ಲಾಕ್‌ಡೌನ್‌ ಉಲ್ಲಂಘಿಸಿದರೆ ಈ ಕಾಯ್ದೆ ಅಡಿಯಲ್ಲಿ ಕೇಸು ಹಾಕಬಹುದು!

Kannadaprabha News   | Asianet News
Published : Apr 07, 2020, 09:53 AM IST
ಲಾಕ್‌ಡೌನ್‌ ಉಲ್ಲಂಘಿಸಿದರೆ  ಈ ಕಾಯ್ದೆ ಅಡಿಯಲ್ಲಿ  ಕೇಸು ಹಾಕಬಹುದು!

ಸಾರಾಂಶ

ಸಕಾರಣವಿಲ್ಲದೇ ಸರ್ಕಾರದ ಆದೇಶ ಪಾಲಿಸಲು ನಿರಾಕರಿಸುವ ವ್ಯಕ್ತಿಗೆ 1 ವರ್ಷದ ಜೈಲು ಶಿಕ್ಷೆ ಅಥವಾ ದಂಡ/ಆದೇಶ ಪಾಲಿಸದೇ ವ್ಯಕ್ತಿಯ ಜೀವಹಾನಿ ಇಲ್ಲವೇ ಅಪಾಯಕ್ಕೆ ದೂಡಿದರೆ 2 ವರ್ಷದವರೆಗೆ ಜೈಲು ಪಾಲಾಗುವ ಸಾಧ್ಯತೆ ಇದೆ. 

ಬೆಂಗಳೂರು (ಏ. 07):  ರಾಜ್ಯದಲ್ಲಿ ಜನರು ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟುಬಿಗಿಗೊಳಿಸಲು ನೇರವಾಗಿ ಅಖಾಡಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಇಳಿದಿದೆ.

ಈ ಬಗ್ಗೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಸೂಚನೆ ನೀಡಿರುವ ವಿಪತ್ತು ನಿರ್ವಹಣೆ ಸಮಿತಿಯ ಉಪಾಧ್ಯಕ್ಷ ಆರ್‌.ಅಶೋಕ್‌ ಅವರು, ‘ಲಾಕ್‌ಡೌನ್‌ ನಿಯಮ ಉಲ್ಲಂಘಿಸುವವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಪ್ರಕರಣ ದಾಖಲಿಸುವಂತೆ ಠಾಣಾಧಿಕಾರಿಗಳಿಗೆ ಸೂಚಿಸಿ’ ಎಂದು ನಿರ್ದೇಶಿಸಿದ್ದಾರೆ.

ವೈದ್ಯರು, ನರ್ಸ್‌ಗೇ ವೈರಸ್‌: ಮುಂಬೈ 2 ಆಸ್ಪತ್ರೆಗೆ ಬೀಗ!

ಕಾಯ್ದೆ ಏನು ಹೇಳುತ್ತೆ?:

51ನೇ ವಿಧಿ: ಸಕಾರಣವಿಲ್ಲದೇ ಸರ್ಕಾರದ ಆದೇಶ ಪಾಲಿಸಲು ನಿರಾಕರಿಸುವ ವ್ಯಕ್ತಿಗೆ 1 ವರ್ಷದ ಜೈಲು ಶಿಕ್ಷೆ ಅಥವಾ ದಂಡ/ಆದೇಶ ಪಾಲಿಸದೇ ವ್ಯಕ್ತಿಯ ಜೀವಹಾನಿ ಇಲ್ಲವೇ ಅಪಾಯಕ್ಕೆ ದೂಡಿದರೆ 2 ವರ್ಷದವರೆಗೆ ಜೈಲು

52ನೇ ವಿಧಿ: ಸರ್ಕಾರದಿಂದ ಪರಿಹಾರ, ಸಹಾಯಧನ ಪಡೆಯಲು ತಪ್ಪು ಮಾಹಿತಿ ನೀಡಿದರೆ ಅಂತಹ ದಂಡ, 2 ವರ್ಷ ಜೈಲು

53ನೇ ವಿಧಿ: ಪರಿಹಾರ ವಿತರಿಸಲು ನೀಡಿದ ಹಣ, ವಸ್ತು ಅಥವಾ ಇನ್ನಾವುದೇ ಪರಿಹಾರ ದುರುಪಯೋಗಪಡಿಸಿಕೊಂಡರೆ ದಂಡ, 2 ವರ್ಷ ಜೈಲು

54ನೇ ವಿಧಿ: ವಿಕೋಪದ ಬಗ್ಗೆ ಸುಳ್ಳು ಸುದ್ದಿ ಹರಡುವ ಮೂಲಕ ಜನರಲ್ಲಿ ಭೀತಿ ಮೂಡಿಸಿದರೆ ದಂಡ, 1 ವರ್ಷ ಜೈಲು

55ನೇ ವಿಧಿ: ಸರ್ಕಾರಿ ಅಧಿಕಾರಿ ತಪ್ಪು ಮಾಡಿದರೆ ಅಂತಹ ಅಧಿಕಾರಿ ಶಿಕ್ಷಾರ್ಹ.

56ನೇ ವಿಧಿ: ಯಾವುದೇ ಅಧಿಕಾರಿ ಕರ್ತವ್ಯ ಮಾಡಲು ನಿರಾಕರಿಸಿದರೆ ದಂಡ, 1 ವರ್ಷದವರೆಗೆ ಜೈಲು

57ನೇ ವಿಧಿ: ಆದೇಶ ತಪ್ಪಾಗಿ ಜಾರಿಗೆ ತಂದರೆ ದಂಡ, 1 ವರ್ಷದವರೆಗೆ ಜೈಲು

58ನೇ ವಿಧಿ: ಯಾವುದೇ ಕಂಪನಿ ಅಥವಾ ಕಾರ್ಪೋರೆಟ್‌ ಸಂಸ್ಥೆ ತಪ್ಪು ಮಾಡಿದರೆ ಜವಾಬ್ದಾರಿ ಹೊಂದಿದವರು ಶಿಕ್ಷಾರ್ಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!