ರಾಮನವಮಿಗೂ ಮೊದಲು ಗುಂಪು ಘರ್ಷಣೆ: ಪೊಲೀಸ್ ಕಾರಿಗೆ ಬೆಂಕಿ, 5 ವಾಹನಗಳು ಜಖಂ

Published : Mar 30, 2023, 11:02 AM IST
ರಾಮನವಮಿಗೂ ಮೊದಲು ಗುಂಪು ಘರ್ಷಣೆ: ಪೊಲೀಸ್ ಕಾರಿಗೆ ಬೆಂಕಿ, 5 ವಾಹನಗಳು ಜಖಂ

ಸಾರಾಂಶ

ರಾಮನವಮಿಗೆ ದಿನ ಮೊದಲು ಮಹಾರಾಷ್ಟ್ರದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಈ ಹಿಂಸಾಚಾರಲ್ಲಿ ಪೊಲೀಸ್ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಮುಂಬೈ: ಇಂದು ದೇಶಾದ್ಯಂತ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನವನ್ನು ಹಿಂದೂಗಳು ಶ್ರದ್ಧಾಭಕ್ತಿಯಿಂದ ದೇಶಾದ್ಯಂತ ಆಚರಿಸುತ್ತಿದ್ದಾರೆ. ರಾಮನವಮಿ ಹಿನ್ನೆಲೆಯಲ್ಲಿ ದೇಶಾದ್ಯಂತ ದೇಗುಲಗಳಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಮಾಡಲಾಗುತ್ತಿದೆ. ಆದರೆ ರಾಮನವಮಿಗೆ ದಿನ ಮೊದಲು ಮಹಾರಾಷ್ಟ್ರದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಈ ಹಿಂಸಾಚಾರಲ್ಲಿ ಪೊಲೀಸ್ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.  ಮುಸ್ಲಿಮರ ಪವಿತ್ರ ರಂಜಾನ್ ಮಾಸದ ಆಚರಣೆಯೂ ಇದೇ ತಿಂಗಳಲ್ಲಿ ನಡೆಯುತ್ತಿದ್ದು, ಜೊತೆ ಜೊತೆಗೆ ರಾಮನವಮಿಯೂ ಬಂದಿದೆ. ಈ ಹಿನ್ನೆಲೆಯಲ್ಲಿ ಕೋಮು ಘರ್ಷಣೆ ಸಂಭವಿಸದಂತೆ ಸ್ಥಳದಲ್ಲಿ ಭಾರಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. 

ಮಹಾರಾಷ್ಟ್ರದ (Maharashtra) ಔರಂಗಾಬಾದ್‌ನಲ್ಲಿ (Aurangabad) ನಿನ್ನೆ ಸಂಜೆ ಈ ಘರ್ಷಣೆ ನಡೆದಿದ್ದು , ಎರಡು ಗುಂಪುಗಳ ತರುಣರ ಮಧ್ಯೆ ಮಾತಿನ ಚಕಮಕಿ ನಡೆದು ಅದು ವಿಕೋಪಕ್ಕೆ ತಿರುಗಿದೆ.  ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

500 ರಿಂದ 600 ರಷ್ಟಿದ್ದ ಜನರು ಈ ಗಲಾಟೆಯಲ್ಲಿ ಭಾಗಿಯಾಗಿದ್ದು, ಪೊಲೀಸ್ ವಾಹನದ ಮೇಲೆ ದಾಳಿ ಮಾಡಿದವರು ಯಾರೆಂದು ಇನ್ನು ಗುರುತಿಸಿಲ್ಲ. ಔರಂಗಾಬಾದ್‌ನ ಕಿರದ್ಪುರದಲ್ಲಿ ಈ ಘಟನೆ ನಡೆದಿದ್ದು,  ಈ ಪ್ರದೇಶದಲ್ಲಿ ಪ್ರಸಿದ್ಧವಾದ ಶ್ರೀರಾಮನ (Ram temple) ದೇಗುಲವಿದೆ ಎಂದು ಪೊಲೀಸ್ ಕಮೀಷನರ್ (Police Commissioner) ನಿಖಿಲ್ ಗುಪ್ತಾ (Nikhil Gupta) ಹೇಳಿದ್ದಾರೆ. ಯುವಕರ ಮಧ್ಯೆ ಜಗಳ ಆರಂಭವಾದ ಬಳಿಕ ಈ ಘಟನೆ ನಡೆದಿದೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಅಂದಾಜು ಆರು ವಾಹನಗಳು ಜಖಂಗೊಂಡಿವೆ ಎಂದು ಗುಪ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಹುಲಿಹೈದರ ಇನ್ನೂ ಬೂದಿ ಮುಚ್ಚಿದ ಕೆಂಡ: ಗ್ರಾಮದಲ್ಲಿ ಸ್ಮಶಾನ ಮೌನ

ಘಟನೆಯಲ್ಲಿ ಸುಟ್ಟು ಕರಕಲಾದ ವಾಹನಗಳನ್ನು ಸ್ಥಳದಿಂದ ತೆಗೆಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ.  ಗಲಭೆಗೆ ಕಾರಣರಾದ ಆರೋಪಿಗಳ ಬಂಧನಕ್ಕಾಗಿ 10 ಪೊಲೀಸ್ ತಂಡ ರಚನೆಯಾಗಿದೆ.  ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋದಲ್ಲಿ ಸ್ಥಳೀಯ ಸಂಸ್ ಇಮ್ತಿಯಾಜ್ ಜಲೀಲ್ (Imtiyaz Jaleel) ರಾಜ್ಯ ಬಿಜೆಪಿ ಸಚಿವ ಅತುಲ್ ಸಾವೆ (Atul Save) ಹಾಗೂ ಇತರರು ಮಧ್ಯಪ್ರವೇಶಿಸಿ ಎರಡು ಗುಂಪುಗಳ ಮಧ್ಯೆ ಶಾಂತಿ ಕಾಪಾಡಲು ಯತ್ನಿಸುತ್ತಿರುವುದನ್ನು  ಕಾಣಬಹುದಾಗಿದೆ. ಘೋಷಣೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಗಲಾಟೆ ಶುರುವಾಗಿದ್ದು,  ನಂತರ ಇದುವೇ ಕಾರಣಕ್ಕೆ ನೂರಾರು ಜನ ಸ್ಥಳದಲ್ಲಿ ಸೇರಿ ಕಲ್ಲು ತೂರಾಟ ನಡೆಸಲು ಶುರು ಮಾಡಿದ್ದಾರೆ ಎಂದು ಜಲೀಲ್ ಹೇಳಿದ್ದು, ಈತ ಅಸದುದ್ದೀನ್ ಒವೈಸಿಯ (Asaduddin Owaisi) ಎಐಎಂಐಎಂ ( AIMIM party) ಪಕ್ಷದ ಸಂಸದರಾಗಿದ್ದಾರೆ. 

ಕೊಪ್ಪಳದ ಕನಕಗಿರಿ ತಾಲೂಕಿನಲ್ಲಿ ಗುಂಪು ಘರ್ಷಣೆ: ಇಬ್ಬರ ಸಾವು

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ