
ಮುಂಬೈ(ಏ.29): ಕೊರೋನಾ ನಿಯಂತ್ರಣಕ್ಕಾಗಿ ಏ.30ರವರೆಗೆ ರಾಜ್ಯಾದ್ಯಂತ ಹೇರಲಾಗಿರುವ ಲಾಕ್ಡೌನ್ ರೀತಿಯ ನಿರ್ಬಂಧಗಳನ್ನು ಇನ್ನೂ 15 ದಿನ ವಿಸ್ತರಣೆ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಬುಧವಾರ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು, ‘ಏ.14ರಿಂದ ಏ.30ರವರೆಗೆ ರಾಜ್ಯಾದ್ಯಂತ ಹೇರಲಾದ ಲಾಕ್ಡೌನ್ನಿಂದ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟುದಿನಗಳ ಲಾಕ್ಡೌನ್ ವಿಸ್ತರಣೆಗೆ ಎಲ್ಲಾ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜನರು ಸಹ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಕೊರೋನಾವನ್ನು ಪೂರ್ತಿಯಾಗಿ ನಿಯಂತ್ರಣಕ್ಕೆ ತರಬಹುದು’ ಎಂದಿದ್ದಾರೆ.
"
ಪ್ರಸ್ತುತ ಬೆಳಗ್ಗೆ 7 ಗಂಟೆಯಿಂದ 11 ಗಂಟೆವರೆಗೆ ಅಗತ್ಯ ವಸ್ತುಗಳಾದ ತರಕಾರಿ ಅಂಗಡಿಗಳು, ಹಾಲು ಹಾಗೂ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ 5ಕ್ಕಿಂತ ಹೆಚ್ಚು ಜನ ಸೇರಲು ಮತ್ತು ಅಗತ್ಯವಲ್ಲದ ಕಾರಾರಯಚರಣೆಗಳ ಮೇಲೆ ಕಠಿಣ ನಿರ್ಬಂಧವಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ