ಕೋವಿಡ್‌ಗೆ ಪೋಷಕರ ಕಳಕೊಂಡ ಮಕ್ಕಳಿಗಾಗಿ ವಿಶೇಷ ಕಾರ್ಯಪಡೆ!

Published : May 11, 2021, 11:50 AM ISTUpdated : May 11, 2021, 03:26 PM IST
ಕೋವಿಡ್‌ಗೆ ಪೋಷಕರ ಕಳಕೊಂಡ ಮಕ್ಕಳಿಗಾಗಿ ವಿಶೇಷ ಕಾರ್ಯಪಡೆ!

ಸಾರಾಂಶ

* ಅನಾಥರಾದ ಮಕ್ಕಳ ಯೋಗಕ್ಷೇಮಕ್ಕಾಗಿ ಪ್ರತೀ ಜಿಲ್ಲೆಗೂ ಕಾರ್ಯಪಡೆ ರಚನೆ * ಮಹಾರಾಷ್ಟ್ರ ಸರ್ಕಾರದ ದಿಟ್ಟ ನಿರ್ಧಾರ * ಕಾರ್ಯಪಡೆಯಲ್ಲಿ ಪೌರ ಸಂಸ್ಥೆಗಳ ಆಯುಕ್ತರು, ಪೊಲೀಸ್‌ ಮುಖ್ಯಸ್ಥರು, ಜಿಲ್ಲೆಯ ಗ್ರಾಮೀಣ ಆರೋಗ್ಯಾಧಿಕಾರಿಗಳು

ಮುಂಬೈ(ಮೇ.11): ಕೊರೋನಾ ವೈರಸ್‌ನಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಅನಾಥರಾದ ಮಕ್ಕಳ ಯೋಗಕ್ಷೇಮಕ್ಕಾಗಿ ಪ್ರತೀ ಜಿಲ್ಲೆಗೂ ಕಾರ್ಯಪಡೆ ರಚನೆಗಾಗಿ ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.

ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವ ಈ ಕಾರ್ಯಪಡೆಯಲ್ಲಿ ಪೌರ ಸಂಸ್ಥೆಗಳ ಆಯುಕ್ತರು, ಪೊಲೀಸ್‌ ಮುಖ್ಯಸ್ಥರು, ಜಿಲ್ಲೆಯ ಗ್ರಾಮೀಣ ಆರೋಗ್ಯಾಧಿಕಾರಿಗಳು ಇರಲಿದ್ದಾರೆ. ಕೊರೋನಾದಿಂದಾಗಿ ಮಕ್ಕಳ ಪೋಷಕರು ಸಾವಿಗೀಡಾಗುತ್ತಿರುವುದರಿಂದ ಮಕ್ಕಳು ಅನಾಥರಾಗುತ್ತಿದ್ದಾರೆ. ಇದು ಹೊಸ ಸಾಮಾಜಿಕ ಸಮಸ್ಯೆಗೆ ನಾಂದಿಯಾಡುತ್ತಿದೆ.

ಹೀಗಾಗಿ ಅಂಥ ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ನೀಡುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್