ದಯವಿಟ್ಟು ಇದೊಂದು ಸಹಾಯ ಮಾಡಿ, ಕೇಂದ್ರಕ್ಕೆ ಮಹಾ ಮೊರೆ

Published : Apr 14, 2021, 10:22 PM ISTUpdated : Apr 14, 2021, 10:23 PM IST
ದಯವಿಟ್ಟು ಇದೊಂದು ಸಹಾಯ ಮಾಡಿ, ಕೇಂದ್ರಕ್ಕೆ ಮಹಾ ಮೊರೆ

ಸಾರಾಂಶ

ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿಕೊಂಡ  ಮಹಾ ಸಿಎಂ/ ಕೊರೋನಾ ನಿಯಂತ್ರಣಕ್ಕೆ ವಾಯು ಸೇನೆಯ ಸಹಕಾರ ಬೇಕಿದೆ/ ವಾಯು ಸೇನೆ ವಿಮಾನ ಕಳಿಸಿಕೊಡಿ/ ಅಕ್ಸಿಜನ್ ಸಮಸ್ಯೆ ಬಗೆಹರಿಲೇಬೇಕಿದೆ

ಮುಂಬೈ (ಏ. 14) ಮಹಾರಾಷ್ಟ್ರದಲ್ಲಿ ಕೊರೋನಾ ರುದ್ರತಾಂಡವವಾಡುತ್ತಿದೆ. ಪುಣೆ ಮತ್ತು ಮುಂಬೈ ಪರಿಸ್ಥಿತಿ ಚಿಂತಾಜನಕವಾಗಿದೆ. ಅಘೋಷಿತ  ಲಾಕ್ ಡೌನ್ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಸರ್ಕಾರ ಯಾವುದೇ ರೀತಿಯ ಕ್ರಮ ತೆಗೆದುಕೊಂಡರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದೆಲ್ಲದರ ನಡುವೆ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ವೆಲ್ ಡನ್ ಮೋದಿಜಿ ಎಂದ ಕಾಂಗ್ರೆಸ್

ಕೊರೋನಾ ಪರಿಸ್ಥಿತಿ ನಿಯಂತ್ರಿಸಲು ಆಕ್ಸಿಜನ್ ಅಗತ್ಯವಿದ್ದು ಭಾರತೀಯ ವಾಯುಸೇನೆಗ ಸಹಕಾರ ಬೇಕಿದೆ.    ಸಂಕಷ್ಟದ ಸಂದರ್ಭದಲ್ಲಿ ವಾಯುಸೇನೆ ನೆರವು ಬೇಕಿದೆ ಎಂದು ಠಾಕ್ರೆ ಕೇಳಿಕೊಂಡಿದ್ದಾರೆ. 

ವಾಯುಸೇನೆಯ ವಿಮಾನಗಳ ಮೂಲಕ ಅಗತ್ಯವಿದ್ದಕಡೆ ಆಕ್ಸಿಜನ್ ಕಳಿಸಿಕೊಡಬಹುದು. ದಯವಿಟ್ಟು ಈ ಬಗ್ಗೆ ಗಮನ ನೀಡಬೇಕು ಎಂದು  ಮೋದಿ ಬಳಿ  ಕೇಳಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಮಂಗಳವಾರ 60,212 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದರೆ, ಮುಂಬೈನಲ್ಲಿ 7,898 ಹೊಸ ಪ್ರಕರಣಗಳು ಮತ್ತು 26 ಸಾವುಗಳು ದಾಖಲಾಗಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ