ವಾರಣಾಸಿಯಲ್ಲಿ ಮೋದಿ ಸೋಲಿಸಲು ಇಂಡಿಯಾ ಕೂಟದ ಪ್ಲಾನ್‌

Published : Dec 21, 2023, 07:31 AM IST
ವಾರಣಾಸಿಯಲ್ಲಿ ಮೋದಿ ಸೋಲಿಸಲು ಇಂಡಿಯಾ  ಕೂಟದ ಪ್ಲಾನ್‌

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಸೋಲಿಸಲು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭಾರಿ ಯೋಜನೆ ರೂಪಿಸುತ್ತಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಸೋಲಿಸಲು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭಾರಿ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಬಿಜೆಪಿಯ ಹಳೆಯ ಸ್ನೇಹಿತ ಅಥವಾ ಹೊಸ ಮುಖವನ್ನು ಕಣಕ್ಕಿಳಿಸಲು ಕೂಡ ಯೋಜಿಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಇಂಗ್ಲಿಷ್‌ ಟೀವಿ ಚಾನೆಲ್‌ ಒಂದು ವರದಿ ಮಾಡಿದೆ.

ಮಂಗಳವಾರ ದೆಹಲಿಯಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಈ ಪ್ರಸ್ತಾವ ಇರಿಸಲಾಗಿದೆ ಎನ್ನಲಾಗಿದೆ. ಈ ಬಾರಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಬಿಜೆಪಿಯ ಮಾಜಿ ಮಿತ್ರರಾದ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅಥವಾ ಹೊಸ ಮುಖವಾದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವ ಪ್ರಸ್ತಾವ ಇರಿಸಲಾಗಿದೆ ಎಂದು ವರದಿ ಹೇಳಿದೆ.

2004ನ್ನು ಹೊರತುಪಡಿಸಿದರೆ 1991ರಿಂದಲೂ ವಾರಾಣಸಿಯಲ್ಲಿ ಬಿಜೆಪಿ ಜಯಗಳಿಸುತ್ತಿದೆ. ನಿತೀಶ್‌ ಕುಮಾರ್ ಅವರು ಈ ಹಿಂದೆ ಬಿಜೆಪಿಯ ಮೈತ್ರಿಕೂಟದಲ್ಲಿದ್ದರು. ಆದರೆ ಇದೀಗ ಮೈತ್ರಿಕೂಟವನ್ನು ತೊರೆದಿದ್ದು, ಪ್ರಧಾನಿ ಹುದ್ದೆಗೇರಲು ಅರ್ಹ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದಾರೆ. ಪ್ರಿಯಾಂಕ ಗಾಂಧಿ ಈವರೆಗೂ ಒಂದೂ ಚುನಾವಣೆಯನ್ನೂ ಎದುರಿಸಿಲ್ಲ. 2019ರಲ್ಲೇ ಇವರು ವಾರಾಣಸಿಯಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮೋದಿ ವಿರುದ್ಧ ಸ್ಪರ್ಧೆಯ ಪ್ರಶ್ನೆ ಬಂದಾಗೆಲ್ಲಾ ಪ್ರಿಯಾಂಕ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ. ಹೀಗಾಗಿ ಮೋದಿ ಅವರನ್ನು ಸೋಲಿಸಲು ಈ ಇಬ್ಬರು ನಾಯಕರಲ್ಲಿ ಒಬ್ಬರನ್ನು ಕಣಕ್ಕಿಳಿಸಲಾಗುತ್ತದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ: ಪ್ರಧಾನಿ ಮೋದಿ ವಿರುದ್ದ ಪ್ರಿಯಾಂಕಾ ಕಣಕ್ಕಿಳಿಸಲು ಯುಪಿ ಕಾಂಗ್ರೆಸ್ ಉತ್ಸುಕ!

ವಾರಣಾಸಿಯಲ್ಲಿ ಸಿದ್ಧವಾಗಲಿದೆ ಕ್ರಿಕೆಟ್ ಕಾಶಿ! ತ್ರಿಶೂಲದಂತೆ ಫ್ಲಡ್ಲೈಟ್, ಢಮರುಗದಂತೆ ಪ್ರವೇಶ ದ್ವಾರ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!