Lok Sabha Elections 2024: ಕಾಂಗ್ರೆಸ್ ಹೇಡಿ ಪಕ್ಷ: ಪ್ರಧಾನಿ ಮೋದಿ ಹರಿತ ವಾಗ್ದಾಳಿ

Published : May 05, 2024, 04:23 AM IST
Lok Sabha Elections 2024: ಕಾಂಗ್ರೆಸ್ ಹೇಡಿ ಪಕ್ಷ: ಪ್ರಧಾನಿ ಮೋದಿ ಹರಿತ ವಾಗ್ದಾಳಿ

ಸಾರಾಂಶ

ಪಾಕಿಸ್ತಾನದ ನಾಯಕರು ಕಾಂಗ್ರೆಸ್ ನ ಶೆಹಜಾದಾ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಹೆಸರು ಹೇಳದೆಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಪಲಾಮು (ಜಾರ್ಖಂಡ್‌) (ಮೇ.05): ‘ನಮ್ಮ ದೇಶದ ಸರ್ಜಿಕಲ್ ಸ್ಟ್ರೈಕ್  ಮತ್ತು ವೈಮಾನಿಕ ದಾಳಿಯಿಂದ ನೆರೆಯ ರಾಷ್ಟ್ರ ಭಯಗೊಂಡಿದೆ. ಹೀಗಾಗಿ ಪಾಕಿಸ್ತಾನದ ನಾಯಕರು ಕಾಂಗ್ರೆಸ್ ನ ಶೆಹಜಾದಾ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ’ ಎಂದು ರಾಹುಲ್‌ ಗಾಂಧಿ ಹೆಸರು ಹೇಳದೆಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ‘ಭಯೋತ್ಪಾದಕ ದಾಳಿಯ ನಂತರ, ಕಾಂಗ್ರೆಸ್‌ನ ಹೇಡಿ ಸರ್ಕಾರವು ಜಾಗತಿಕ ವೇದಿಕೆಯಲ್ಲಿ ಅಳುತ್ತಿತ್ತು. ಆದರೆ ಈಗ ಭಾರತವು ಜಾಗತಿಕ ವೇದಿಕೆಯಲ್ಲಿ ಅಳುತ್ತಿದ್ದ ಸಮಯ ಕಳೆದುಹೋಗಿದೆ. 

ಈಗ ಪಾಕಿಸ್ತಾನವು ಅಳುತ್ತಿದೆ ಮತ್ತು ಸಹಾಯಕ್ಕಾಗಿ ಕಿರುಚುತ್ತಿದೆ’ ಎಂದು ಮೋದಿ ವಿಶ್ಲೇಷಿಸಿದ್ದಾರೆ. ಜಾರ್ಖಂಡ್ ನ ಪಲಾಮುದಲ್ಲಿ ಶನಿವಾರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಮೋದಿ , ‘ಭಾರತ ಮಾತೆಗೆ ಅವಮಾನ ಮಾಡಿದರೆ ಎಂದಿಗೂ ಸಹಿಸುವುದಕ್ಕೆ ಆಗುವುದಿಲ್ಲ. ನವಭಾರತದಲ್ಲಿ ಸರ್ಜಿಕಲ್ ಸ್ಟ್ರೈಕ್‌ ಮತ್ತು ವೈಮಾನಿಕ ದಾಳಿಗೆ ಪಾಕ್ ಬೆಚ್ಚಿ ಬಿದ್ದಿದೆ. ಕಾಂಗ್ರೆಸ್ ಹಿಂದಿನಿಂದಲೂ ಭಯೋತ್ಪಾದನೆಯನ್ನು ಬೆಂಬಲಿಸಿಕೊಂಡು ಬರುತ್ತಿದೆ. 

ಹೀಗಾಗಿ ನೆರೆ ರಾಷ್ಟ್ರಗಳು ಅವರು ಪ್ರಧಾನಿಯಾಗಲಿ ಎಂದು ಬಯಸುತ್ತಿವೆ. ಆದರೆ ಭಾರತದ ಜನರು ಮಾತ್ರ ಸದೃಢ ಪ್ರಧಾನಿ ಹೊಂದಿರುವ ಬಲಿಷ್ಠ ದೇಶ ಬಯಸುತ್ತಿದೆ’ ಎಂದರು. ಇದೇ ಸಂದರ್ಭದಲ್ಲಿ ‘ಮುಸ್ಲಿಮರಿಗೆ ಮೀಸಲಾತಿ ನೀಡುವುದಕ್ಕಾಗಿ ಕಾಂಗ್ರೆಸ್ ಬದಲಿಸುವ ಸಂವಿಧಾನಕ್ಕೆ ನಾವು ಆಸ್ಪದ ನೀಡುವುದಿಲ್ಲ. 500 ವರ್ಷಗಳ ಹೋರಾಟದ ಫಲವಾಗಿರುವ ರಾಮ ಮಂದಿರ ಕೊಡುಗೆ ನೀಡಲಾಗಿದೆ. ಜೊತೆಗೆ 370 ವಿಧಿ ರದ್ದತಿ ಮಾಡಲಾಗಿದೆ. ಇದಕ್ಕಾಗಿ ನಮಗೆ ಮತ ನೀಡಿ’ ಎಂದರು.

ಪ್ರಜ್ವಲ್ ರೇವಣ್ಣ ಕೈ ಹಿಡಿದು ಮತಯಾಚಿಸಿದ್ದಕ್ಕೆ ಮೋದಿ ಪ್ರಶ್ನೆ ಮಾಡುತ್ತೇವೆ: ಡಿ.ಕೆ.ಶಿವಕುಮಾರ್‌

ಭ್ರಷ್ಟರ ಮೇಲೆ 5 ವರ್ಷದಲ್ಲಿ ಕಾನೂನು ಕ್ರಮ: ‘ನಾನು ಪ್ರಧಾನಿ ಹಾಗೂ ಮುಖ್ಯಮಂತ್ರಿ ಪಿಎಂ ಆಗಿದ್ದಾಗಲೂ ಯಾವುದೇ ಭ್ರಷ್ಟಚಾರ ಮಾಡಿಲ್ಲ. ಇಂದಿಗೂ ನನಗೆ ಸ್ವಂತ ಮನೆ ಇಲ್ಲ. ನನ್ನ ಬಳಿ ಸೈಕಲ್‌ ಕೂಡ ಇಲ್ಲ. ಆದರೆ ಭ್ರಷ್ಟ ಜೆಎಂಎಂ ಮತ್ತು ಕಾಂಗ್ರೆಸ್‌ನವರು ನಮ್ಮ ಮಕ್ಕಳಿಗಾಗಿ ಅಪಾರ ಸಂಪತ್ತು ಮಾಡಿದ್ದಾರೆ. ಇವರು ಇಂದು ಜೈಲು ಕೂಡ ಸೇರಿದ್ದಾರೆ.’ ಎಂದು ವಿಪಕ್ಷಗಳ ವಿರುದ್ಧ ಮೋದಿ ಹರಿಹಾಯ್ದರು. ‘ಹೀಗಾಗಿ ಜೈಲು ಸೇರಿದವರ ಪರ ಇಂದು ಇಂಡಿಯಾ ಕೂಟ ರ್‍ಯಾಲಿ ನಡೆಸುತ್ತಿದೆ. ಆದರೆ ನಮ್ಮ ಮುಂದಿನ 5 ವರ್ಷ ಅವಧಿಯಲ್ಲಿ ಇನ್ನಷ್ಟು ಭ್ರಷ್ಟರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಮೋದಿ ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು