
ನಾಗಪುರ(ಡಿ.29): ಬೆಳಗಾವಿ ಸೇರಿ ಪ್ರಮುಖ ನಗರಗಳು ಮತ್ತು 865 ಹಳ್ಳಿಗಳು ತಮ್ಮದೆಂದು ವಾದಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ ಕರ್ನಾಟಕದ ಜೊತೆಗೆ ಗಡಿ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸರ್ಕಾರ, ಇದೀಗ ಕೃಷ್ಣಾ ನದಿಗೆ ಕಟ್ಟಲಾಗಿರುವ ಆಲಮಟ್ಟಿ ಆಣೆಕಟ್ಟಿ ವಿಷಯವನ್ನೂ ಸುಪ್ರೀಂಕೋರ್ಟ್ಗೆ ಕೊಂಡೊಯ್ಯುವ ಬೆದರಿಕೆ ಹಾಕಿದೆ.
ಈ ಕುರಿತು ಬುಧವಾರ ವಿಧಾನಸಭೆಗೆ ಮಾಹಿತಿ ನೀಡಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಆಲಮಟ್ಟೆ ಅಣೆಕಟ್ಟಿನ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಎತ್ತರಿಸುವುದರಿಂದ ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಮೇಲೆ ಆಗುವ ಪರಿಣಾಮಗಳ ಅಧ್ಯಯನಕ್ಕೆ ನಂದಕುಮಾರ್ ವದೆರ್ನಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. 2020ರಲ್ಲಿ ವರದಿ ಸಲ್ಲಿಸಿದ್ದ ಸಮಿತಿಯು ಆಣೆಕಟ್ಟು ಎತ್ತರದಿಂದ ಯಾವುದೇ ತೊಂದರೆ ಇಲ್ಲ ಎಂದು ಹೇಳಿತ್ತು.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ, ಎಚ್ಕೆಪಿ
ಆದರೆ 2021ರಲ್ಲಿ ಸಮಿತಿಯ ಅಧ್ಯಕ್ಷ ವದೆರ್ನಾ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದು, ಕರ್ನಾಟಕ ಸರ್ಕಾರ ಚೆಕ್ಡ್ಯಾಮ್ ಕಟ್ಟುವ ವಿಷಯ ಸಮಿತಿಗೆ ಗೊತ್ತಿರಲಿಲ್ಲ. ಒಂದು ವೇಳೆ ಚೆಕ್ಡ್ಯಾಂ ನಿರ್ಮಾಣವಾದರೆ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಪ್ರವಾಹ ಕಾಣಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಹೀಗಾಗಿ ಹೊಸದಾಗಿ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ. ಆ ಸಮಿತಿ ವರದಿ ನೀಡುವವರೆಗೂ ಕರ್ನಾಟಕ ಸರ್ಕಾರ ಆಣೆಕಟ್ಟಿನ ಎತ್ತರ ಹೆಚ್ಚಿಸುವ ಕಾಮಗಾರಿ ಸ್ಥಗಿತ ಮಾಡಬೇಕು. ಇಲ್ಲದೆ ಹೋದಲ್ಲಿ ಈ ಬಗ್ಗೆ ನಾವು ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಫಡ್ನವೀಸ್ ಬುಧವಾರ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ