'ಕುಂಭ ಮೇಳ ಹರಿವ ನೀರಲ್ಲಿ ನಡೆಯುತ್ತೆ, ಕೊರೋನಾ ಬರಲ್ಲ!'

Published : Apr 15, 2021, 10:03 AM IST
'ಕುಂಭ ಮೇಳ ಹರಿವ ನೀರಲ್ಲಿ ನಡೆಯುತ್ತೆ, ಕೊರೋನಾ ಬರಲ್ಲ!'

ಸಾರಾಂಶ

ಕುಂಭ ಮೇಳ ಹರಿವ ನೀರಲ್ಲಿ ನಡೆಯುತ್ತೆ, ಕೊರೋನಾ ಬರಲ್ಲ| ಗಂಗಾಮಾತೆಯ ಆಶೀರ್ವಾದವೂ ಇದೆ| ಉತ್ತರಾಖಂಡ ಮುಖ್ಯಮಂತ್ರಿ ರಾವತ್‌ ‘ಸ್ಪಷ್ಟನೆ’

ಹರಿದ್ವಾರ(ಏ.15): ಹಾಸ್ಯಾಸ್ಪದ ಹೇಳಿಕೆಗಳಿಂದ ಇತ್ತೀಚೆಗೆ ತೀವ್ರ ಟೀಕೆಗೆ ಗುರಿಯಾಗಿದ್ದ ಉತ್ತರಾಖಂಡ ಮುಖ್ಯಮಂತ್ರಿ ತೀರ್ಥಸಿಂಗ್‌ ರಾವತ್‌, ‘ಕುಂಭಮೇಳ ಹರಿವ ನದಿಯಲ್ಲಿ ನಡೆಯುವಂಥದ್ದು. ಇಲ್ಲಿ ಕೊರೋನಾ ಬರುವುದಿಲ್ಲ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಈ ಬಗ್ಗೆ ಬುಧವಾರ ಹೇಳಿಕೆ ನೀಡಿದ ರಾವತ್‌, ‘ತಬ್ಲೀಘಿ ಜಮಾತ್‌ ಕಳೆದ ವರ್ಷ ದಿಲ್ಲಿಯಲ್ಲಿ ನಡೆಸಿದ ಧರ್ಮಸಭೆ ಒಳಾಂಗಣದಲ್ಲಿ ನಡೆದಿದ್ದು. ಒಂದೇ ಹಾಲ್‌ನಲ್ಲಿ ಜನರು ಅಕ್ಕಪಕ್ಕ ಮಲಗಿದರು. ಹೊದಿಕೆಗಳನ್ನು ಹಂಚಿಕೊಂಡರು. ಆದರೆ ಕುಂಭ ಹಾಗಲ್ಲ. ಹರಿದ್ವಾರದಿಂದ ಹೃಷಿಕೇಶ, ನೀಲಕಂಠದವರೆಗೆ 16 ಘಾಟ್‌ (ತೀರ)ಗಳಲ್ಲಿ ನಡೆಯುತ್ತಿದೆ. ಜನರು ಒಂದು ಕಡೆ ಸೇರದೆ ವಿವಿಧೆಡೆ ಸ್ನಾನ ಮಾಡುತ್ತಾರೆ. ಮೇಲಾಗಿ, ಇಲ್ಲಿನ ನೀರಿನ ಹರಿವಿನಲ್ಲಿ ಗಂಗಾಮಾತೆಯ ಆಶೀರ್ವಾದವಿದೆ. ಇಲ್ಲಿ ಕೊರೋನಾ ಬರಲ್ಲ’ ಎಂದಿದ್ದಾರೆ.

ಕೊರೋನಾ ತಾರಕಕ್ಕೇರುವ ಸಂದರ್ಭದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಉತ್ತರಾಖಂಡದ ಹರಿದ್ವಾರ, ಹೃಷಿಕೇಶ ಮೊದಲಾದ ಕಡೆ ಕುಂಭಮೇಳ ನಡೆಸುತ್ತಿರುವುದಕ್ಕೆ ವ್ಯಾಪಕ ಟೀಕೆಗಳು ಕೇಳಿಬಂದಿವೆ. 1000ಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳೂ ಕುಂಭದಲ್ಲಿ ದಾಖಲಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!