗೆ ಅಂಟಿಕೊಂಡಿದ್ದು, ಮುರಿದ ಭಾಗದಿಂದ ತನ್ನನ್ನು ಬಿಡಿಸಿಕೊಳ್ಳಲು ಶ್ರಮಿಸುತ್ತಿರುವ ಭೀಕರ ದೃಶ್ಯವನ್ನು ನಂದಾ ಪೋಸ್ಟ್ ಮಾಡಿದ್ದಾರೆ. ಬಡ ಪ್ರಾಣಿ ಗಾಯಗೊಂಡು ಭಯಗೊಂಡಿರುವುದು ವೀಡಿಯೊದಿಂದ ಸ್ಪಷ್ಟವಾಗಿದೆ.

ಧುತ್ತನೇ ಬಂದು ಸೈಕಲ್ ಸವಾರನ ಮೇಲೆರಗಿದ ಚೀತಾ: ವಿಡಿಯೋ ನೋಡಿ

ನಂತರದ ಅಪ್‌ಡೇಟ್‌ನಲ್ಲಿ ಅಧಿಕಾರಿ ಸುಶಾಂತ್ ನಂದಾ, ಚಿರತೆಯೂ ಕಾರಿನಿಂದ ತನ್ನನ್ನು ಮುಕ್ತಗೊಳಿಸಿಕೊಂಡಿತು. ಅಲ್ಲದೇ ಕೂಡಲೇ ಸ್ಥಳದಿಂದ ಪಲಾಯನ ಮಾಡಿತು. ಈ ವಿಡಿಯೋವನ್ನು ಸಾವಿರಾರು ಜನ ವೀಕ್ಷಿಸಿದ್ದಾರೆ. ಚಿರತೆಗಳ ಆವಾಸಸ್ಥಾನವಾಗಿರುವ ಅರಣ್ಯ ಪ್ರದೇಶದ ದೊಡ್ಡ ಭಾಗವನ್ನು ಹೆದ್ದಾರಿಗಳು ಹೇಗೆ ಆವರಿಸಿವೆ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಕಾಡಿನ ಮೇಲಿನ ಆಕ್ರಮಣದಿಂದಾಗಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಇಂತಹ ಅವಘಡಗಳನ್ನು ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಹಲವರು ಒತ್ತಾಯಿಸಿದರು.

ತೆರೆದ ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ: ಬೋನಿಳಿಸಿ ರಕ್ಷಿಸಿದ ಅರಣ್ಯ ಸಿಬ್ಬಂದಿ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ