ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಮಹಾರಾಷ್ಟ್ರ ಬಿಜೆಪಿ ಶಾಸಕರ ಧರಣಿ

Published : Dec 09, 2023, 07:49 PM IST
ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಮಹಾರಾಷ್ಟ್ರ ಬಿಜೆಪಿ ಶಾಸಕರ ಧರಣಿ

ಸಾರಾಂಶ

ಮಹಾರಾಷ್ಟ್ರ ವಿಧಾನಸಭೆ ಮೆಟ್ಟಿಲುಗಳ ಮೇಲೆ ಜಮಾಯಿಸಿದ ಹಲವು ಬಿಜೆಪಿ ಶಾಸಕರು, ಪ್ರಿಯಾಂಕ್‌ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಪ್ರಿಯಾಂಕ್‌ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.  

ನಾಗಪುರ(ಡಿ.09):  ಅನುಮತಿ ದೊರೆತರೆ ವಿ.ಡಿ.ಸಾವರ್ಕರ್‌ ಅವರ ಭಾವಚಿತ್ರವನ್ನು ಕರ್ನಾಟಕ ವಿಧಾನಸಭೆಯಿಂದ ತೆರವುಗೊಳಿಸಲಾಗುವುದು ಎಂದು ಕಾಂಗ್ರೆಸ್‌ ನಾಯಕ ಹಾಗೂ ಕರ್ನಾಟಕ ಸಚಿವ ಪ್ರಿಯಾಂಕ್‌ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರ ಬಿಜೆಪಿ ಶಾಸಕರು ರಾಜ್ಯ ವಿಧಾನಸಭೆಯ ಹೊರಗೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಿಧಾನಸಭೆ ಮೆಟ್ಟಿಲುಗಳ ಮೇಲೆ ಜಮಾಯಿಸಿದ ಹಲವು ಬಿಜೆಪಿ ಶಾಸಕರು, ಪ್ರಿಯಾಂಕ್‌ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಪ್ರಿಯಾಂಕ್‌ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.

ಸಾವರ್ಕರ್‌ ಫೋಟೋ ತೆಗೆಸುವ ಪ್ರಿಯಾಂಕ್‌ ಹೇಳಿಕೆಗೆ ಸ್ಪೀಕರ್‌ ಬೇಸರ

‘ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಸಾವರ್ಕರ್‌ ಭಾವಿಚಿತ್ರವನ್ನು ವಿಧಾನಸಭೆಯಿಂದ ತೆರವುಗೊಳಿಸುವುದು ಸೂಕ್ತವಾಗಿದೆ. ಅನುಮತಿ ನೀಡಿದರೆ ತೆರವುಗೊಳಿಸುತ್ತೇನೆ’ ಎಂದು ಪ್ರಿಯಾಂಕ್‌ ಖರ್ಗೆ ಗುರುವಾರ ಹೇಳಿದ್ದರು. ‘ಸಾವರ್ಕರ್‌ ಬಗೆಗಿನ ನನ್ನ ಪ್ರಶ್ನೆಗಳಿಗೆ ಉತ್ತರಿಸಿ ನಂತರ ಅವರ ಚಿತ್ರವನ್ನು ವಿಧಾನಸಭೆಯಲ್ಲಿ ಹಾಕಲಿ’ ಎಂದೂ ಅವರು ಬಿಜೆಪಿಗೆ ಸವಾಲೆಸೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Maharashtra Municipal Corporation Results: ಬಿಎಂಸಿಯಲ್ಲಿ ಬಹುಮತದ ಗಡಿ ದಾಟಿದ ಮಹಾಯುತಿ, ಠಾಕ್ರೆ ಸರ್ಕಾರ್‌ ಅಧಿಕಾರ ಅಂತ್ಯ!
ಅಳಿಯನಿಗೆ ರಾಜ ಮರ್ಯಾದೆ: 158 ಬಗೆಯ ಭಕ್ಷ್ಯ ಸಿದ್ಧಪಡಿಸಿ ಬಡಿಸಿದ ಆಂಧ್ರದ ಕುಟುಂಬ