ಕಾರ್ಮಿಕರು ಸತ್ತಿದ್ದಾರೆಂದು ಸರ್ಟಿಫಿಕೇಟ್‌ ಸೃಷ್ಟಿಸಿ 1 ಕೋಟಿ ಪರಿಹಾರ ಪಡೆದ ಪಂಚಾಯ್ತಿ ಅಧಿಕಾರಿಗಳು!

Published : Jun 22, 2023, 01:47 PM ISTUpdated : Jun 22, 2023, 01:48 PM IST
ಕಾರ್ಮಿಕರು ಸತ್ತಿದ್ದಾರೆಂದು ಸರ್ಟಿಫಿಕೇಟ್‌ ಸೃಷ್ಟಿಸಿ 1 ಕೋಟಿ ಪರಿಹಾರ ಪಡೆದ ಪಂಚಾಯ್ತಿ ಅಧಿಕಾರಿಗಳು!

ಸಾರಾಂಶ

ಬದುಕಿರುವ ಕಾರ್ಮಿಕರು ಸತ್ತಿದ್ದಾರೆ ಎಂದು ಘೋಷಿಸುವ ಮೂಲಕ ಅವರ ಅಂತ್ಯಕ್ರಿಯೆಯ ಉದ್ದೇಶಕ್ಕಾಗಿ ಅಧಿಕಾರಿಗಳು ಸರ್ಕಾರದ ಹಣಕಾಸಿನ ನೆರವನ್ನು ದುರುಪಯೋಗಪಡಿಸಿಕೊಂಡ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ.  

ಭೋಪಾಲ್‌ (ಜೂ.22): ಹೆಣದ ಮೇಲೆ ರಾಜಕಾರಣ ಮಾಡಿರೋದನ್ನ ಕಂಡಿದ್ದೇವೆ. ಆದರೆ, ಬದುಕಿರುವ ಕಾರ್ಮಿಕರನ್ನು ಸತ್ತಿದ್ದಾರೆ ಎನ್ನುವ ಫೇಕ್‌ ಸರ್ಟಿಫಿಕೇಟ್‌ಅನ್ನು ರಚಿಸಿ, ಅವರ ಅಂತ್ಯಕ್ರಿಯೆಗೆ ಉದ್ದೇಶಕ್ಕಾಗಿ ಅಧಿಕಾರಿಗಳು ಸರ್ಕಾರದ ಹಣಕಾಸಿನ ನೆರವನ್ನು ದುರುಪಯೋಗಪಡಿಸಿಕೊಂಡ ಘಟನೆ ನಡೆದಿದೆ. ಮಧ್ಯಪ್ರದೇಶದ ಸರ್ಕಾರ, ಅಸಂಘಟಿತ ವಲಯದ ಕಾರ್ಮಿಕರು ನಿಧನರಾದಲ್ಲಿ ಅವರ ಅಂತ್ಯಕ್ರಿಯೆಯ ಉದ್ದೇಶಕ್ಕಾಗಿ ಹಣಕಾಸಿನ ನೆರವನ್ನು ನೀಡುತ್ತದೆ. ಪಂಚಾಯ್ತಿ ಅಧಿಕಾರಿಗಳು ಬರೋಬ್ಬರಿ 26 ಕಾರ್ಮಿಕರು ಶಿವಪುರಿಯಲ್ಲಿ ಸತ್ತಿದ್ದಾರೆ ಎನ್ನುವ ಫೇಕ್‌ ದಾಖಲೆ ಸೃಷ್ಟಿಸಿ ಅವರ ಅಂತ್ಯಕ್ರಿಯೆಯ ಖರ್ಚಿಗಾಗಿ ಅಂದಾಜು 1 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ಪಡೆದು ಮೋಜುಮಸ್ತಿ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಪುರಿ ಜನಪದ್‌ ಪಂಚಾಯತ್‌ನ ಐವರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು ಮಾಡಲಾಗಿದೆ. ಮಧ್ಯಪ್ರದೇಶದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡುವ ಅಂತ್ಯಕ್ರಿಯೆ ಹಣಕಾಸಿನ ನೆರವಿನಲ್ಲಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಜೀವಂತ ಕೂಲಿ ಕಾರ್ಮಿಕರು ಸತ್ತಿದ್ದಾರೆ ಎಂದು ದಾಖಲೆ ಸೃಷ್ಟಿಸಿ ಈ ಐವರು ಸರ್ಕಾರದ ನಿಧಿಯಿಂದ 93.56 ಲಕ್ಷ ರೂಪಾಯಿ ಪಡೆದುಕೊಂಡಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯ ತನಿಖಾ ವರದಿಯಲ್ಲಿ ಅಧಿಕಾರಿಗಳು 26 ಫಲಾನುಭವಿಗಳ ಹೆಸರುಗಳ ಪಟ್ಟಿಯನ್ನು ಇದರಲ್ಲಿ ಬಳಸಿಕೊಂಡಿರುವುದು ಬಯಲಾಗಿದೆ. ಜಿಲ್ಲೆಯ ಇಬ್ಬರು ಸಿಇಒಗಳ ಡಿಜಿಟಲ್ ಸಹಿ ಬಳಸಿ ಮೊತ್ತವನ್ನು ಸರ್ಕಾರದಿಂದ ಪಡೆಯಲಾಗಿದೆ. ಸಂಬಂಧಪಟ್ಟ ಶಾಖೆಯ ಇಬ್ಬರು ಮಹಿಳಾ ಗುಮಾಸ್ತರು ಸಹ ಈ ವಿಷಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

PSI Scam: ಅಕ್ರಮವೆಸಗಿದ 52 ಆರೋಪಿಗಳಿಗೆ ಪೊಲೀಸ್‌ ನೇಮಕಾತಿಯಿಂದ ಶಾಶ್ವತ ನಿಷೇಧ

ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಂಪ್ಯೂಟರ್ ಆಪರೇಟರ್, ಇಬ್ಬರು ಜಿಲ್ಲಾ ಸಿಇಒಗಳು ಮತ್ತು ಇಬ್ಬರು ಮಹಿಳಾ ಗುಮಾಸ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಶಿವಪುರಿ ಜಿಲ್ಲೆಯ ಪ್ರಸ್ತುತ ಸಿಇಒ ಗಿರಿರಾಜ್ ಶರ್ಮಾ ಅವರು ಪೊಹ್ರಿ ಜಿಲ್ಲೆಯ ಸಿಇಒ ಗಗನ್ ಬಾಜ್‌ಪೇಯ್ ವಿರುದ್ಧ ಕೊತ್ವಾಲಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ, ಜೊತೆಗೆ ರಾಜೀವ್ ಮಿಶ್ರಾ (ಮುರಾರ್ ಗ್ವಾಲಿಯರ್‌ನಲ್ಲಿ ನಿಯೋಜನೆಗೊಂಡಿದ್ದಾರೆ), ಶೈಲೇಂದ್ರ ಪರ್ಮಾರ್, ಆಗಿನ ಕಂಪ್ಯೂಟರ್ ಆಪರೇಟರ್ ಮತ್ತು ಕ್ಲೆರಿಕಲ್ ವರ್ಗ-III ಸಾಧನಾ ಚೌಹಾಣ್ ಮತ್ತು ಲತಾ ದುಬೆ (ಬ್ರಾಂಚ್ ಇನ್‌ಚಾರ್ಜ್) ದೂರು ದಾಖಲಾಗಿದೆ.

‘ಹೆಣದ ಮೇಲೆ ಹಣ’ ಮಾಡಿ​ದ ಹಗರಣವೂ ತನಿಖೆಗೆ: ಸಚಿವ ಪ್ರಿಯಾಂಕ್‌ ಖರ್ಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು