
ನವದೆಹಲಿ(ಏ.19): ನಿತ್ಯ 20000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ದೆಹಲಿಯಲ್ಲಿ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿದೆ ಎಂದು ಸ್ವತಃ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸದ್ಯ ರಾಜಧಾನಿಯಲ್ಲಿ ಐಸಿಯು ಸೌಲಭ್ಯ ಇರುವ ಕೇವಲ 100 ಹಾಸಿಗೆಗಳು ಮಾತ್ರವೇ ರೋಗಿಗಳಿಗೆ ಖಾಲಿ ಉಳಿದಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಅಗತ್ಯ ನೆರವು ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಸೋಂಕಿತರ ಆರೈಕೆಗೆ 2 ರೈಲ್ವೆ ನಿಲ್ದಾಣಗಳಲ್ಲಿ 5000 ಬೆಡ್ಗಳ ಕೋವಿಡ್ ಕೇರ್ ಕೋಚ್ ನಿಯೋಜಿಸುವಂತೆ ಕೋರಿದ್ದಾರೆ.
ಇದಕ್ಕೆ ತಕ್ಷಣವೇ ಸ್ಪಂದಿಸಿರುವ ರೈಲ್ವೆ ಇಲಾಖೆ 50 ಕೋವಿಡ್ ಐಸೋಲೇಶನ್ ಕೋಚ್ಗಳನ್ನು ಶುಕುರ್ ಬಸ್ತಿ ನಿಲ್ದಾಣದಲ್ಲಿ ಈಗಾಗಲೇ ನಿಯೋಜಿಸಲಾಗಿದೆ. ಇನ್ನು 25 ಕೋಚ್ಗಳನ್ನು ಆನಂದ ವಿಹಾರ್ ನಿಲ್ದಾಣದಲ್ಲಿ ನಿಯೋಜಿಸಲಾಗುವುದು ಎಂದು ಭಾನುವಾರ ಹೇಳಿದೆ.
ದಿಲ್ಲಿಯಲ್ಲಿ ಭಾನುವಾರ ಸುಮಾರು 25 ಸಾವಿರ ಕೊರೋನಾ ಪ್ರಕರಣಗಳು ವರದಿ ಆಗಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ಗಳು ಸಿಗುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ