
ಕೊಲ್ಹಾಪುರ[ಡಿ.30]: ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಸದಾ ಹಲ್ಲು ಮಸೆಯುವ ಶಿವಸೇನೆ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡಾಟಿಕೆ ಭಾನುವಾರವೂ ಮುಂದುವರೆದಿದೆ. ಶನಿವಾರ ಕರ್ನಾಟಕ ಧ್ವಜಕ್ಕೆ ಬೆಂಕಿ ಹಾಕಿದ್ದ ಶಿವಸೇನೆ ಕಾರ್ಯಕರ್ತರು ಭಾನುವಾರ, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸುವ ಮೂಲಕ ಪುಂಡಾಟಿಕೆ ನಡೆಸಿದ್ದಾರೆ.
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸೋದೆ ನನ್ನ ಮಹದಾಸೆ ಎಂದ ಶಾಸಕ!
ಕೊಲ್ಹಾಪುರ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೊಲ್ಹಾಪುರದ ಬಸ್ ನಿಲ್ದಾಣ ಸೇರಿದಂತೆ ಇನ್ನಿತರ ಪ್ರದೇಶದಲ್ಲಿ ಸ್ವಲ್ಪ ಸಮಯದವರೆಗೆ ಉದ್ವಿಗ್ನತೆ ಉಂಟಾಯಿತು. ಅಲ್ಲದೇ ಪ್ರತಿಭಟನಾಕಾರರು. ಅಂಗಡಿ ಮುಂಗಟ್ಟುಗಳ ಮೇಲಿರುವ ಕನ್ನಡ ನಾಮಫಲಕವನ್ನು ಕಿತ್ತು ಹಾಕಿದ್ದಲ್ಲದೇ ಫಲಕ ಹಾಗೂ ಕನ್ನಡ ಧ್ವಜಕ್ಕೆ ಮಸಿ ಬಳಿದ ಬಳಿಕ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಘಟನೆಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.
ಚಿತ್ರ ಪ್ರದರ್ಶನಕ್ಕೆ ಅಡ್ಡಿ:
ಶಿವಸೇನೆ ಕಾರ್ಯಕರ್ತರು ಭಾನುವಾರ ಕೊಲ್ಹಾಪುರದ ಅಪ್ಸರಾ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ಕನ್ನಡ ಚಿತ್ರ ಅವನೇ ಶ್ರೀಮನಾರಾಯಣ್ ಚಿತ್ರವನ್ನು ಪ್ರದರ್ಶನ ಮಾಡದಂತೆ ಚಿತ್ರಮಂದಿರ ಎದುರು ಪ್ರತಿಭಟನೆ ನಡೆಸಿದರು.
ಶಿವಸೇನೆಯಿಂದ ಮತ್ತೆ ಗಡಿ ಕ್ಯಾತೆ: BSY ಸರ್ಕಾರದ ವಿರುದ್ಧ ಸಾಮ್ನಾದಲ್ಲಿ ಲೇಖನ
ಬಸ್ ರದ್ದು:
ಈ ನಡುವೆ ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಕಾವು ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯಿಂದಲೇ ಕೊಲ್ಹಾಪುರದಿಂದ ಕರ್ನಾಟಕಕ್ಕೆ ತೆರಳುವ ಎಲ್ಲಾ ಬಸ್ಗಳ ಸಂಚಾರವನ್ನು ರದ್ದುಗೊಳಿಸಲಾಯಿತು. ಮತ್ತೊಂದೆಡೆ ಬೆಳಗಾವಿ ಸಾರಿಗೆ ವಿಭಾಗದಿಂದ 46 ಬಸ್ ಹಾಗೂ ಚಿಕ್ಕೋಡಿ ಸಾರಿಗೆ ವಿಭಾಗದಿಂದ ಮಹಾರಾಷ್ಟ್ರಕ್ಕೆ ತೆರಳುವ 160 ಬಸ್ ಸಂಚಾರ ಭಾನುವಾರ ಬೆಳಗ್ಗೆಯಿಂದಲೇ ಸ್ಥಗಿತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ