ಆಪ್‌ಗೆ ಬಹುಮತ: ವಿಧಾನಸಭೆ ವಿಸರ್ಜಿಸಿದ ಲೆ. ಗವರ್ನರ್!

Suvarna News   | Asianet News
Published : Feb 11, 2020, 03:06 PM IST
ಆಪ್‌ಗೆ ಬಹುಮತ: ವಿಧಾನಸಭೆ ವಿಸರ್ಜಿಸಿದ ಲೆ. ಗವರ್ನರ್!

ಸಾರಾಂಶ

ದೆಹಲಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭ| ಕ್ಷಣಕ್ಷಣಕ್ಕೂ ಬದಲಾಗುತ್ತಿರುವ ಮುನ್ನಡೆ ಅಂಕಿ ಅಂಶ| ಆಪ್ 62, ಬಿಜೆಪಿ 08, ಕಾಂಗ್ರೆಸ್ ಶೂನ್ಯ ಸ್ಥಾನದಲ್ಲಿ ಮುನ್ನಡೆ| 6ನೇ ವಿಧಾನಸಭೆ ವಿಸರ್ಜಿಸಿದ ದೆಹಲಿ ಲೆ. ಗವರ್ನರ್| ಲೆ.ಗವರ್ನರ್ ಅನಿಲ್ ಬೈಜಾಲ್ ಅವರಿಂದ ಪ್ರಸ್ತುತ ವಿಧಾನಸಭೆ ವಿಸರ್ಜನೆ| 7ನೇ ವಿಧಾನಸಭೆ ರಚನೆಗೆ ಹೊಸ ಆದೇಶ ಹೊರಡಿಸಲಿರುವ ಲೆ. ಗವರ್ನರ್|

ನವದೆಹಲಿ(ಫೆ.11): ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆಡಳಿತಾರೂಢ ಆಪ್ ಮುನ್ನಡೆ ಕಾಯ್ದುಕೊಂಡಿದೆ. ಇದುವರೆಗೂ ಬಂದ ಅಂಕಿ ಅಂಶಗಳ ಪ್ರಕಾರ ಆಪ್ 62, ಬಿಜೆಪಿ 08, ಕಾಂಗ್ರೆಸ್ ಶೂನ್ಯ ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

ಇನ್ನು ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ, ಲೆ.ಗವರ್ನರ್ ಅನಿಲ್ ಬೈಜಾಲ್ ಪ್ರಸ್ತುತ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.

ದೆಹಲಿಯಲ್ಲಿ ಕಮಾಲ್ ಮಾಡ್ತಾರಾ ಕೇಜ್ರಿ?

ದೆಹಲಿಯ 6ನೇ ವಿಧಾನಸಭೆಯನ್ನು ವಿಸರ್ಜಿಸಿರುವ ಲೆ.ಗವರ್ನರ್ ಅನಿಲ್ ಬೈಜಾಲ್, ಪೂರ್ಣ ಫಲಿತಾಂಶ ಬಂದ ಬಳಿಕ 7ನೇ ವಿಧಾನಸಭೆ ರಚನೆಗೆ ಹೊಸ ಆದೇಶ ಹೊರಡಿಸಲಿದ್ದಾರೆ ಎನ್ನಲಾಗಿದೆ.

ಮತ್ತೆ ಸಮೀಕರಣ ಬದಲು: ಆಪ್ ಪಾಳೆಯದಲ್ಲಿ ಸಂತಸ, ಬಿಜೆಪಿ ಪಾಳೆಯದಲ್ಲಿ ಆತಂಕ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ