ಸಾಲ ಮನ್ನಾ ಎಂಬುದು ರೈತರಿಗೆ ಚಟ : ಅಜಿತ್‌ ಪವಾರ್‌

Kannadaprabha News   | Kannada Prabha
Published : Nov 03, 2025, 05:12 AM IST
Ajit Pawar

ಸಾರಾಂಶ

‘ರೈತರು ಸಾಲ ಮನ್ನಾ ಮಾಡಿ ಎಂಬ ಬೇಡಿಕೆಯನ್ನು ಚಟವಾಗಿಸಿಕೊಂಡಿದ್ದಾರೆ. ಎಷ್ಟಂತ ಸಾಲ ಮನ್ನ ಮಾಡುವುದಕ್ಕಾಗುತ್ತದೆ? 2024ರಲ್ಲಿ ಚುನಾವಣೆ ಗೆಲ್ಲುವುದಕ್ಕೋಸ್ಕರ ಹೇಳಿದ್ದೆವು. ಅದರ ಈಡೇರಿಕೆ ಕಷ್ಟ’ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಹೇಳಿದ್ದಾರೆ.

ಮುಂಬೈ: ‘ರೈತರು ಸಾಲ ಮನ್ನಾ ಮಾಡಿ ಎಂಬ ಬೇಡಿಕೆಯನ್ನು ಚಟವಾಗಿಸಿಕೊಂಡಿದ್ದಾರೆ. ಎಷ್ಟಂತ ಸಾಲ ಮನ್ನ ಮಾಡುವುದಕ್ಕಾಗುತ್ತದೆ? 2024ರಲ್ಲಿ ಚುನಾವಣೆ ಗೆಲ್ಲುವುದಕ್ಕೋಸ್ಕರ ಹೇಳಿದ್ದೆವು. ಅದರ ಈಡೇರಿಕೆ ಕಷ್ಟ’ ಎಂದು ಮಹಾರಾಷ್ಟ್ರ ಡಿಸಿಎಂ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್‌ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ರ್‍ಯಾಲಿಯಲ್ಲಿ ಮಾತನಾಡಿದ ಅಜಿತ್‌, ‘ಈ ಹಿಂದೆ ಶರದ್‌ ಪವಾರ್‌ ಅವಧಿಯಲ್ಲಿ ಮನ್ನಾ ಮಾಡಲಾಗಿತ್ತು. ದೇವೇಂದ್ರ ಫಡ್ನವೀಸ್‌ ಮತ್ತು ಉದ್ಧವ್‌ ಠಾಕ್ರೆ ಸಿಎಂ ಆಗಿದ್ದಾಗೆಲ್ಲ ಸಾಲ ಮನ್ನಾ ಆಗಿದೆ. ಅದನ್ನು ಪ್ರತಿ ಬಾರಿ ಮಾಡಲಾಗುವುದಿಲ್ಲ. ಈಗಾಗಲೇ ಶೂನ್ಯ ಬಡ್ಡಿದರಲ್ಲಿ ಸಾಲ ನೀಡಲಾಗುತ್ತಿದೆ. ಆದರೂ ಸಾಲ ಮನ್ನಾ ಮಾಡಬೇಕೆಂದರೆ ಹೇಗೆ?’ ಎಂದು ಪ್ರಶ್ನಿಸಿದರು.

ಚುನಾವಣೆ ಗೆಲ್ಲುವುದಕ್ಕೋಸ್ಕರ ಘೋಷಣೆ

‘ಇದು ಒಳ್ಳೆ ಅಭ್ಯಾಸವಲ್ಲ. 2024ರಲ್ಲಿ ವಿಧಾನಸಭೆ ಚುನಾವಣೆ ಗೆಲ್ಲುವುದಕ್ಕೋಸ್ಕರ ಘೋಷಣೆ ಮಾಡಿದ್ದೆವು. ಈಗ ಅದನ್ನೆಲ್ಲ ಮಾಡುವುದಕ್ಕೆ ಸಾವಿರಾರು ಕೋಟಿ ರು. ಬೇಕಾಗುತ್ತದೆ’ ಎಂದು ಹೇಳಿದರು.

ವಿಪಕ್ಷಗಳ ಕಿಡಿ:

ಅಜಿತ್‌ ಪವಾರ್‌ ಹೇಳಿಕೆಗೆ ವಿಪಕ್ಷಗಳು ಕಿಡಿಕಾರಿದ್ದು, ‘ರೈತರು ಭಿಕ್ಷುಕರಲ್ಲ. ನೀವು ಅವರಿಗೆ ಭಿಕ್ಷೆ ಕೊಡುತ್ತಿಲ್ಲ. ಅವರ ಅನ್ನವೇ ನೀವು ತಿನ್ನುತ್ತಿರುವುದು. ಇದು ದುರಹಂಕಾರದ ಪರಮಾವಧಿ’ ಎಂದು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ