ದೇಶದಲ್ಲಿ ಒಂದೂ ಲವ್‌ ಜಿಹಾದ್‌ ಕೇಸ್‌ ಇಲ್ಲ: ಕೇಂದ್ರ

Published : Feb 05, 2020, 08:00 AM IST
ದೇಶದಲ್ಲಿ ಒಂದೂ ಲವ್‌ ಜಿಹಾದ್‌ ಕೇಸ್‌ ಇಲ್ಲ: ಕೇಂದ್ರ

ಸಾರಾಂಶ

ದೇಶದಲ್ಲಿ ಒಂದೂ ಲವ್‌ ಜಿಹಾದ್‌ ಕೇಸ್‌ ಇಲ್ಲ: ಕೇಂದ್ರ| ಲವ್‌ ಜಿಹಾದ್‌ಗೆ ಕಾನೂನು ವ್ಯಾಖ್ಯಾನ ಇಲ್ಲ

ನವದೆಹಲಿ[ಫೆ.05]: ಹಿಂದು ಅಥವಾ ಕ್ರೈಸ್ತ ಯುವತಿಯರನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಸೆಳೆದು ಮತಾಂತರಗೊಳಿಸಿ, ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವ ‘ಲವ್‌ ಜಿಹಾದ್‌’ ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕೇರಳದಲ್ಲಿ ವ್ಯಾಪಕವಾಗಿ ನಡೆಯುತ್ತಿದೆ ಎಂಬ ಹಿಂದು ಸಂಘಟನೆಗಳು, ಕ್ರೈಸ್ತ ಪಾದ್ರಿಗಳ ಆರೋಪವನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಈವರೆಗೆ ಒಂದೂ ಲವ್‌ ಜಿಹಾದ್‌ ಪ್ರಕರಣ ವರದಿಯಾಗಿಲ್ಲ ಎಂದು ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದೆ. ಅಲ್ಲದೆ, ಲವ್‌ ಜಿಹಾದ್‌ ಎಂಬುದಕ್ಕೆ ಚಾಲ್ತಿಯಲ್ಲಿರುವ ಕಾನೂನಿನಡಿ ಯಾವುದೇ ವ್ಯಾಖ್ಯಾನ ಇಲ್ಲ ಎಂದೂ ಸ್ಪಷ್ಟಪಡಿಸಿದೆ.

ಧರ್ಮವನ್ನು ಪ್ರತಿಪಾದಿಸಿ, ಆಚರಿಸಿ, ಪಸರಿಸುವ ಸ್ವಾತಂತ್ರ್ಯವನ್ನು ಸಂವಿಧಾನದ 25ನೇ ಪರಿಚ್ಛೇದ ನೀಡುತ್ತದೆ. ಇದೇ ವಾದವನ್ನು ಕೇರಳದ ಹೈಕೋರ್ಟ್‌ ಸೇರಿದಂತೆ ವಿವಿಧ ನ್ಯಾಯಾಲಯಗಳು ಕೂಡ ಎತ್ತಿ ಹಿಡಿದಿವೆ. ಚಾಲ್ತಿಯಲ್ಲಿರುವ ಕಾನೂನುಗಳಲ್ಲಿ ‘ಲವ್‌ ಜಿಹಾದ್‌’ ಎಂಬ ಪದದ ವ್ಯಾಖ್ಯೆ ಇಲ್ಲ. ಅಂತಹ ಒಂದು ಪ್ರಕರಣವೂ ವರದಿಯಾಗಿಲ್ಲ ಎಂದು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್‌ ರೆಡ್ಡಿ ತಿಳಿಸಿದ್ದಾರೆ.

ಕೇರಳದಲ್ಲಿ ಎರಡು ಅಂತರಧರ್ಮೀಯ ವಿವಾಹ ನಡೆದಿದ್ದು, ಅವುಗಳ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್