ಮಹಾರಾಷ್ಟ್ರದಲ್ಲಿ 48 ದಿನದ ಬಳಿಕ 30,000ಕ್ಕಿಂತ ಕೆಳಗಿಳಿದ ಕೇಸ್‌!

Published : May 19, 2021, 12:43 PM ISTUpdated : May 19, 2021, 12:56 PM IST
ಮಹಾರಾಷ್ಟ್ರದಲ್ಲಿ 48 ದಿನದ ಬಳಿಕ 30,000ಕ್ಕಿಂತ ಕೆಳಗಿಳಿದ ಕೇಸ್‌!

ಸಾರಾಂಶ

* ಕಳೆದ ಹಲವು ದಿನಗಳ ಬಳಿಕ ಸೋಂಕು ಇಳಿಕೆ * ಮಹಾರಾಷ್ಟ್ರದಲ್ಲಿ ಇದೇ ಮೊಟ್ಟಮೊದಲ ಬಾರಿಗೆ ಸೋಮವಾರ 26,616 ಮಂದಿಗೆ ಸೋಂಕು ದೃಢ * ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ನಿನ್ನೆ ಕೇವಲ 4526 ಮಂದಿ(ಪಾಸಿಟಿವಿಟಿ ದರ ಶೇ.8.42ಕ್ಕೆ ಕುಸಿತ)ಗೆ ಸೋಂಕು ದೃಢ

ನವದೆಹಲಿ(ಮೇ.19): ಕಳೆದ ಹಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸೋಂಕು ದಾಖಲಾಗುತ್ತಿದ್ದ ಮಹಾರಾಷ್ಟ್ರದಲ್ಲಿ ಇದೇ ಮೊಟ್ಟಮೊದಲ ಬಾರಿಗೆ ಸೋಮವಾರ 26,616 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಮಾ.30ರ ಬಳಿಕ ಅಂದರೆ 48 ದಿನಗಳ ಬಳಿಕ ಇದೇ ಮೊಟ್ಟಮೊದಲ ಬಾರಿಗೆ ಮಹಾರಾಷ್ಟ್ರದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆ ದಾಖಲಾದಂತಾಗಿದೆ.

ಇದೇ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ನಿನ್ನೆ ಕೇವಲ 4526 ಮಂದಿ(ಪಾಸಿಟಿವಿಟಿ ದರ ಶೇ.8.42ಕ್ಕೆ ಕುಸಿತ)ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ಏ.5ರ ಬಳಿಕ ಅಂದರೆ 42 ದಿನಗಳ ಬಳಿಕ ದಾಖಲಾದ ಅತಿ ಕನಿಷ್ಠ ದೈನಂದಿನ ಕೇಸ್‌ಗಳ ಸಂಖ್ಯೆ ಆಗಿದೆ. ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು ಕೈಗೊಂಡ ಲಾಕ್‌ಡೌನ್‌ ಸೇರಿದಂತೆ ಇನ್ನಿತರ ಕಠಿಣ ಕ್ರಮಗಳಿಂದಾಗಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎನ್ನಲಾಗಿದೆ.

ಆದರೆ ದೆಹಲಿ ಕೊರೋನಾ ವೈರಸ್‌ಗೆ ಬಲಿಯಾಗುವವರ ಸಂಖ್ಯೆ ಮಾತ್ರ ಸುಧಾರಣೆಯಾಗುವ ಸಾಧ್ಯತೆ ಕಂಡುಬರುತ್ತಿಲ್ಲ. ನಿನ್ನೆ ಮತ್ತೆ 340 ಮಂದಿ ವೈರಸ್‌ಗೆ ಬಲಿಯಾಗಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು
ಶೇ.100ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಕೇರಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು