ವಿಶ್ವ ದಾಖಲೆ ಬರೆದ ಭಾರತ! 64.2 ಕೋಟಿ ಜನರಿಂದ ಈ ಬಾರಿ ಮತದಾನ!

Published : Jun 04, 2024, 05:02 AM IST
ವಿಶ್ವ ದಾಖಲೆ ಬರೆದ ಭಾರತ! 64.2 ಕೋಟಿ ಜನರಿಂದ ಈ ಬಾರಿ ಮತದಾನ!

ಸಾರಾಂಶ

ಲೋಕಸಭೆಗೆ 7 ಹಂತದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 64.2 ಕೋಟಿ ಜನರು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ವಿಶ್ವದಾಖಲೆ ಸೃಷ್ಟಿಯಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌,

ನವದೆಹಲಿ (ಜೂ.4): ಲೋಕಸಭೆಗೆ 7 ಹಂತದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 64.2 ಕೋಟಿ ಜನರು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ವಿಶ್ವದಾಖಲೆ ಸೃಷ್ಟಿಯಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ‘

ಈ ಬಾರಿ ಚುನಾವಣೆಯಲ್ಲಿ 31.2 ಕೋಟಿ ಮಹಿಳೆಯರು, 33 ಕೋಟಿ ಪುರುಷ ಸೇರಿ ಒಟ್ಟು 64.2 ಕೋಟಿ ಜನರು ತಮ್ಮ ಮತ ಚಲಾಯಿಸಿದ್ದಾರೆ. ಇದು ವಿಶ್ವದ ಯಾವುದೇ ಒಂದು ಚುನಾವಣೆಯಲ್ಲಿ ದಾಖಲಾದ ಅತಿಹೆಚ್ಚು ಮತ ಪ್ರಮಾಣವಾಗಿದೆ. ಈ ಬಾರಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು 68000 ನಿಗಾ ತಂಡಗಳನ್ನು ನಿಯೋಜಿಸಲಾಗಿತ್ತು. 1.5 ಕೋಟಿ ಚುನಾವಣಾ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದರು.

ಇಂದು ಜಡ್ಜ್‌ಮೆಂಟ್ ಡೇ! ಮೋದಿ ಸತತ 3ನೇ ಬಾರಿಗೆ ಪ್ರಧಾನಿಯಾಗ್ತಾರಾ?

ಇಡೀ ಚುನಾವಣಾ ಪ್ರಕ್ರಿಯೆಗಾಗಿ ಒಟ್ಟು 4 ಲಕ್ಷ ವಾಹನಗಳು, 135 ವಿಶೇಷ ರೈಲು, 1692 ವಿಮಾನಗಳ ಸೇವೆ ಬಳಸಿಕೊಳ್ಳಲಾಗಿತ್ತು. ಚುನಾವಣಾ ಪ್ರಕ್ರಿಯೆ ಕೂಡಾ ಶಾಂತಿಯುತವಾಗಿತ್ತು. 2019ರಲ್ಲಿ 540 ಮತಗಟ್ಟೆಗಳಲ್ಲಿ ಮರುಮತದಾನವಾಗಿದ್ದರೆ, ಈ ಬಾರಿ ಕೇವಲ 39 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲಾಗಿದೆ. ಇನ್ನು 2019ರ ಚುನಾವಣೆ ವೇಳೆ 3500 ಕೋಟಿ ರು. ಮೊತ್ತದ ನಗದು, ಉಚಿತ ಕೊಡುಗೆ, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡಿದ್ದರೆ, ಈ ಬಾರಿ ಆ ಪ್ರಮಾಣ 10000 ಕೋಟಿ ರು. ತಲುಪಿದೆ ಎಂದು ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಎನ್‌ಡಿಎ ಅಕ್ರಮವಾಗಿ ಗೆದ್ದರೆ ಹೋರಾಟ: ಎದ್ದೇಳು ಕರ್ನಾಟಕ ಸಂಘಟನೆ ಎಚ್ಚರಿಕೆ!

ಕಾಶ್ಮೀರ ಚುನಾವಣೆಗೆ ಶೀಘ್ರದಲ್ಲೇ ಪ್ರಕ್ರಿಯೆನವದೆಹಲಿ: 370ನೇ ವಿಧಿ ರದ್ದತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವು ಶೀಘ್ರದಲ್ಲೇ ತನ್ನ ಪ್ರಕ್ರಿಯೆಗಳನ್ನು ಆರಂಭಿಸಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ