
ನವದೆಹಲಿ(ಜೂ.20): ಕೊರೋನಾ ವೈರಸ್ 2ನೇ ಅಲೆ ನಿಯಂತ್ರಿಸುವಲ್ಲಿ ತಕ್ಕಮಟ್ಟಿಗೆ ಯಶಸ್ವಿಯಾಗಿರುವ ಭಾರತಕ್ಕೆ ಇದೀಗ ಭೂಕಂಪನ ಭೀತಿ ಆವರಿಸಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಪಂಜಾಬಿ ಭಾಗ್ ವಲಯಗಳಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆಯ ಭೂಕಂಪನ ದಾಖಲಾಗಿದೆ.
ವಿಜಯಪುರದ ಹಲವೆಡೆ ಭೂಕಂಪನದ ಅನುಭವ...
ಮಧ್ಯಾಹ್ನ 12.02 ಗಂಟೆಗೆ ಭೂಮಿ ಲಘುವಾಗಿ ಕಂಪಿಸಿದೆ. ಪಂಜಾಬಿ ಭಾಗ್ ವಲಯ ಭೂಕಂಪದ ಕೇಂದ್ರಬಿಂದವಾಗಿದೆ. 28.67 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 77.14 ಡಿಗ್ರಿ ಪೂರ್ವ ರೇಖಾಂಶದಲ್ಲಿ ಭೂಮಿ ಕಂಪಿಸಿದೆ. ಸುಮಾರು 7 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ.
ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭಸಿಲ್ಲ. ದೆಹಲಿಯ ಪಂಜಾಬಿ ಭಾಗ್ ಜನ ಭೂಕಂಪನದಿಂದ ಮನಯಿಂದ ಹೊರಗೋಡಿದ್ದಾರೆ. ಕೊರೋನಾ ಸಂಕಷ್ಟದ ನಡುವೆ ಭೂಕಂಪನ ಸಂಭವಿಸಿರುವುದು ಜನರನ್ನು ಮತ್ತಷ್ಟು ಆತಂಕಕ್ಕೀಡುಮಾಡಿದೆ.
ಚೀನಾ-ಮಯನ್ಮಾರ್ ಗಡಿಯಲ್ಲಿ ಭೂಕಂಪನ, ಮೂವರ ಸಾವು
ಇಂದು ಬೆಳಗ್ಗೆ ಈಶಾನ್ಯ ರಾಜ್ಯಗಳಲ್ಲೂ ಲಘು ಭೂಕಂಪನ ಸಂಭವಿಸಿದೆ. ಅರುಣಾಚಲದಲ್ಲಿ 3.1 ಹಾಗೂ ಮಣಿಪುರದಲ್ಲಿ 3.6 ರಷ್ಟು ತೀವ್ರತೆ ಲಘು ಭೂಕಂಪ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ