ಜೀವಂತ ಇರುವಾಗಲೇ ಸಾವಿನ ಸುದ್ದಿ ಹರಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಸುಮಿತ್ರ ಮಹಾಜನ್

Published : Apr 24, 2021, 05:26 PM IST
ಜೀವಂತ ಇರುವಾಗಲೇ ಸಾವಿನ ಸುದ್ದಿ ಹರಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಸುಮಿತ್ರ ಮಹಾಜನ್

ಸಾರಾಂಶ

ಮಾಜಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಕುರಿತು ಸುಳ್ಳು ಸುದ್ದಿ ಭಾರಿ ಗೊಂದಲ ಸೃಷ್ಟಿಸಿತ್ತು. ಕಾಂಗ್ರೆಸ್ ನಾಯಕ ಶಶಿ ತರೂರ್ ಕೂಡ ಇದೇ ಸಾವಿನ ಸುದ್ದಿಯನ್ನು ಟ್ವೀಟ್ ಮಾಡಿ ಬಳಿಕ ಕ್ಷಮೆ ಕೇಳಿದ್ದರು. ಸುಳ್ಳು ಸುದ್ದಿ ಕುರಿತು ಸ್ಪಷ್ಟನೆ ನೀಡಿದ್ ಸುಮಿತ್ರ ಇದೀಗ ಈ ರೀತಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ನವದೆಹಲಿ(ಏ.24): ಕೊರೋನಾ ವೈರಸ್ ಕಾರಣ ಹೊರಗೆಲ್ಲೂ ಕಾಣಿಸಿಕೊಳ್ಳದೆ ಮನೆಯೊಳಗೆ ಆರಾಮಾಗಿದ್ದ ಮಾಜಿ ಲೋಕಸಭಾ ಸ್ಪೀಕರ್ ಇತ್ತೀಚೆಗೆ ಒಂದು ಕ್ಷಣ ಬೆಚ್ಚಿ ಬಿದ್ದಿದ್ದರು. ಕುಟುಂಬಸ್ಥರು, ಆಪ್ತರು, ಜನ ನಾಯಕರು ಸತತ ಕರೆಗಳನ್ನು ಮಾಡಿದ್ದರು. ಈ ವೇಳೆ ಸುಮಿತ್ರಾ ಮಹಾಜನ್ ಕುರಿತು ಸುಳ್ಳು ಸುದ್ದಿ ಹರಿದಾಡಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಸುಮಿತ್ರಾ ಮಹಾಜನ್  ಸ್ಪಷ್ಟನೆ ನೀಡಿದ್ದರು. ಪ್ರಕರಣ ಇಲ್ಲಿಗೆ ಅಂತ್ಯವಾಗಲಿಲ್ಲ. ಇದೀಗ ಸುಮಿತ್ರ ಮಹಾಜನ್ ಈ ರೀತಿ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಷ್ಟ್ರಕ್ಕೆ ನಾವೇನು ಮಾಡಬೇಕೆಂದು ಧರ್ಮ ಕಲಿಸುತ್ತದೆ: ಸುಮಿತ್ರಾ ಮಹಾಜನ್.

ಈ ರಿತಿ ಸುಳ್ಳು ಸುದ್ದಿ ಹರಡೋ ಮೂಲಕ ಜನರಲ್ಲಿ ಗೊಂದಲ ಹಾಗೂ ಭಯದ ವಾತಾವರಣ ಸೃಷ್ಟಿಸುವವರ ಕುರಿತು ಕೇಂದ್ರ ಸರ್ಕಾರ ಹಾಗೂ ಲೋಕಸಭಾ ಸ್ವೀಕರ್ ಒಮ್ ಬಿರ್ಲಾ ಚಿತ್ತ ಹರಿಸಬೇಕು ಎಂದು ಸುಮಿತ್ರ ಮಹಾಜನ್ ಹೇಳಿದ್ದಾರೆ.  ಜನರು ಯಾವುದೇ ಖಚಿತತೆ, ದೃಢೀಕರಣ ಇಲ್ಲದೆ ಸುಳ್ಳು ಸುದ್ದಿ ಹರಡಿದ್ದಾರೆ. ಕನಿಷ್ಠ ಇಂದೋರ್ ಜಿಲ್ಲಾಡಳಿತ ಬಳಿಕ ಈ ಕುರಿತು ಖಚಿತ ಪಡಿಸಿ ಮುಂದುವರಿಯಬೇಕಿತ್ತು ಎಂದು ಸುಮಿತ್ರಾ ಹೇಳಿದ್ದಾರೆ.

ಕೆಲ ಜನನಾಯಕರು ಹಾಗೂ ಮುಂಬೈನ ಸುದ್ದಿ ವಾಹಿನಿಗಳು ಯಾವುದೇ ಮಾಹಿತಿ ಇಲ್ಲದೆ ಈ ರೀತಿ ಸುಳ್ಳು ಸುದ್ದಿ ಯಾಕೆ ಹರಡಿದ್ದಾರೆ ಅನ್ನೋದು ಅರ್ಥವಾಗುತ್ತಿಲ್ಲ ಎಂದು ಸಮಿತ್ರ ಮಹಾಜನ್ ಹೇಳಿದ್ದಾರೆ. 

 

ಏಪ್ರಿಲ್ 22ರಂದು ಹಲವು ಜನಪ್ರತಿನಿದಿಗಳು, ಕಾಂಗ್ರೆಸ್ ನಾಯಕ ಶಶಿ ತರೂರ್ ಸುಮಿತ್ರಾ  ಮಹಜಾನ್ ಸಾವಿನ ಸುದ್ದಿಯನ್ನು ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಸುಮಿತ್ರಾ ಮಹಾಜನ್ ಸ್ಪಷ್ಟನೆ ನೀಡಿದ್ದರು. ಯಾವುದೇ ಖಚಿತತೆ ಇಲ್ಲದೆ ಸುಳ್ಳು ಸುದ್ದಿಯನ್ನು ಹರಡುವ ಅವಶ್ಯಕತೆ ಹಾಗೂ ಆತುರ ಏನಿತ್ತು ಎಂದು ತರೂರ್ ಹಾಗೂ ಇತರರಿಗೆ ಪ್ರಶ್ನಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!