ಲಾಕ್‌ಡೌನ್ ನಿರ್ಧಾರ: ಮೋದಿ ಭಾಷಣದತ್ತ ದೇಶದ ಚಿತ್ತ

By Suvarna NewsFirst Published Apr 11, 2020, 5:07 PM IST
Highlights

ಕೊರೋನಾ ವೈರಸ್ ತಡೆಗೆ ಹಾಕಲಾಗಿದ್ದ 'ಭಾರತ ಲಾಕ್‌ಡೌನ್' ಏಪ್ರಿಲ್ 14 ಕ್ಕೆ ಮುಕ್ತಾಯಗೊಳ್ಳಲಿದೆ. ನಿರೀಕ್ಷೆಯಂತೆ ಪರಿಸ್ಥಿತಿ ಸುಧಾರಿಸಿದ ಕಾರಣ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.  

ಬೆಂಗಳೂರು (ಏ. 11): ಕೊರೋನಾ ವೈರಸ್ ತಡೆಗೆ ಹಾಕಲಾಗಿದ್ದ 'ಭಾರತ ಲಾಕ್‌ಡೌನ್' ಏಪ್ರಿಲ್ 14 ಕ್ಕೆ ಮುಕ್ತಾಯಗೊಳ್ಳಲಿದೆ. ನಿರೀಕ್ಷೆಯಂತೆ ಪರಿಸ್ಥಿತಿ ಸುಧಾರಿಸಿದ ಕಾರಣ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.  ಪ್ರತಿಯೊಂದು ರಾಜ್ಯಗಳಿಂದ ಕೊರೋನಾ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ಈ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಧಾನಿ ಮೋದಿ ಮಾಸ್ಕ್ ಧರಿಸಿ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ನಿರ್ಲಕ್ಷ್ಯ ಸಲ್ಲ, ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂಬ ಸಂದೇಶ ರವಾನಿಸಿದ್ದಾರೆ. 

"

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗುವ ಮುನ್ನ ಸಿಎಂ ಬಿಎಸ್ವೈ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. 

"

ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕರ್ನಾಟಕ ಏಪ್ರಿಲ್ 30 ರ ವರೆಗೆ ಬೆಂಬಲ ಸೂಚಿಸಿದೆ. ಕರ್ನಾಟಕದಲ್ಲಿ ಲಾಕ್‌ಡೌನ್ ಮುಂದುವರೆಯೋದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. 

"

ಏಪ್ರಿಲ್ 14 ಕ್ಕೆ ಲಾಕ್‌ಡೌನ್ ಮುಕ್ತಾಯಗೊಳ್ಳುತ್ತಿದೆ. ಏಕಾಏಕಿ ತೆರವುಗೊಳಿಸುವುದು ಬೇಡ. ಏ.30 ರ ವರೆಗೆ ಮುಂದುವರೆಯಲಿ ಎಂದು ಎಲ್ಲಾ ರಾಜ್ಯಗಳು ಒಲವು ತೋರಿಸಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ. ಅಜಾಗರೂಕತೆಯಿಂದ ಮತ್ತಷ್ಟು ಸಾವು ಸಂಭವಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

"

"

 

click me!