ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಯಲ್ಲಿ ವಾಸ: ಫ್ರಿಡ್ಜ್‌ನಲ್ಲಿ ಗೋಮಾಂಸ: 11 ಜನರ ಮನೆ ಧ್ವಂಸ

Published : Jun 17, 2024, 01:14 PM ISTUpdated : Jun 17, 2024, 01:18 PM IST
 ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಯಲ್ಲಿ ವಾಸ: ಫ್ರಿಡ್ಜ್‌ನಲ್ಲಿ ಗೋಮಾಂಸ: 11 ಜನರ ಮನೆ ಧ್ವಂಸ

ಸಾರಾಂಶ

ಫ್ರಿಡ್ಜ್‌ನಲ್ಲಿ ಗೋಮಾಂಸ ಹಾಗೂ ಕೊಠಡಿಗಳಲ್ಲಿ ದನದ ಮೂಳೆ ಹಾಗೂ ಚರ್ಮಗಳನ್ನು ಶೇಖರಿಸಿಟ್ಟಿದ್ದ 11 ಜನರ ಮನೆಯನ್ನು ಸರ್ಕಾರವು ಧ್ವಂಸ ಮಾಡಿದೆ. 

ಮಂಡ್ಲಾ (ಮ.ಪ್ರ): ಫ್ರಿಡ್ಜ್‌ನಲ್ಲಿ ಗೋಮಾಂಸ ಹಾಗೂ ಕೊಠಡಿಗಳಲ್ಲಿ ದನದ ಮೂಳೆ ಹಾಗೂ ಚರ್ಮಗಳನ್ನು ಶೇಖರಿಸಿಟ್ಟಿದ್ದ 11 ಜನರ ಮನೆಯನ್ನು ಸರ್ಕಾರವು ಧ್ವಂಸ ಮಾಡಿದೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ್ದ ಕಾರಣ ನೀಡಿ ಇವರ ಮನೆಯನ್ನು ಕೆಡವಲಾಗಿದೆ. ಮಧ್ಯ ಪ್ರದೇಶದ ಮಂಡ್ಲಾದಲ್ಲಿ ಈ ಘಟನೆ ನಡೆದಿದೆ. 

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಅಕ್ರಮ ಗೋಮಾಂಸದ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿದೆ. ಇದರ ಭಾಗವಾಗಿ ಭೈನ್‌ವಾಹಿ ಎಂಬಲ್ಲಿ ದನಗಳನ್ನು ಕಡಿಯಲು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕ ಬಳಿಕ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಗಳ ಮನೆಯ ಹಿಂಭಾಗದಲ್ಲಿ 150 ಗೋವುಗಳನ್ನು ಕಟ್ಟಿಹಾಕಿದ್ದನ್ನು ಪತ್ತೆಹಚ್ಚಿದ್ದಾರೆ. ಬಳಿಕ ಮನೆಯ ಬೀಗ ಒಡೆದು ಒಳನುಗ್ಗಿದಾಗ ಮನೆಯ ಫ್ರಿಡ್ಜ್‌ನಲ್ಲಿ ಗೋಮಾಂಸ, ಕೊಠಡಿಯಲ್ಲಿ, ದನದ ಚರ್ಮ, ಮೂಳೆ ಹಾಗೂ ಬೊಜ್ಜು ಸಂಗ್ರಹಿಸಿಟ್ಟಿರುವುದು ಕಂಡು ಬಂದಿದೆ. ಕೂಡಲೇ ಅವುಗಳನ್ನು ವಶಪಡಿಸಿಕೊಂಡ ಪೊಲೀಸರು, ದನಗಳನ್ನು ಗೋಶಾಲೆಗೆ ಸೇರಿಸಿ ಮನೆಯನ್ನು ಧ್ವಂಸ ಮಾಡಿದ್ದಾರೆ. ಸರ್ಕಾರಿ ಜಾಗ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಿದ ಕಾರಣ ಅವನ್ನು ಕೆಡವಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ನಡುವೆ, ಮುಸ್ಲಿಂ ಸಮುದಾಯಕ್ಕೆ ಸೇರಿರುವ ಎಲ್ಲ 11 ಆರೋಪಿಗಳ ಪೈಕಿ ಕೇವಲ ಒಬ್ಬ ಮಾತ್ರ ಸಿಕ್ಕಿದ್ದು, ಉಳಿದ 10 ಮಂದಿಗಾಗಿ ಶೋಧ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ರಮ ಗೋಮಾಂಸ ಸಾಗಾಟ; ತಡೆಯಲು ಯತ್ನಿಸಿದ ಬಜರಂಗದಳ ಕಾರ್ಯಕರ್ತರ ಮೇಲೆ ಅನ್ಯಕೋಮಿನ ವ್ಯಕ್ತಿಗಳಿಂದ ಹಲ್ಲೆ

‘ಗೋಮಾಂಸ ಪ್ರಚಾರಕಿ’ ಕಾಮಿಯಾ ಜಗನ್ನಾಥ ದೇಗುಲ ಪ್ರವೇಶ ಭಾರೀ ವಿವಾದ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್