ಕೊಲೆ ಆಗಿದ್ದ ಬಾಲಕ ಸುಪ್ರೀಂಕೋರ್ಟ್‌ ಮುಂದೆ ಹಾಜರಾಗಿ ಬದುಕಿದ್ದೇನೆ ಎಂದ..!

Published : Nov 12, 2023, 08:55 AM IST
ಕೊಲೆ ಆಗಿದ್ದ ಬಾಲಕ ಸುಪ್ರೀಂಕೋರ್ಟ್‌ ಮುಂದೆ ಹಾಜರಾಗಿ ಬದುಕಿದ್ದೇನೆ ಎಂದ..!

ಸಾರಾಂಶ

ಉತ್ತರ ಪ್ರದೇಶದ ಪೀಲಿಭೀತ್‌ನ 11 ವರ್ಷ ದ ಬಾಲಕನೊಬ್ಬ ಕೊಲೆ ಆಗಿದ್ದಾನೆ ಎಂದು ಹಲವು ವರ್ಷಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಅದೇ ಬಾಲಕ ಶುಕ್ರವಾರ ಸುಪ್ರೀಂಕೋರ್ಟ್ (Supreme Court) ಮುಂದೆ ಹಾಜರಾಗಿ ತಾನು ಬದುಕಿದ್ದೇನೆ ಎಂದು ಹೇಳಿ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದಾನೆ. 

ನವದೆಹಲಿ: ಇದೊಂದು ವಿಚಿತ್ರ ಘಟನೆ. ಉತ್ತರ ಪ್ರದೇಶದ ಪೀಲಿಭೀತ್‌ನ 11 ವರ್ಷ ದ ಬಾಲಕನೊಬ್ಬ ಕೊಲೆ ಆಗಿದ್ದಾನೆ ಎಂದು ಹಲವು ವರ್ಷಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಅದೇ ಬಾಲಕ ಶುಕ್ರವಾರ ಸುಪ್ರೀಂಕೋರ್ಟ್ (Supreme Court) ಮುಂದೆ ಹಾಜರಾಗಿ ತಾನು ಬದುಕಿದ್ದೇನೆ ಎಂದು ಹೇಳಿ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದಾನೆ. ಆದರೆ ಕೊಲೆ ಆರೋಪ ಹೊತ್ತಿದ್ದ ಆತನ ಅಜ್ಜ ಹಾಗೂ ಮಾವಂದಿರು ಇದರಿಂದ ನಿರಾಳರಾಗಿದ್ದಾರೆ.

ಸಂತ್ರಸ್ತ ಬಾಲಕನ ಹೆಸರು ಅಭಯ್‌ ಸಿಂಗ್‌ (Abhay Singh), ಈತನ ತಂದೆಯ ಮನೆಯವರು ಅಭಯ್‌ನ ಅಮ್ಮನನ್ನು ವರದಕ್ಷಿಣೆಗಾಗಿ ಪೀಡಿಸಿ ಹೊಡೆಯುತ್ತಿದ್ದರು. ಹೀಗಾಗಿ ಈತ ತಂದೆ ಮನೆಯಲ್ಲಿರದೇ 2013ರಿಂದ ತಾಯಿಯ ತವರು ಮನೆಯಲ್ಲೇ ಅಜ್ಜ-ಅಜ್ಜಿಯೊಂದಿಗೆ ವಾಸಿಸುತ್ತಿದ್ದ. ಇದರ ನಡುವೆ ಈತನ ತಾಯಿ ಕೆಲವು ವರ್ಷದ ಹಿಂದೆ ತೀರಿ ಹೋಗಿದ್ದರು. ಹೀಗಾಗಿ ತಾಯಿಯ ಮನೆ ಕಡೆಯವರು, ಅಭಯ್‌ನ ತಂದೆ ಮೇಲೆ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ಅಭಯ್‌ ತಂದೆ ಕೊಲೆ ಕತೆ ಸೃಷ್ಟಿಸಿ, ಆತನ ಅಜ್ಜ ಹಾಗೂ ಸೋದರ ಮಾವಂದಿರ ವಿರುದ್ಧ ಕೊಲೆ ಕೇಸು ದಾಖಲಿಸಿದ್ದ.

ಪಂಜಾಬ್‌ ಗೌರ್ನರ್‌ಗೆ ಸುಪ್ರೀಂ ಚಾಟಿ: ಮಸೂದೆಗೆ ಸಹಿ ಹಾಕದ್ದಕ್ಕೆ ರಾಜ್ಯಪಾಲರಿಗೆ ತೀವ್ರ ತರಾಟೆ

ಆದರೆ ಇದರ ವಿರುದ್ಧ ಬಾಲಕ ಹಲವು ಬಾರಿ ಕೆಳ ನ್ಯಾಯಾಲಯದಲ್ಲಿ ತಾನು ಬದುಕಿದ್ದೇನೆ. ತನ್ನ ಕೊಲೆ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ. ಆದರೂ ಯಾವ ನ್ಯಾಯಾಲಯವೂ ಆತನ ವಾದ ಮನ್ನಿಸಿರಲಿಲ್ಲ. ಹೀಗಾಗಿ ಬಾಲಕ ಸುಪ್ರೀಂ ಮೊರೆ ಹೋಗಿದ್ದ.

2018ರ ಪಟಾಕಿ ನಿಷೇಧ ಇಡೀ ದೇಶಕ್ಕೆ ಅನ್ವಯ: ಸುಪ್ರೀಂಕೋರ್ಟ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ