'ಕೊರೋನಾ ಹರಡಲು ತಬ್ಲಿಘಿ ಕಾರಣ' ಕ್ಷಮೆ ಕೇಳಿದ ರಚನಾಕಾರರು

Published : Mar 19, 2021, 09:00 PM ISTUpdated : Mar 19, 2021, 09:04 PM IST
'ಕೊರೋನಾ ಹರಡಲು ತಬ್ಲಿಘಿ ಕಾರಣ'  ಕ್ಷಮೆ ಕೇಳಿದ ರಚನಾಕಾರರು

ಸಾರಾಂಶ

ಕೊರೋನಾ ಹರಡಲು ತಬ್ಲಿಘಿ ಜಮಾತ್ ಕಾರಣ/ ಮಹಾರಾಷ್ಟ್ರದ ಎಂಬಿಬಿಎಸ್ ಪಠ್ಯದಲ್ಲಿ ವಿಚಾರ/ ವಿರೋಧದ ನಂತರ ಪಠ್ಯದಿಂದ ವಿಚಾರ ತೆಗೆದು ಹಾಕಲಾಗಿದೆ/  ದೊಡ್ಡ ಚರ್ಚೆಗೆ ಕಾರಣವಾಗಿತ್ತು

ಮುಂಬೈ(ಮಾ. 19) ಮಹಾರಾಷ್ಟ್ರದ ಎಂಬಿಬಿಎಸ್ ಪಠ್ಯ ದೊಡ್ಡ ಚರ್ಚೆಗೆ ನಾಂದಿ ಹಾಡಿತ್ತು.  ಎಂಬಿಬಿಎಸ್ ಎರಡನೇ ವರ್ಷದ ಪಠ್ಯದಲ್ಲಿ ತಬ್ಲಿಘಿಗಳನ್ನು ಕೊರೋನಾ ಹರಡುವಿಕೆಗೆ ಲಿಂಕ್ ಮಾಡಲಾಗಿದ್ದು ವಿರೋಧ ವ್ಯಕ್ತವಾದ ನಂತರ ಪಠ್ಯದಿಂದ ವಿಚಾರ ಕೈಬಿಡಲಾಗಿದೆ.

'ಎಸೆನ್ ಶಿಯಲ್ಸ್ ಆಫ್ ಮೆಡಿಕಲ್ ಮೈಕ್ರೋಬಯೋಗ್ರಫಿ'  ಎಂಬ ಅಧ್ಯಾಯಕ್ಕೆ ಸಂಬಂಧಿಸಿ ಪಠ್ಯ ರಚನೆ ಮಾಡಿದ್ದವರು ಕ್ಷಮೆ ಕೇಳಿದ್ದಾರೆ. ಇಸ್ಲಾಮಿಕ್ ಆರ್ಗನೈಜೇಶನ್ ವಿದ್ಯಾರ್ಥಿಗಳು ಈ ಪಠ್ಯದ ವಿರುದ್ಧ ಪ್ರಶ್ನೆ ಎತ್ತಿದ್ದರು.  ತಬ್ಲಿಘಿ ಜಮಾತ್ ನಿಂದಲೇ ಕೊರೋನಾ ಹರಡಿತ್ತು ಎಂಬುದಕ್ಕೆ ಯಾವುದೇ ಆಧಾರ ಇಲ್ಲ. ಕಾರಣವಿಲ್ಲದೆ ಒಂದು ಸಮುದಾಯ ಗುರಿ ಮಾಡಲಾಗಿದೆ ಎಂದು ಆಕ್ಷೇಪ ಎತ್ತಿದ್ದರು.

ತಬ್ಲಿಘಿ ಜಮಾತ್ ಕೆಲಸನಿಂದಲೇ ಕೊರೋನಾ ಹರಡಿದ್ದು; ವರದಿ

ಇಷ್ಟೆಲ್ಲ ಘಟನೆಗಳ ನಂತರ ಪಠ್ಯ ರಚನೆ ಮಾಡಿದ, ಡಾ. ಅಪುರ್ಬಾ ಶಾಸ್ತ್ರಿ, ಡಾ. ಸಂಧ್ಯಾ ಭಟ್ ಕ್ಷಮೆ ಕೇಳಿದ್ದರು.  ಯಾವುದಾದರೂ ಸಮುದಾಯದ ಭಾವನೆಗೆ ಧಕ್ಕೆ ಆದರೆ ಕ್ಷಮೆ ಕೇಳುತ್ತೇವೆ ಎಂದು ಹೇಳಿದ್ದರು. ಸಲಹೆ ಪಡೆದುಕೊಂಡು ಬದಲಾವಣೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದರು. 

ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಕಳೆದ ವರ್ಷ ಹಮ್ಮಿಕೊಂಡಿದ್ದ ಧಾರ್ಮಿಕ ಸಭೆ ಕೊರೋನಾ ತೀವ್ರತೆಗೆ ಕಾರಣವಾಗಿತ್ತು ಎಂಬ ಸುದ್ದಿಯಾಗಿತ್ತು.  ಇಲ್ಲಿಂದಲೇ ದೇಶದ ಮೂಲೆ ಮೂಲೆಗೆ ಕೊರೋನಾ ರವಾನೆಯಾಗಿತ್ತು ಎಂಬ ವರದಿಗಳು ಆಗಿದ್ದವು . 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು