ಲೋಕಸಭೆ ಚುನಾವಣೆಗೆ ಬಿಹಾರದ ಚಂಪಾರಣದಿಂದ ಮೋದಿ ರ‍್ಯಾಲಿ ಆರಂಭ!

Published : Jan 07, 2024, 04:10 PM IST
ಲೋಕಸಭೆ ಚುನಾವಣೆಗೆ ಬಿಹಾರದ ಚಂಪಾರಣದಿಂದ ಮೋದಿ ರ‍್ಯಾಲಿ ಆರಂಭ!

ಸಾರಾಂಶ

ಚಂಪಾರಣ್‌ನ ಬೆಟ್ಟಿಯಾ ನಗರದ ರಾಮನ್ ಮೈದಾನದಲ್ಲಿ ಪ್ರಧಾನಿ ಮೋದಿ ಲೋಕಸಭೆ ಚುನಾವಣೆ ಪ್ರಚಾರ ಆರಂಭ ಹಾಗೂ ಮೊದಲ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. 

ನವದೆಹಲಿ (ಜನವರಿ 7, 2024): ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಜನವರಿ 13 ರಂದು ಬಿಹಾರದ ಚಂಪಾರಣ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ. ಚಂಪಾರಣ್‌ನ ಬೆಟ್ಟಿಯಾ ನಗರದ ರಾಮನ್ ಮೈದಾನದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. 

ಇನ್ನು, ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಬಿಹಾರದಾದ್ಯಂತ ರಸ್ತೆ ಮತ್ತು ಸೇತುವೆಗಳು ಸೇರಿದಂತೆ ವಿವಿಧ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಹಾರದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳಲ್ಲಿ ಗೆಲುವಿನ ಗುರಿ ಹೊಂದಿರುವ ಬಿಜೆಪಿ, ವ್ಯಾಪಕ ಯೋಜನೆಗಳನ್ನು ರೂಪಿಸಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಜನವರಿ ಮತ್ತು ಫೆಬ್ರವರಿಯಲ್ಲಿ ಬಿಹಾರದಲ್ಲಿ ಹಲವಾರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಕೇಂದ್ರ ಸಚಿವ ಭಗವಂತ ಖೂಬಾ

ಜನವರಿ 15 ರ ನಂತರ ಪ್ರಮುಖ ರ‍್ಯಾಲಿಗಳನ್ನು ನಿರೀಕ್ಷಿಸಲಾಗಿದ್ದು, ಮೋದಿ ರಾಜ್ಯದ ಬೇಗುಸರೈ, ಬೆಟ್ಟಿಯಾ ಮತ್ತು ಔರಂಗಾಬಾದ್‌ನಲ್ಲಿ ಮೂರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೆ, ಅಮಿತ್ ಶಾ ಜನವರಿ ಮತ್ತು ಫೆಬ್ರವರಿಯಲ್ಲಿ ಸೀತಾಮರ್ಹಿ, ಮಾಧೇಪುರ ಮತ್ತು ನಳಂದಾದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಅದೇ ರೀತಿ, ಜೆ.ಪಿ ನಡ್ಡಾ ಹಲವಾರು ಸ್ಥಳಗಳಲ್ಲಿ, ವಿಶೇಷವಾಗಿ ಸೀಮಾಂಚಲ್ ಮತ್ತು ಬಿಹಾರದ ಪೂರ್ವ ಪ್ರದೇಶಗಳಲ್ಲಿ ರ್ಯಾಲಿಗಳನ್ನು ನಡೆಸಬಹುದು. 

ಬಿಹಾರದಲ್ಲಿ ಸದ್ಯ ಬಿಜೆಪಿ ವಿರೋಧ ಪಕ್ಷದಲ್ಲಿದ್ದು, ಜೆಡಿಯು ಮಹಾಘಟಬಂಧನ್ ಸರ್ಕಾರದ ಭಾಗವಾಗಿದೆ. ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ನಂತರ ವಿರೋಧ ಪಕ್ಷದ ನಾಯಕರನ್ನು ಯಶಸ್ವಿಯಾಗಿ ಒಗ್ಗೂಡಿಸಿದ್ದಾರೆ.

ಮೂರನೇ ಬಾರಿ ಮೋದಿ ಪ್ರಧಾನಿಯಾಗಿ ವಿಶ್ವನಾಯಕರಾಗ್ತಾರೆ: ಕೆ.ಎಸ್.ಈಶ್ವರಪ್ಪ

ಕಳೆದ ಚುನಾವಣೆಯಲ್ಲಿ ಬಿಹಾರದ 40 ಲೋಕಸಭಾ ಸ್ಥಾನಗಳ ಪೈಕಿ ಎನ್‌ಡಿಎ 39 ಸ್ಥಾನಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಒಂದು ಸೀಟು ಗೆದ್ದಿತ್ತು. ನರೇಂದ್ರ ಮೋದಿಯವರು ಬಿಜೆಪಿಯ ಪ್ರಚಾರದ ನೇತೃತ್ವ ವಹಿಸಿರುವುದರಿಂದ ಪಕ್ಷವು ರಾಜ್ಯ ಸಂಘಟನೆಯನ್ನು ನಾಯಕ ಸಾಮ್ರಾಟ್ ಚೌಧರಿ ಅವರಿಗೆ ವಹಿಸಿದೆ. ಬಿಹಾರದ ರಾಜಕೀಯ ಸನ್ನಿವೇಶವು ಮಹತ್ವದ ಚುನಾವಣಾ ಹಣಾಹಣಿಗೆ ಸಜ್ಜಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!