
ಮುಂಬೈ(ಮಾ.21): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಹಾಗೂ ರಾಜ್ಯ ಪ್ರವಾಸ ಮತ್ತು ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಅವರಿಗೆ ಶನಿವಾರ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಆದಿತ್ಯ ಠಾಕ್ರೆ, ‘ನನಗೆ ಕೊರೋನಾ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.
ಕಂಡಕಂಡವರಿಗೆ ಕೊರೋನಾ ಟೆಸ್ಟ್:
ಮಹಾರಾಷ್ಟ್ರದಲ್ಲಿ ಕೊರೋನಾ ಆತಂಕ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜನದಟ್ಟಣೆಯ ಪ್ರದೇಶಗಳಲ್ಲಿ ಜನರ ಅನುಮತಿ ಪಡೆಯದೇ ರಾರಯಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಲು ಬೃಹನ್ಮುಂಬೈ ಪಾಲಿಕೆ ತೀರ್ಮಾನಿಸಿದೆ.
ಮಾಲ್ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಂತಹ ಪ್ರದೇಶಗಳಲ್ಲಿ ಪರೀಕ್ಷೆ ಕೈಗೊಳ್ಳಲಾಗುತ್ತದೆ. ಪರೀಕ್ಷೆಗೆ ಒಳಪಡಲು ನಿರಾಕರಿಸಿದವರ ವಿರುದ್ಧ ದೂರು ದಾಖಲಿಸಲಾಗುತ್ತದೆ ಎಂದು ಬೃಹನ್ಮುಂಬೈ ಪಾಲಿಕೆ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ