
ನವದೆಹಲಿ(ಜು.30): ಉಡಾನ್ ಯೋಜನೆ ಮುಖಾಂತರ ಸಣ್ಣ ನಗರಗಳ ಮಧ್ಯೆ ವಿಮಾನ ಸೇವೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರ ಇದೀಗ ವಾಹನಗಳ ಮುಖಾಂತರ ಸಂಪರ್ಕಕ್ಕೆ ಅಸಾಧ್ಯವಾದ ಪ್ರದೇಶಗಳ ಮಧ್ಯೆ ವಿಮಾನ ಸೇವೆ ಉತ್ತೇಜನಕ್ಕೆ ಮುಂದಾಗಿದೆ. ಇದಕ್ಕಾಗಿ ಸಣ್ಣ ವಿಮಾನ ನಿಲ್ದಾಣಗಳ ಆರಂಭಕ್ಕೆ ಉತ್ತೇಜಿಸುವ ಕೇಂದ್ರದ ಮಸೂದೆಯೊಂದಕ್ಕೆ ಲೋಕಸಭೆ ಗುರುವಾರ ಅನುಮೋದನೆ ನೀಡಿದೆ.
ಪೆಗಾಸಸ್ ಮತ್ತು ಕೃಷಿ ಕಾಯ್ದೆಗಳ ವಿರುದ್ಧದ ವಿಪಕ್ಷಗಳ ಗದ್ದಲ ಮತ್ತು ಪ್ರತಿಭಟನೆ ವೇಳೆಯೇ ಲೋಕಸಭೆಯಲ್ಲಿ ಯಾವುದೇ ಚರ್ಚೆಗಳಿಲ್ಲದೆ ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ ಮಸೂದೆ-2021ಗೆ ಕೇಂದ್ರ ಸರ್ಕಾರ ಅನುಮೋದನೆ ಪಡೆದುಕೊಂಡಿತು.
ಈ ವೇಳೆ ಮಾತನಾಡಿದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವಿಮಾನಯಾನ ಸೇವೆಗಳನ್ನು ವಿಸ್ತರಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ